ಪಾರ್ಟಿಗಳಿಗೆ ಡ್ರಗ್ಸ್ ಮಾರಾಟ-ಕೇರಳ ಮೂಲದ ಆರೋಪಿ ಬಂಧನ
Team Udayavani, Dec 8, 2021, 11:15 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಬೆಂಗಳೂರು, ಮಂಗಳೂರಿನಲ್ಲಿ ನಡೆಯುತ್ತಿದ್ದ ಹೈ-ಫೈ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಅನೂಪ್(32) ಬಂಧಿತ.ಆರೋಪಿಯಿಂದ 11 ಕೋಟಿ ರೂ. ಮೌಲ್ಯದ 11 ಕೆ.ಜಿ. ಹ್ಯಾಶಿಸ್ ಆಯಿಲ್ ಮತ್ತು 250 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ರೋಷನ್ ಸೇರಿ ಮೂವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಕೇರಳ ಮೂಲದವರಾದ ಅನೂಪ್ ಮತ್ತು ರೋಷನ್ ನಾಲ್ಕು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಅನೂಪ್ ಜಾಹಿರಾತು ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ರೋಷನ್ ಜಿಮ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಆರೋಪಿಗಳಿಗೆ ತಲೆಮರೆಸಿಕೊಂಡಿರುವ ಕೇರಳ ಮೂಲದ ವ್ಯಕ್ತಿಯೇ ನಗರದ ಹೊರವಲಯದ ಬಿದರಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಟ್ಟಿದ್ದ.
ಆರೋಪಿಗಳು ತಮ್ಮ ಕೆಲಸದ ಜತೆಗೆ ಅಕ್ರಮವಾಗಿ ಹಣ ಸಂಪಾದಿಸಲು ಕೇರಳ ಹಾಗೂ ಆಂಧ್ರಪ್ರದೇಶ ಮೂಲದ ವ್ಯಕ್ತಿಗಳನ್ನು ಪರಿಚಯಿಸಿಕೊಂಡು, ನಿತ್ಯ ಬೆಂಗಳೂರಿಗೆ ಬರುವ ಖಾಸಗಿ ವಾಹನಗಳಲ್ಲಿ ಡ್ರಗ್ಸ್ಗಳನ್ನು ತರಿಸಿಕೊಳ್ಳುತ್ತಿದ್ದರು. ನಂತರ ಅವುಗಳನ್ನು ಟೆಕ್ಕಿಗಳು, ವಿದ್ಯಾರ್ಥಿಗಳು ಹಾಗೂ ನಿದ್ರಿಷ್ಟ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಹೈ-ಫೈ ಪಾರ್ಟಿಗಳಿಗೆ ಪೂರೈಕೆ
ರಸ್ತೆ ಮಾರ್ಗವಾಗಿ ನಗರಕ್ಕೆ ಬರುತ್ತಿದ್ದ ಡ್ರಗ್ಸ್ಗಳನ್ನು ಬೆಂಗಳೂರು, ಮಂಗಳೂರಿನಲ್ಲಿ ನಡೆಯುತ್ತಿದ್ದ ಹೈ-ಫೈ ಪಾರ್ಟಿಗಳಿಗೆ ಪೂರೈಕೆ ಮಾಡುತ್ತಿದ್ದರು.ಇತ್ತೀಚೆಗೆ ಹೆಬ್ಟಾಳ ಮೇಲು ಸೇತುವೆ ಬಸ್ ನಿಲ್ದಾಣದ ಬಳಿ ಅನೂಪ್ ಹ್ಯಾಶಿಸ್ ಮತ್ತು ಗಾಂಜಾ ತಂದು ಮಾರಾಟಕ್ಕೆ ಸಿದ್ದನಡೆಸಿದ್ದ. ಈ ಮಾಹಿತಿ ಸಂಗ್ರಹಿಸಿ ಹೆಡೆಕಾನ್ಸ್ಟೇಬಲ್ ಹಿರೇಮs… ಎಂಬವರು ಆರೋಪಿಯ ಮೇಲೆ ದಾಳಿ ನಡೆಸಿ ಮಾಲು ಸಮೇತ ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ, ನಗರದ ಉದ್ಯಮಿಗಳಿಗೆ, ಸೆಲೆಬ್ರೆಟಿಗಳು ಹಾಗೂ ಇತರೆ ವರ್ಗದ ಗ್ರಾಹಕರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿರುವ ವಿಚಾರ ಬಯಲಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:ರಾಜ್ಯದಲ್ಲಿಂದು 399 ಕೋವಿಡ್ ಪಾಸಿಟಿವ್ ಪತ್ತೆ: 6 ಮಂದಿ ಸಾವು
ಬಾಣಸವಾಡಿ ಅಬಕಾರಿ ಠಾಣೆಯಲ್ಲಿ ಆರೋಪಿ ಅನೂಪ್ ಮತ್ತು ಆತನ ಸಹಚರರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ನಗರದ ವಿವಿಧ ಪೊಲೀಸ್ ಠಾಣೆಗಳು ಮತ್ತು ಉಡುಪಿ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ರಾಜ್ಯದ ನಾನಾ ಜಿಲ್ಲೆಗಳ ಠಾಣೆಗಳ ವ್ಯಾಪ್ತಿಯಲ್ಲಿಯೂ ಡ್ರಗ್ಸ್ ಮಾರಾಟ ಮಾಡಿರುವುದು ಗೊತ್ತಾಗಿದೆ. ಕೆಲ ತಿಂಗಳ ಹಿಂದಷ್ಟೇ ಆರೋಪಿಗಳು ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದರು. ಇತ್ತೀಚೆಗಷ್ಟೇ ಜಾಮೀನು ಪಡೆದು ಬಿಡುಗಡೆಯಾಗಿ ಮತ್ತೆ ಅದೇ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ