ಕಸಾಪ ವಿವಿಧ ದತ್ತಿ ಪ್ರಶಸ್ತಿಗಳ ಪ್ರದಾನ ಸಮಾರಂಭ ಇಂದು
Team Udayavani, Aug 26, 2019, 3:00 AM IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆ.26ರಂದು ನಗರದಲ್ಲಿ ವಿವಿಧ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಂಜೆ 5.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ.
ಹಿರಿಯ ವಿದ್ವಾಂಸ ಡಾ.ಆರ್.ಶೇಷಶಾಸ್ತ್ರೀ ಅವರಿಗೆ “ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರೀ ವಿದ್ವತ್ ದತ್ತಿ’ ಪ್ರಶಸ್ತಿ, ಲೇಖಕಿ ಡಾ.ವೈ.ಸಿ.ಭಾನುಮತಿ ಅವರಿಗೆ “ಟಿ.ಗಿರಿಜಮ್ಮ ದತ್ತಿ’ ಪ್ರಶಸ್ತಿ ಹಾಗೂ ರಂಗ ಕಲಾವಿದೆ ಪ್ರೇಮಾ ಬದಾಮಿ ಅವರಿಗೆ “ಕಂಡ್ಲೂರು ಗಿರಿಜಮ್ಮ ಮತ್ತು ನರಸಿಂಹ ಜೋಗಿ ದತ್ತಿ’ ಪ್ರಶಸ್ತಿ ಪ್ರದಾನ ಮಾಡಲಾಗವುದು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ವಿದ್ವಾಂಸ ಟಿ.ವಿ.ವೆಂಕಟಾಚಲ ಶಾಸ್ತ್ರೀ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್, ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ, ಡಾ.ರಾಜಶೇಖರ ಹತಗುಂದಿ, ಗೌರವ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ಉಪಸ್ಥಿತರಿರಲಿದ್ದಾರೆ.