ಸಂಬಂಧಿಕರ ಮನೆಯಲ್ಲಿ ಕೆಸಿಎನ್ ಪ್ರತ್ಯಕ್ಷ
Team Udayavani, Feb 10, 2019, 1:54 AM IST
ಮಂಡ್ಯ: ಅನಾರೋಗ್ಯದ ನೆಪವೊಡ್ಡಿ ಅಧಿವೇಶನಕ್ಕೆ ಗೈರು ಹಾಜರಾಗಿರುವ ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣ ಗೌಡ ಅವರು ಜೆಡಿಎಸ್ ನಾಯಕರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿ ದ್ದಾರೆ. ಚಳಿ ಜ್ವರ ಬಂದವರಂತೆ ನಾಟಕವಾಡುತ್ತಾ, ಮುಂಬೈ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ, ವಿಡಿಯೋಗಳನ್ನು ಹರಿಯ ಬಿಟ್ಟು, ಶಾಸಕರು, ಶನಿವಾರ ಮಂಡ್ಯದಲ್ಲಿ ದಿಢೀರನೆ ಪ್ರತ್ಯಕ್ಷರಾದರು.
ಮಂಡ್ಯದ ಹೊಸಹಳ್ಳಿ ಬಡಾವಣೆಯಲ್ಲಿರುವ ತಮ್ಮ ತಾಯಿ ಸಂಬಂಧಿಕ ಹೊಸಹಳ್ಳಿ ನಾಗೇಶ್ ಅವರ ಮನೆಯಲ್ಲಿ ನಡೆದ ಸತ್ಯನಾರಾ ಯಣ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದರು. ಬಜೆಟ್ ಮಂಡನೆ ಮಾಡುವ ದಿನ ನಾನು ಸದನದಲ್ಲಿ ಹಾಜರಿರುತ್ತೇನೆಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ನಾಯಕರಿಗೆ ಭರವಸೆ ನೀಡಿದ್ದವರು ಶುಕ್ರವಾರ ಸದನಕ್ಕೆ ಗೈರಾಗಿದ್ದರು. ಕಳೆದ ನಾಲ್ಕು ದಿನಗಳಿಂದ ಯಾರ ಕೈಗೂ ಸಿಗದೆ ಆಟವಾಡುತ್ತಿದ್ದ ನಾರಾಯಣಗೌಡರು, ಮಂಡ್ಯದಲ್ಲಿ ಪ್ರತ್ಯಕ್ಷರಾಗಿರುವುದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
SSLC ಪರೀಕ್ಷೆ-2 ಜೂನ್ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ
Congress: ಕುಮಾರಸ್ವಾಮಿ, ದೇವರಾಜೇಗೌಡ ವಿರುದ್ಧ ಎಸ್ಐಟಿಗೆ ಕಾಂಗ್ರೆಸ್ ದೂರು