ಜ.2ರಿಂದ 31ರವರೆಗೆ ಖಾದಿ ಉತ್ಸವ
Team Udayavani, Jan 1, 2018, 12:20 PM IST
ಬೆಂಗಳೂರು: ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವಜ್ರಮಹೋತ್ಸವದ ಅಂಗವಾಗಿ 2018ರ ಜ. 2ರಿಂದ 31ರವರೆಗೆ ನಗರದ ಸ್ವಾತಂತ್ರ್ಯ ಉದ್ಯಾನದ ಪೀಪಲ್ ಪ್ಲಾಜಾನಲ್ಲಿ ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಂಡಿದೆ.
ಒಂದು ತಿಂಗಳು ನಡೆಯುವ ಈ ಉತ್ಸವದಲ್ಲಿ ಜಮ್ಮು-ಕಾಶ್ಮೀರ, ಗುಜರಾತ್, ಆಂಧ್ರಪ್ರದೇಶ ಸೇರಿದಂತೆ ದೇಶದ ನಾನಾ ರಾಜ್ಯಗಳಿಂದ ಖಾದಿ ಉತ್ಪನ್ನಗಳು ಪ್ರದರ್ಶನಗೊಳ್ಳಲಿವೆ. ವಿನೂತನ ವಿನ್ಯಾಸಗಳ ಆಕರ್ಷಕ ಉತ್ಪನ್ನಗಳ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಫ್ಯಾಷನ್ ಶೋ, ಪ್ರಾತ್ಯಕ್ಷಿಕೆಗಳಿಂದ ಅಕ್ಷರಶಃ ಇದೊಂದು “ಖಾದಿ ಹಬ್ಬ’ ಆಗಲಿದೆ ಎಂದು ಮಂಡಳಿ ಅಧ್ಯಕ್ಷ ಯಲುವಹಳ್ಳಿ ಎನ್. ರಮೇಶ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
228 ಮಳಿಗೆ: ಉತ್ಸವದಲ್ಲಿ ಸುಮಾರು 228ಕ್ಕೂ ಅಧಿಕ ಮಳಿಗೆಗಳು ಇರಲಿದ್ದು, ಈಗಾಗಲೇ ಈ 203 ಆನ್ಲೈನ್ ಅರ್ಜಿಗಳು ಬಂದಿವೆ. ಖಾದಿ ಉತ್ಪನ್ನಗಳ ಮೇಲೆ ಶೇ. 35ರಷ್ಟು ಹಾಗೂ ರೇಷ್ಮೆ ಉತ್ಪನ್ನಗಳ ಮೇಲೆ ಶೇ.20ರಷ್ಟು ರಿಯಾಯ್ತಿ ಇರಲಿದೆ.
ಒಂದೂವರೆ ಲಕ್ಷ ಜನರ ಭೇಟಿ ಮತ್ತು 40 ಕೋಟಿ ರೂ. ವಹಿವಾಟು ನಿರೀಕ್ಷಿಸಲಾಗಿದೆ. ಕಳೆದ ವರ್ಷ ನಡೆದ ಉತ್ಸವದಲ್ಲಿ 1.05 ಲಕ್ಷ ಭೇಟಿ ನೀಡಿದ್ದು, 31 ಕೋಟಿ ರೂ. ವಹಿವಾಟು ನಡೆದಿತ್ತು. ಪ್ರವೇಶ ಶುಲ್ಕ 10 ರೂ. ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಜ.2ರಂದು ಸಂಜೆ 4ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಸಣ್ಣ ಕೈಗಾರಿಕೆ ಮತ್ತು ಸಕ್ಕರೆ ಸಚಿವೆ ಗೀತಾ ಮಹದೇವಪ್ರಸಾದ್ ಮಳಿಗೆಗಳನ್ನು ಉದ್ಘಾಟಿಸುವರು. ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ. ಸದಾನಂದಗೌಡ, ಸಚಿವರಾದ ರಾಮಲಿಂಗಾ ರೆಡ್ಡಿ, ರೋಷನ್ ಬೇಗ್, ಎಚ್.ಎಂ. ರೇವಣ್ಣ, ಎಂ. ಕೃಷ್ಣಪ್ಪ, ಕೃಷ್ಣ ಬೈರೇಗೌಡ, ಸಂಸದ ಎಂ. ವೀರಪ್ಪ ಮೊಯಿಲಿ ಭಾಗವಹಿಸಲಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾದ ಡಾ.ಪಾಟೀಲ ಪುಟ್ಟಪ್ಪ (ಪಾಪು), ಡಾ.ಎಚ್.ಎಸ್. ದೊರೆಸ್ವಾಮಿ ಅವರೂ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಉತ್ಪನ್ನಗಳ ಮೇಲೆ ಚರಕದ ಗುರುತು: ರಾಜ್ಯದಲ್ಲಿ 147 ಖಾದಿ ಸಂಸ್ಥೆಗಳು ಕೆಲಸ ಮಾಡುತ್ತಿದ್ದು, ಇದರಡಿ 29 ಸಾವಿರ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ. ಇದರಲ್ಲಿ ಶೇ. 60ರಷ್ಟು ಮಹಿಳೆಯರಿದ್ದಾರೆ ಎಂದ ಅವರು, ನಿಜವಾದ ಖಾದಿ ಉತ್ಪನ್ನಗಳ ಮೇಲೆ “ಖಾದಿ ಇಂಡಿಯಾ’ದ ಲಾಂಛನ ಚರಕದ ಗುರುತು ಇರುತ್ತದೆ. ಗ್ರಾಹಕರು ಖರೀದಿಸುವಾಗ ಈ ಬಗ್ಗೆ ಪರಿಶೀಲಿಸಿ ದೃಢಪಡಿಸಿಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ಮಂಡಳಿ ನಿರ್ದೇಶಕ ಸೋಮಶೇಖರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯವಿಭವ ಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ