ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ಕೋಳಿವಾಡ ವಾಗ್ಧಾಳಿ !


Team Udayavani, May 16, 2018, 3:22 PM IST

44.jpg

ಬೆಂಗಳೂರು : ರಾಣಿ ಬೆನ್ನೂರು ಕ್ಷೇತ್ರದಲ್ಲಿ ಕೆಪಿಜೆಪಿ ಅಭ್ಯರ್ಥಿ ವಿರುದ್ಧ  ಸೋಲು ಅನುಭವಿಸಿರುವ ಮಾಜಿ ಸ್ಪೀಕರ್‌, ಕಾಂಗ್ರೆಸ್‌ ಹಿರಿಯ ನಾಯಕ  ಕೆ.ಬಿ.ಕೋಳಿವಾಡ ಅವರು ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ  ಬುಧವಾರ ತೀವ್ರ ವಾಗ್ಧಾಳಿ ನಡೆಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಕೋಳಿವಾಡ ಅವರು ಏಕವಚನದಲ್ಲೇ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ‘ಪಕ್ಷ ಈ ಸ್ಥಿತಿಗೆ ಬರಲು ಇವನೇ ಸಿದ್ದರಾಮಯ್ಯ ಕಾರಣ. ಸರ್ವಾಧಿಕಾರಿ ಧೋರಣೆ ಅವನದ್ದು’ ಎಂದರು. 

‘ಹಿಂದೇ ಪರಮೇಶ್ವರ್‌ ಸೋಲಿಗೂ ಇವನೇ ಕಾರಣ , ಕಳೆದ ಬಾರಿ ನನ್ನನ್ನು ,ಇನಾಮ್‌ದಾರ್‌ನನ್ನು  ಸೋಲಿಸಲು ಬಹಳ ಪ್ರಯತ್ನ ಮಾಡಿದ ಆಗಲಿಲ್ಲ.ಈ ಬಾರಿ ಟಿಕೆಟ್‌ ತಡೆಯಲು ಪ್ರಯತ್ನ ಮಾಡಿದ. ನೇರವಾಗಿ ರಾಹುಲ್‌ ಗಾಂಧಿ  ಜೊತೆ ಮಾತನಾಡಿ ಟಿಕೆಟ್‌ ಪಡೆದೆ ಆದರೆ ಕೆಪಿಜೆಪಿಯ ಶಂಕರ್‌ಗೆ ಬೆಂಬಲ ನೀಡಿ ನಾನು ಸೋಲುವಂತೆ ಮಾಡಿದ’ ಎಂದರು. 

‘ಈ ಮನುಷ್ಯನಿಂದ ಕಾಂಗ್ರೆಸ್‌ ಪಕ್ಷಕ್ಕೆ ಉಪಯೋಗ ಆಗುವುದಿಲ್ಲ.ಅವನಿಗೆ  ಪಕ್ಷದಲ್ಲಿ ಮಹತ್ವ ಕೊಟ್ಟರೆ ಪಕ್ಷದ ಅವನತಿಗೆ ಕಾರಣ ಆಗುತ್ತದೆ. ಜೆಡಿಎಸ್‌ಗೆ ಮೋಸ ಮಾಡಿ ಬಂದ’ ಎಂದರು. 

‘ನನ್ನ ಮೇಲೆ ಕ್ರಮ ಕೈಗೊಳ್ಳಲು ಅವನ ಅಪ್ಪನಾಣೆ ಸಾಧ್ಯವಿಲ್ಲ. ನಾನು ಹುಟ್ಟು ಕಾಂಗ್ರೆಸಿಗ’ ಎಂದು ಕಿಡಿ ಕಾರಿದರು. 

‘ಕುಮಾರಸ್ವಾಮಿಗೆ ಅಧಿಕಾರ ಕೊಡಲು ಸಿದ್ದರಾಮಯ್ಯ ಬಿಡುವುದಿಲ್ಲ. ಅವನನ್ನು ದೂರ ಇಡಬೇಕು’ ಎಂದರು. 

‘ಏನೇನೆಲ್ಲಾ ಮಾಡಾಕ್‌ ಹೋದ,ಏನೆಲ್ಲಾ ಮಾಡ್ದ,ಇಲ್ಲಸಲ್ಲದ್ದೆಲ್ಲಾ ಹುಟ್ಟು ಹಾಕಿದ. ಮಾಡಿ ಅನುಭವಿಸಿದ  ಈ ಮನುಷ್ಯನ ನಡವಳಿಕೆ ಅಹಂ, ಇವನ ಭಾಷಣ ಗೆಲ್ಲಿಸಬೇಕಿತ್ತಲ್ಲ. ಚಾಮುಂಡೇಶ್ವರಿಯಲ್ಲಿ ಹೀನಾಯವಾಗಿ ಸೋತ, ಬಾದಾಮಿಯಲ್ಲಿ  ಕೆಲವೇ ಮತಗಳ ಅಂತರದಿಂದ ಗೆದ್ದ, ನಾಚಿಗೆಯಾಗಬೇಕು’ ಎಂದು ಕಿಡಿ ಕಾರಿದರು. 

‘ಅವನದ್ದು ಕಾಂಗ್ರೆಸ್‌ ರಕ್ತ ಅಲ್ಲ, ಇಂತಹ ಮನುಷ್ಯನನ್ನು ಕಾಂಗ್ರೆಸ್‌ನಲ್ಲಿ ಉಳಿಸಿಕೊಳ್ಳಬಾರದು, ಲೋಕಸಭೆ ಚುನಾವಣೆಗೆ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಹೋಗಬೇಕು’ ಎಂದರು. 

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.