ತರಂಗ ವಾರಪತ್ರಿಕೆ ಸಂಪಾದಕಿ ಡಾ. ಯು.ಬಿ. ರಾಜಲಕ್ಷ್ಮಿಯವರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ
Team Udayavani, Jun 5, 2020, 6:38 PM IST
ಬೆಂಗಳೂರು: ಹಿರಿಯ ಪತ್ರಕರ್ತೆ, ತರಂಗ ವಾರಪತ್ರಿಕೆಯ ಸಂಪಾದಕಿ ಡಾ. ಯು.ಬಿ. ರಾಜಲಕ್ಷ್ಮಿಯವರಿಗೆ ಈ ಬಾರಿಯ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಲಭಿಸಿದೆ.
ಉಡುಪಿಯ ಜಿಲ್ಲೆಯ ಕಾರ್ಕಳದವರಾದ ಡಾ. ಯು.ಬಿ. ರಾಜಲಕ್ಷ್ಮಿ ಕಳೆದ 37 ವರ್ಷಗಳಿಂದ ಪತ್ರಿಕಾ ರಂಗದಲ್ಲಿದ್ದಾರೆ. ಆರಂಭಿಕ ದಿನಗಳಲ್ಲಿ ಕೆಲವು ದಿನಪತ್ರಿಕೆಗಳಲ್ಲಿ ಕೆಲಸ ಮಾಡಿ ನಂತರ 1987 ರಲ್ಲಿ ಉದಯವಾಣಿ ಸೋದರ ಪತ್ರಿಕೆ ತರಂಗ ವಾರಪತ್ರಿಕೆಯಲ್ಲಿ ಸೇವೆ ಆರಂಭಿಸಿ ಈಗ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರು ಮೈಸೂರು ವಿವಿಯಲ್ಲಿ ಕನ್ನಡ ಎಂ.ಎ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪಡೆದು ಹಂಪಿ ವಿವಿಯಲ್ಲಿ ಡಾಕ್ಟರೇಟ್ ಪಡೆದಿದ್ದಾರೆ. ಹಲವು ಕೃತಿಗಳನ್ನು ರಚಿಸಿರುವ ಇವರು ಸಾಕ್ಷ್ಯಚಿತ್ರಗಳನ್ನೂ ನಿರ್ದೇಶಿಸಿದ್ದಾರೆ. ಮಲೇಷ್ಯಾ ಸರ್ಕಾರದ ಆಹ್ವಾನದ ಮೇಲೆ ಅಧ್ಯಯನ ಪ್ರವಾಸ ಕೈಗೊಂಡಿದ್ದರು.
ಡಾ. ಯು.ಬಿ. ರಾಜಲಕ್ಷ್ಮಿ ಅವರ ಪ್ರತಿಕಾರಂಗದ ಸಾಧನೆಯನ್ನು ಪರಿಗಣಿಸಿ, ಖಾದ್ರಿ ಶಾಮಣ್ಣ ಟ್ರಸ್ಟ್ ಈ ವರ್ಷದ ಪ್ರಶಸ್ತಿಯನ್ನು ನೀಡುತ್ತಿದ್ದು, ಪ್ರಶಸ್ತಿ 15 ಸಾವಿರ ರೂ. ನಗದು ಹಾಗೂ ಫಲಕ ಹೊಂದಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!