ನ.11ಕ್ಕೆ ಕೆಡಿಸಿಸಿ ಬ್ಯಾಂಕ್‌ ಚುನಾವಣೆ : 30 ರಿಂದ ನಾಮಪತ್ರ ಸಲ್ಲಿಕೆ ಶುರು


Team Udayavani, Oct 8, 2020, 11:08 AM IST

ನ.11ಕ್ಕೆ ಕೆಡಿಸಿಸಿ ಬ್ಯಾಂಕ್‌ ಚುನಾವಣೆ : 30 ರಿಂದ ನಾಮಪತ್ರ ಸಲ್ಲಿಕೆ ಶುರು

ಶಿರಸಿ: ವಾರ್ಷಿಕ ಕೋಟ್ಯಾಂತರ ರೂ. ಲಾಭಗಳಿಸುತ್ತಿರುವ ಫೆಡರಲ್‌ ಸಹಕಾರ ಸಂಘದಡಿ ಬರುವ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ (ಕೆಡಿಸಿಸಿ) ಚುನಾವಣೆ ನ.11 ರಂದು ನಡೆಯಲಿದೆ. ಅ.30 ರಿಂದ ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ
ಹೊರಡಿಸಲಾಗಿದೆ. ನ.3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಒಟ್ಟೂ 16 ವಿವಿಧ ಸಹಕಾರಿ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ನ.4 ನಾಮಪತ್ರ ಪರಿಶೀಲನೆ ಹಾಗೂ ನ.5 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನ.11 ರಂದು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ.

ಇನ್ನಷ್ಟು ವಿವರಗಳು: ಚುನಾವಣೆ ಪ್ರಕ್ರಿಯೆ ಘೋಷಣೆ ಆಗುವ ಮೊದಲೇ ಸ್ಪರ್ಧಾಳುಗಳು ಪೈಪೋಟಿ ಆರಂಭಿಸಿದ್ದಾರೆ. ತಾಲೂಕು ಪ್ರಾತಿನಿಧ್ಯ ಹೊತುಪಡಿಸಿ ಉಳಿದ ಐದು ಪ್ರಾತಿನಿಧಿಕ ಸಂಘ, ಸಂಸ್ಥೆಗಳ ಚುನಾವಣೆಗೆ ಮತದಾರರು ಜಿಲ್ಲೆಯಲ್ಲಿದ್ದು, ಈ ಕುರಿತೂ ಆಕಾಂಕ್ಷಿಗಳ ಓಡಾಟ ಜೋರಾಗಿ ನಡೆದಿದೆ. ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ನ.4 ರಂದು ಬೆಳಗ್ಗೆ 11 ಗಂಟೆಯಿಂದ ಚುನಾವಣಾ ಅಧಿಕಾರಿಗಳಿಂದ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅದೇ ದಿನ ಸಂಜೆ ಬ್ಯಾಂಕಿನ ಸೂಚನಾ ಫಲಕದ ಮೇಲೆ
ಅಭ್ಯರ್ಥಿಗಳ ಪಟ್ಟಿ ಹಾಕಲಿದ್ದಾರೆ.

ನ.5 ರ ನಂತರ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ ಆಗಲಿದ್ದು, ಸಿಂಧುತ್ವ ಹೊಂದಿರುವ ಉಮೇದುವಾರರ ಪಟ್ಟಿಯನ್ನು ನ.7 ರ ಸಂಜೆ 4ಕ್ಕೆ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಪ್ರಕಟಿಸಲಾಗುವುದು. ಚುನಾವಣಾ ಅಧಿಕಾರಿಯಾಗಿ ಶಿರಸಿ ಉಪವಿಭಾಧಿಕಾರಿ ಆಕೃತಿ ಬನ್ಸಾಲ್‌ ಕಾರ್ಯನಿರ್ವಹಿಸಲಿದ್ದಾರೆ.

ರಂಗ ತಾಲೀಮು: ಐದು ಪ್ರಾತಿನಿಧಿಕ ಸಂಘ, ಸಂಸ್ಥೆಗಳ ನಿರ್ದೇಶಕ ಸ್ಥಾನದ ಆಕಾಂಕ್ಷಿತರು ಇಡೀ ಜಿಲ್ಲೆಯ ಓಡಾಟ ಮಾಡುತ್ತಿದ್ದಾರೆ. ಈಗಾಗಲೇ ಒಂದು ಹಂತದ ಓಡಾಟ ನಡೆದಿದೆ. ತಮಗೆ ಬೇಕಾದವರಿಗೆ ಮತಪತ್ರ ಕೊಡಿಸುವ ಠರಾವಿನ ಕಾರ್ಯಕ್ಕೂ ಒತ್ತಡ ನಡೆದಿವೆ. ಆ ಮತಗಳನ್ನು ಒಲಿಸಿಕೊಳ್ಳಲು, ವಿಶ್ವಾಸಗಳಿಸಲು ಶ್ರಮ ಆರಂಭವಾಗಿದೆ. ಕೆಲವರು ಹಗಲು ರಾತ್ರಿ ಎನ್ನದೇ ಓಡಾಟ ಶುರು ಮಾಡಿದ್ದಾರೆ. ಐದು ವರ್ಷಗಳ ಕೆಡಿಸಿಸಿ ಗದ್ದುಗೆ ಉಳಿಸಿಕೊಳ್ಳುವ, ಗಳಿಸಿಕೊಳ್ಳುವ ಕನಸು
ಹೆಣೆಯುತ್ತಿದ್ದಾರೆ.

ಯಾರಿಗೆ ಹಿತವರು?: ಕೆಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಹಲವು ಪ್ರತಿಷ್ಠಿತರಿಗೂ ಸ್ಪರ್ಧಿಯಾಗಿ ಹಲವರು ಕಣಕ್ಕೆ ಇಳಿಯಲಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ನಲ್ಲಿದ್ದ ಶಿವರಾಮ ಹೆಬ್ಟಾರ್‌, ಸತೀಶ ಸೈಲ್‌, ಮಂಕಾಳು ವೈದ್ಯರನ್ನೂ ಕರೆತಂದಿದ್ದರು. ಈ ಬಾರಿ ಅವರು ಬಿಜೆಪಿಯಲ್ಲಿದ್ದು, ಸಚಿವರೂ ಆಗಿದ್ದಾರೆ. ಶಿವರಾಮ ಹೆಬ್ಟಾರ್‌ ಅವರ ಸೂಚನೆ, ಆಶೀರ್ವಾದ ಬೇಡಿ ಹಲವರು ಕಣಕ್ಕಿಳಿಯಲು ಪ್ರಯತ್ನಿಸುತ್ತಿದ್ದಾರೆ. ಸಂಸದ ಅನಂತಕುಮಾರ ಹೆಗಡೆ ಅವರನ್ನೂ ಎರಡು ದಿನಗಳ ಹಿಂದೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾಗಿ ಮೂಲವೊಂದು ತಿಳಿಸಿದೆ. ಹೆಬ್ಟಾರರಿಗೆ ತಮ್ಮ ಬೆಂಬಲ ಯಾವ ಅಭ್ಯರ್ಥಿಗೆ ಎಂಬುದನ್ನು ಸೂಚಿಸಿದ್ದಾಗಿ
ತಿಳಿಸಿದ್ದಾರೆ. ಈ ಕಾರಣದಿಂದಲೂ ಹೆಬ್ಟಾರರು ಸ್ನೇಹದ ಇಕ್ಕಟ್ಟಿನಲ್ಲೂ ಸಿಲುಕಿದ್ದಾರೆ ಎಂಬ ಮಾತುಗಳೂ ಅವರ ಆಪ್ತ ವಲಯದಿಂದಲೇ ಕೇಳಿ ಬಂದಿವೆ.

ಪ್ರತಿಷ್ಠೆಯ ಕಣ: ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ ಎಲ್ಲಾ ಪಕ್ಷಗಳಿಗೆ, ಸಹಕಾರ ಕ್ಷೇತ್ರದ ಧುರೀಣರಿಗೆ ಪ್ರತಿಷ್ಠೆಯ ಕಣವಾಗಿದೆ. ಈ ಬಾರಿ ಶಾಂತಾರಾಮಹೆಗಡೆ ಶೀಗೇಹಳ್ಳಿ ಅವರನ್ನು ಹೊತುಪಡಿಸಿ ಉಳಿದವರೆಲ್ಲ ಕಣಕ್ಕೆ ಧುಮುಕಲಿದ್ದಾರೆ ಎನ್ನಲಾಗಿದೆ.
ಪ್ರಾಥಮಿಕ ಸಂಘಗಳನ್ನು ಪ್ರತಿನಿಧಿಸುವ ಕಾರಣ ಚುನಾವಣೆ ಈಗಾಗಲೇ ತುರುಸು ಕಾಣಿಸಿಕೊಂಡಿದೆ. ಉಪಾಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ ಅವರಿಗೆ ಎದುರಾಗಿ ಹಾಲು ಒಕ್ಕೂಟ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ಜಿ.ಆರ್‌. ಹೆಗಡೆ ಸೋಂದಾ ಅವರಿಗೆ
ಚಂದ್ರು ಎಸಳೆ, ವಿನಾಯಕ ಮುಂಡಗೇಸರ, ರಾಮಕೃಷ್ಣ ಹೆಗಡೆ ಕಡವೆ ಎದುರಾಗಿ ಜಿ.ಆರ್‌. ಹೆಗಡೆ ಬೆಳ್ಳೇಕೇರಿ, ಮೋಹನದಾಸರಿಗೆ ದೀಪಕ ದೊಡೂxರು ಅಖಾಡದಲ್ಲಿ ತೊಡೆ ತಟ್ಟುವುದು ಬಹುತೇಕ ಖಚಿತವಾಗಿದೆ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.