ನಾಡಹಬ್ಬವಾಗಿ ಕಯ್ಯಾರ ಜನ್ಮದಿನ ಮುಂದಿನ ವರ್ಷದಿಂದ ಆಚರಣೆ: ಡಾ| ಸೋಮಶೇಖರ್
Team Udayavani, Jun 9, 2022, 7:00 AM IST
ಬೆಂಗಳೂರು: ಮುಂದಿನ ವರ್ಷದಿಂದ ಕಾಸರ ಗೋಡು ಕನ್ನಡದ ಹಿರಿಯ ಸಾಹಿತಿ ಮತ್ತು ಗಡಿನಾಡ ಚೇತನ ನಾಡೋಜ ಡಾ| ಕಯ್ಯಾರ ಕಿಂಞಣ್ಣ ರೈ ಅವರ ಜನ್ಮದಿನವನ್ನು ನಾಡಹಬ್ಬವಾಗಿ ಆಚರಿಸಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ್ ತಿಳಿಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಚೇರಿಯ ಸಭಾಂಗಣದಲ್ಲಿ ಬುಧ ವಾರ ಹಮ್ಮಿಕೊಂಡಿದ್ದ ಕಯ್ಯಾರ ಕಿಂಞಣ್ಣ ರೈ ಅವರ 107ನೇ ಜನ್ಮ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಿಂಞಣ್ಣ ರೈ ಅವರು ಕರ್ನಾಟಕ ಏಕೀಕರಣದ ಬಹು ದೊಡ್ಡ ಆಸ್ತಿ. ಸಾಹಿತಿ, ಶಿಕ್ಷಣ ತಜ್ಞ, ಸ್ವಾತಂತ್ರ್ಯ ಹೋರಾಟಗಾರ, ಪತ್ರ ಕರ್ತರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಾಹಿತಿಯೊಬ್ಬನಿಗೆ ಇರಲೇಬೇಕಾದ ಕನ್ನಡ ಬದ್ಧತೆ ಮತ್ತು ಸಾಮಾಜಿಕ ಬದ್ಧತೆಯನ್ನು ಬದುಕಿನಲ್ಲಿ ಅಳವಡಿಸಿಕೊಂಡ ವ್ಯಕ್ತಿ ಎಂದು ಅವರ ಕಾರ್ಯವೈಖರಿ ಮತ್ತು ಜೀವನ ಶೈಲಿಯನ್ನು ನೆನಪಿಸಿಕೊಂಡರು.
ಕನ್ನಡ ಭವನಕ್ಕೆ 1 ಕೋ. ರೂ.
ಕಾಸರಗೋಡಿನಲ್ಲಿ ಡಾ| ಕಯ್ನಾರ ಹೆಸರಿನಲ್ಲಿ ಕನ್ನಡ ಭವನ ನಿರ್ಮಿಸಲು ರಾಜ್ಯ ಸರಕಾರದಿಂದ 1 ಕೋ.ರೂ. ಮಂಜೂರು ಮಾಡಲಾಗಿದೆ. ಗೋವಾ, ಅಕ್ಕಲಕೋಟೆಗಳಲ್ಲಿ ಜಯದೇವ ತಾಯಿ ಹೆಸರಿನಲ್ಲಿ ಕನ್ನಡ ಭವನವನ್ನು ನಿರ್ಮಿಸುವ ಯೋಜನೆಯಿದೆ ಎಂದು ತಿಳಿಸಿದರು.
ಕಿಂಞಣ್ಣ ರೈ ಅವರು ಮಹಾತ್ಮಾ ಗಾಂಧೀಜಿಯವರನ್ನು ಪ್ರತ್ಯಕ್ಷವಾಗಿ ಕಂಡು, ವೈಯಕ್ತಿಕ ಸತ್ಯಾಗ್ರಹಿಯಾಗಿ ಗಾಂಧೀಜಿಯವರಿಂದಲೇ ಆಯ್ಕೆಗೊಂಡು ಈ ಮೂಲಕ ಸ್ವಾತಂತ್ರ್ಯ ಚಳವಳಿಯಲ್ಲಿ ಮತ್ತು ದೀನದಲಿತರ ಸೇವೆಯಲ್ಲಿ ತೊಡಗಿಸಿಕೊಂಡವರು. ರವೀಂದ್ರನಾಥ ಠಾಗೂರ್ ಅವರ ದೇಶ ಭಾಷಾ ಸಾಹಿತ್ಯದ ಮೂಲಕ ಕಿಂಞಣ್ಣ ರೈ ಮತ್ತು ಕುವೆಂಪು ಅವರು ಪ್ರಭಾವ ಬೀರಿದ್ದಾರೆ ಎಂದು ಹಿರಿಯ ಸಾಹಿತಿ ಪ್ರೊ| ಕೆ.ಇ. ರಾಧಾಕೃಷ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ