ನಿಗದಿಗಿಂತ ಮೊದಲೇ ಕಾವೇರಿ ತೀರ್ಥೋದ್ಭವ


Team Udayavani, Oct 19, 2019, 3:04 AM IST

nigadiginta

ಮಡಿಕೇರಿ: ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ನಿಗದಿತ ಸಮಯಕ್ಕಿಂತ ಎರಡು ನಿಮಿಷ ಮುಂಚಿತವಾಗಿ (ಗುರುವಾರ ಮಧ್ಯರಾತ್ರಿ 12.57ಕ್ಕೆ) ದಕ್ಷಿಣ ಗಂಗೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಂಡಳು. ಭಕ್ತರು ಚಳಿಯ ನಡುವೆಯೂ ಸ್ನಾನಕೊಳಕ್ಕೆ ಧುಮುಕಿ ತೀರ್ಥವನ್ನು ಬಿಂದಿಗೆಗಳಲ್ಲಿ ಸಂಗ್ರಹಿಸಿದರು. ಭಾರೀ ಮಳೆ ಮತ್ತು ತೀರ್ಥೋದ್ಭವ ತಡರಾತ್ರಿ ಆಗಿರುವುದರಿಂದ ಭಕ್ತರ ಸಂಖ್ಯೆ ಕಡಿಮೆಯಿತ್ತು.

ಭಕ್ತರ ಮುಗಿಲು ಮುಟ್ಟಿದ ಜಯಘೋಷ, ಅರ್ಚಕ ಗಣದ ವೇದಘೋಷ, ಮಂತ್ರಪಠಣ, ಕುಂಕುಮಾರ್ಚನೆ ನಡುವೆ 12.57ಕ್ಕೆ ಸಲ್ಲುವ ರೋಹಿಣಿ ನಕ್ಷತ್ರದ ಕರ್ಕಾಟಕ ಲಗ್ನದಲ್ಲಿ ದಕ್ಷಿಣ ಗಂಗೆ ಕಾವೇರಿಯು ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದಳು. ಈ ಬಾರಿ ಮುಂಜಾನೆ 12.59ರ ವೇಳೆಗೆ ತೀರ್ಥೋದ್ಭವವಾಗಲಿದೆ ಎಂದು ಪಂಡಿತರು ಸಮಯ ನಿಗದಿ ಮಾಡಿದ್ದರು.

ಸ್ನಾನಕೊಳದ ಬಳಿ ನೂಕುನುಗ್ಗಲು ತಡೆಯಲು ಬ್ಯಾರಿಕೇಡ್‌ ವ್ಯವಸ್ಥೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಪ್ಲಾಸ್ಟಿಕ್‌ ಕೊಡ, ಪ್ಲಾಸ್ಟಿಕ್‌ ಬಾಟಲ್‌ನಲ್ಲಿ ತೀರ್ಥ ಕೊಂಡೊಯ್ಯಲು ಅವಕಾಶ ನೀಡಿರಲಿಲ್ಲ. ಮತ್ತೂಂದೆಡೆ ಭಾಗಮಂಡಲ ದೇವಾಲಯದ ತಕ್ಕಮುಖ್ಯಸ್ಥ ಬಳ್ಳಡ್ಕ ಅಪ್ಪಾಜಿ, ಕೋಡಿ ಮೋಟಯ್ಯ ಮತ್ತಿತರರು ಕಾವೇರಿ ತೀರ್ಥವನ್ನು ಸ್ವೀಕರಿಸಿ ಸಂಪ್ರದಾಯದಂತೆ ಭಾಗಮಂಡಲದ ಶ್ರೀಭಗಂಡೇಶ್ವರನಿಗೆ ಅಭಿಷೇಕ ಮಾಡಿಸಿದರು.

ಬ್ರಹ್ಮಕುಂಡಿಕೆಯ ಬಳಿ ನಡೆಯುವ ಪೂಜಾ ಕಾರ್ಯಕ್ರಮಗಳನ್ನು ಎಲ್‌ಇಡಿ ಪರದೆ ಮೂಲಕ ನೇರ ಪ್ರಸಾರ ಮಾಡಲಾಯಿತು. ಭಕ್ತರು ಕುಳಿತ ಸ್ಥಳದಲ್ಲೇ ಧಾರ್ಮಿಕ ವಿಧಿವಿಧಾನ ವೀಕ್ಷಿಸಿದರು. ಚಿನ್ನಾಭರಣ ಹಾಗೂ ಪುಷ್ಪಾಲಂಕಾರದೊಂದಿಗೆ ಕಾವೇರಿ ಮಾತೆ ಕಂಗೊಳಿಸುತ್ತಿದ್ದಳು.

ಟಾಪ್ ನ್ಯೂಸ್

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್‌ ವ್ಯವಹಾರ ಪರಿಶೀಲನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.