ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ: ಡಿಕೆಶಿ
Team Udayavani, Oct 25, 2017, 9:29 AM IST
ದಾಖಲೆ ಇದ್ದರೆ ಬಿಎಸ್ವೈ ಸದನ ಸಮಿತಿ ಸಭೆಗೆ ಕೊಡಲಿ ಬೆಂಗಳೂರು: “ಕಲ್ಲಿದ್ದಲು ಖರೀದಿಗಾಗಿ ರಾಜ್ಯ ಸರ್ಕಾರ ಕಾನೂನು ಮೀರಿ ನಡೆದುಕೊಂಡಿದ್ದರೆ ನನ್ನನ್ನು ಗಲ್ಲಿಗೇರಿಸಲಿ’ ಎಂದು ಇಂಧನ ಸಚಿವ ಡಿ. ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯ ಸರ್ಕಾರ ಖಾಸಗಿ ಕಂಪನಿ ಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಆರೋಪ ಸತ್ಯಕ್ಕೆ ದೂರವಾಗಿದೆ. ಕೋಲ್ ಬ್ಲಾಕ್ ಮಾಡುವ ಕುರಿತಂತೆ ಸುಪ್ರೀಂ ಕೋರ್ಟ್ನಲ್ಲಿ ವಾದ ನಡೆದಿದ್ದು, ನವೆಂಬರ್ನಲ್ಲಿ ತೀರ್ಪು ಬರುವ ಸಾಧ್ಯತೆ ಇದೆ’ ಎಂದು ಹೇಳಿದರು. ಹಗರಣದ ಬಗ್ಗೆ ಸೂಕ್ತ ದಾಖಲೆ ಇದ್ದರೆ ಯಡಿಯೂರಪ್ಪ ಅ.30ರಂದು ನಡೆಯುವ ಸದನ ಸಮಿತಿ ಸಭೆಗೆ ತಂದು ಕೊಡಲಿ ಎಂದು ಶಿವಕುಮಾರ್ ಸವಾಲೆಸೆದರು. ಅ.30ರ ಸಭೆಗೆ ಯಾರೇ ಅಸಹಕಾರ ತೋರಿದರೂ, ನವೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ವರದಿ ಮಂಡನೆ ಮಾಡುವುದಾಗಿ ಶಿವಕುಮಾರ್ ಹೇಳಿದರು.
ಅ.28 ಕ್ಕೆ ಪವರ್ ಅವಾರ್ಡ್: ಇಂಧನ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿ ರುವ ಹಾಗೂ ಇಂಧನ ಇಲಾಖೆಗೆ ಪೂರಕ ವಾಗಿ ಕೆಲಸ ಮಾಡಿರುವ 7 ವಿಭಾಗಗಳ (ಖಾಸಗಿ ಕಂಪನಿ ಮತ್ತು ವ್ಯಕ್ತಿ) 174 ಜನರಿಗೆ ಅ.28ರಂದು ಪವರ್ ಅವಾರ್ಡ್
ನೀಡಲಾಗುವುದು ಎಂದು ಹೇಳಿದರು.
ಸದನ ಸಮಿತಿ ವರದಿ ಬಳಿಕ ಮುಂದಿನತೀರ್ಮಾನ: ಸಿದ್ದು
ಬೆಂಗಳೂರು: ಇಂಧನ ಇಲಾಖೆಯಲ್ಲಿ ನಡೆದ ಹಗರಣದ ಕುರಿತು ಡಿ.ಕೆ.ಶಿವಕುಮಾರ್ ನೇತೃತ್ವದ ಸದನ ಸಮಿತಿ ವರದಿ ನೀಡಿದ ತಕ್ಷಣ ಯಾವ ಸಂಸ್ಥೆಗೆ ತನಿಖೆಗೆ ನೀಡಬೇಕೆಂಬುದನ್ನು ತೀರ್ಮಾನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಶೋಭಾ ಕರಂದ್ಲಾಜೆ ಇಂಧನ ಸಚಿವೆಯಾಗಿ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪ ಇದೆ. ಆಗ ಆಗಿರುವ ಅವ್ಯವಹಾರಕ್ಕೆ ಮಂತ್ರಿಯೇ ಜವಾಬ್ದಾರಿಯಾಗಿರುತ್ತಾರೆ. ಈಗ ಶೋಭಾ ಜಾರಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ಸಿಗರನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದ್ದಾರೆ. ಇದರಿಂದ ರಾಜಕೀಯವಾಗಿ ಅನುಕೂಲ ಆಗುತ್ತದೆ ಎಂದು ಬಿಜೆಪಿಯವರು ಭಾವಿಸಿದ್ದಾರೆ. ಐಟಿ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ಬಿಎಸ್ವೈ , ಶೋಭಾ, ಶೆಟ್ಟರ್ ಅವರ ಮನೆಗಳ ಮೇಲೆ ಏಕೆ ಐಟಿ ದಾಳಿಯಾಗುವುದಿಲ್ಲ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ