ಕೆ.ಜಿ ಹಳ್ಳಿ ಗಲಭೆ ಪ್ರಕರಣ: 15 ಮಂದಿಗೆ ನ್ಯಾಯಾಂಗ ಬಂಧನ
Team Udayavani, Oct 3, 2022, 11:31 PM IST
ಬೆಂಗಳೂರು: ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧನ
ಕ್ಕೊಳಗಾಗಿದ್ದ 15 ಮಂದಿ ಆರೋಪಿ ಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ನಗರದ ಮೇಯೋ ಹಾಲ್ನ 10ನೇ ಎಸಿಎಂಎಂ ಕೋರ್ಟ್ಗೆ ಆರೋಪಿಗಳನ್ನು ಸೋಮವಾರ ಹಾಜರುಪಡಿಸಲಾಯಿತು.
ಪೊಲೀಸರ ಪರ ವಾದ ಮಂಡಿಸಿದ ಸರಕಾರಿ ಅಭಿಯೋಜಕರು, ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ನಿಯಂ ತ್ರಣ ತಡೆ ಕಾಯ್ದೆಯಡಿ (ಯುಎಪಿಎ) ಪ್ರಕರಣ ದಾಖಲಿಸಬೇಕು ಎಂಬ ಮನವಿ ಮಾಡಿದರು.
ಇದನ್ನು ಕೋರ್ಟ್ ಪುರಸ್ಕರಿಸಿ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಿದೆ. ಬಳಿಕ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಯಿತು.