ದೇವೇಗೌಡರನ್ನು ಭೇಟಿಯಾದ ಕೆಸಿಆರ್
Team Udayavani, May 23, 2018, 6:00 AM IST
ಬೆಂಗಳೂರು: ತೆಲಂಗಾಣ ಸಿಎಂ ಕೆ.ಚಂದ್ರಶೇಖರರಾವ್ ಮಂಗಳವಾರ ರಾತ್ರಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿ ನಿಯೋಜಿತ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅಭಿನಂದಿಸಿದ್ದಾರೆ. ಚಂದ್ರಶೇಖರರಾವ್ ಬುಧವಾರ ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಬೇಕಿತ್ತಾದರೂ ಕಾರಣಾಂತರಗಳಿಂದ ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿಯೇ ಬೆಂಗಳೂರಿಗೆ
ಆಗಮಿಸಿದ್ದಾರೆ. ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಚಂದ್ರಶೇಖರರಾವ್ ಅರ್ಧ ಗಂಟೆಗೂ ಹೆಚ್ಚು ಕಾಲ ದೇವೇಗೌಡರೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ ಕುಮಾರಸ್ವಾಮಿ ಅವರನ್ನು ಅಭಿನಂದಿಸಿದರು. ಬೆಂಗಳೂರಿನಿಂದ ಮಂಗಳವಾರ
ರಾತ್ರಿಯೇ ಹೈದರಾಬಾದ್ಗೆ ವಾಪಸಾಗಿರುವ ಚಂದ್ರಶೇಖರರಾವ್ ಪೂರ್ವನಿಗದಿಯಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಮೊದಲೇ ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಯದೇ ಕಾರಣ ಹರಿದಾಡುತ್ತಿದೆ. ಕೆಸಿಆರ್ಗೆ ಕಾಂಗ್ರೆಸ್
ನಾಯಕರ ಜತೆಗೆ ವೇದಿಕೆ ಹಂಚಿಕೊಳ್ಳಲು ಮನಸ್ಸಿಲ್ಲದ ಹಿನ್ನೆಲೆಯಲ್ಲಿ ಗೈರಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!