ಕೆ.ಜಿ. ಹಳ್ಳಿ ಮಾದರಿಯಲ್ಲಿ ಚನ್ನಗಿರಿ ಘಟನೆ: ಪರಮೇಶ್ವರ
ಕೃತ್ಯ ಎಸಗಿದವರ ವಿರುದ್ಧ ಕಠಿನ ಕ್ರಮ: ಗೃಹ ಸಚಿವ
Team Udayavani, May 26, 2024, 6:38 AM IST
ಬೆಂಗಳೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಬೆಂಗಳೂರಿನ ಡಿ.ಜೆ. ಹಳ್ಳಿ- ಕೆ.ಜೆ. ಹಳ್ಳಿ ಮಾದರಿಯಲ್ಲಿ ದಾಳಿ ನಡೆಸಲು ಯೋಜನೆ ರೂಪಿಸಲಾಗಿತ್ತು ಎಂಬ ಅಂಶ ತಿಳಿದು ಬಂದಿದೆ ಎಂದು ಗೃಹ ಸಚಿವ ಡಾ| ಪರಮೇಶ್ವರ ಶನಿವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ.
ಪೊಲೀಸ್ ಠಾಣೆಗೆ ಬಂದು ಧಮಕಿ ಹಾಕಿದ ವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಆದಿಲ್ ವಿರುದ್ಧ ದೂರು ಇದ್ದುದರಿಂದ ಪೊಲೀಸರು ಠಾಣೆಗೆ ಕರೆತಂದಿದ್ದರು. ಬಳಿಕ 7 ನಿಮಿಷ ಗಳಲ್ಲಿ ಏನಾಯಿತೋ ಗೊತ್ತಿಲ್ಲ. ಆರೋಗ್ಯದಲ್ಲಿ ವ್ಯತ್ಯಾಸ ಆಗಿ ಆತ ತೀರಿಕೊಂಡಿದ್ದಾನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಆದರೆ ಪೊಲೀಸರೇ ಹೊಡೆದು ಸಾಯಿಸಿದ್ದಾರೆ ಎಂದು ಕೆಲವರು ಪ್ರತಿಭಟಿಸಿ, ಠಾಣೆಯಲ್ಲಿ ದಾಂಧಲೆ ನಡೆಸಿ ದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದಿಲ್ನ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸ್ಪಷ್ಟತೆ ಸಿಗಲಿದೆ ಎಂದು ಗೃಹ ಸಚಿವರು ಹೇಳಿದರು.
ಪ್ರತಿಭಟನಕಾರರು ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ಲಘು ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಪ್ರಯೋಗಿಸಿದ್ದಾರೆ. ಪೊಲೀಸರಿಗೂ ಗಾಯವಾಗಿದೆ ಎಂದರು.
ಗುಂಪು ಘರ್ಷಣೆ ಹೇಳಿಕೇಳಿ ಆಗಲ್ಲ
ಉಡುಪಿ ಗ್ಯಾಂಗ್ವಾರ್ ಕುರಿತು ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ, ಇಂಥ ಗುಂಪು ಘರ್ಷಣೆಗಳು, ರೌಡಿ ಚಟುವಟಿಕೆಗಳು ಯಾರನ್ನೂ ಹೇಳಿಕೇಳಿ ನಡೆಯುವುದಿಲ್ಲ. ಅವುಗಳನ್ನು ಹತ್ತಿಕ್ಕಲು ಏನು ಬೇಕೋ ಅದನ್ನು ಮಾಡಲಾಗುತ್ತದೆ. ಅಂತಹವರು ಮುಕ್ತವಾಗಿ ಓಡಾಡಿಕೊಂಡಿರಲು ಬಿಡುವುದಿಲ್ಲ ಎಂದರು. ಬೆಳಗಾವಿ ಕ್ರಿಕೆಟ್ ಪಂದ್ಯದ ವೇಳೆ ನಡೆದ ಗಲಭೆ ಸಂಬಂಧ ಪ್ರತಿಕ್ರಿಯಿಸಿ, ಗಲ್ಲಿಯಲ್ಲಿ ಸಣ್ಣದಾಗಿ ಗಲಾಟೆ ಆಗಿ ದೊಡ್ಡದಾಗುತ್ತದೆ. ಅದನ್ನು ನಿಯಂತ್ರಿಸುವುದು ನಮ್ಮ ಕೆಲಸ. ಅದಕ್ಕೂ ಮೊದಲೇ ಊಹಿಸಲಾಗುತ್ತದೆಯೇ ಎಂದು ಮರುಪ್ರಶ್ನೆ ಹಾಕಿದರು.
ಯುವಕನ ಸಾವು ಲಾಕಪ್ ಡೆತ್ ಅಲ್ಲ. ಆತನಿಗೆ ಮೂರ್ಛೆರೋಗ ಇದ್ದುದರಿಂದ ಮೃತಪಟ್ಟಿ ದ್ದಾನೆ. ಆದರೆ ಎಫ್ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆತಂದದ್ದು ತಪ್ಪು. ಈ ತಪ್ಪಿಗೆ ಪೊಲೀಸ್ ಅಧಿ ಕಾರಿಗಳ ಅಮಾನತಿಗೆ ಆದೇಶ ಮಾಡಿದ್ದೇನೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು
Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
MUST WATCH
ಹೊಸ ಸೇರ್ಪಡೆ
Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ
Cyber Frauds: ಸೈಬರ್ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!
Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ
Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು
IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.