ಕಸ್ತೂರಿ ರಂಗನ್ ವರದಿ ತಿರಸ್ಕಾರ !
Team Udayavani, Dec 20, 2018, 6:00 AM IST
ಸುವರ್ಣಸೌಧ (ವಿಧಾನಪರಿಷತ್ತು): ಪಶ್ಚಿಮ ಘಟ್ಟದ ಕುರಿತಾಗಿ ಕಸ್ತೂರಿ ರಂಗನ್ ಸಮಿತಿ ವರದಿಯನ್ನು ಸಚಿವ ಸಂಪುಟದ ಉಪಸಮಿತಿಯಲ್ಲಿ ತಿರಸ್ಕರಿಸಲಾಗಿದ್ದು, ಸಚಿವ ಸಂಪುಟದ ಮುಂದೆಯೂ ವಿಷಯ ತಂದು ಅಲ್ಲಿಯೂ ವರದಿ ತಿರಸ್ಕಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆರ್.ಶಂಕರ್ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಸ್ತೂರಿ ರಂಗನ್ ವರದಿ ಅನುಷ್ಠಾನ ಕುರಿತಾಗಿ ಕೇಂದ್ರದಿಂದ ಪದೇ ಪದೇ ಒತ್ತಡ ಬರುತ್ತಿದೆ. ಆದರೆ ಅದನ್ನು ಒಪ್ಪುವ ಪ್ರಮೇಯವೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಅರಣ್ಯ ಇಲಾಖೆ ಅಡ್ಡಿ ಇದೆ ಎಂದೇ ಹೇಳಿ ತಡೆಯಾಗಿದ್ದ ಸಿಗಂದೂರು ಬಳಿಯ ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದು, ಕೇಂದ್ರ ಸಚಿವರಿಂದ ಇತ್ತೀಚೆಗೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಕೊಡಗು ಮತ್ತು ಕೇರಳ ನಡುವಿನ ಹಳೆಯದಾದ ಎರಡು ಸೇತುವೆಗಳ ಪುನರ್ ನಿರ್ಮಾಣ ಅಥವಾ ದುರಸ್ತಿಗೆ ಇಲಾಖೆಯಿಂದ ಅನುಮತಿ ನೀಡಿಕೆಗೂ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ ಮಾತನಾಡಿ, ಕಸ್ತೂರಿ ರಂಗನ್ ವರದಿಯನ್ನು ಕೇರಳ ಸರಕಾರ ಈಗಾಗಲೇ ತಿರಸ್ಕರಿಸಿದ್ದು, ಇಲ್ಲಿಯೂ ತಿರಸ್ಕಾರ ಮಾಡಬೇಕೆಂದರು. ಇದಕ್ಕೂ ಮೊದಲು ಮಾತನಾಡಿದ ಐವನ್ ಡಿಸೋಜಾ, ರಾಜ್ಯದ 10 ಜಿಲ್ಲೆ, 40 ತಾಲೂಕು, 1,576 ಗ್ರಾಮಗಳ ವ್ಯಾಪ್ತಿಯಲ್ಲಿನ ಪ್ರದೇಶವನ್ನು ಕಸ್ತೂರಿ ರಂಗನ್ ವರದಿಯಲ್ಲಿ ಪ್ರಸ್ತಾಪಿಸಲಾಗಿದ್ದು, ಶೇ.20ಕ್ಕಿಂತ ಹೆಚ್ಚು ಅರಣ್ಯ ಪ್ರದೇಶ ಹೊಂದಿದ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಿ, ಅಲ್ಲಿ ಯಾವುದೇ ಕೈಗಾರಿಕೆ, ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತಿಲ್ಲ. ದಕ್ಷಿಣ ಕನ್ನಡದ 45 ಗ್ರಾಮಗಳು ತೀವ್ರ ಸಮಸ್ಯೆ ಎದುರಿಸುವಂತಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್