ಕಿಷ್ಕಿಂಧಾ ಆನೆಗೊಂದಿ ಡ್ರಗ್ ಮಾಫಿಯಾಗಳಿಂದ ಕೂಡಿದೆ: ರಾಯರೆಡ್ಡಿ ಹೇಳಿಕೆಗೆ ವ್ಯಾಪಕ ಖಂಡನೆ


Team Udayavani, Jul 10, 2023, 4:27 PM IST

1-sdsad

ಗಂಗಾವತಿ : ತಾಲೂಕಿನ ಆನೆಗೊಂದಿ ಕಿಷ್ಕಿಂಧಾ ಅಂಜನಾದ್ರಿ ಪ್ರದೇಶ ವ್ಯಾಪಕವಾದ ಡ್ರಗ್ ಮಾಫಿಯಾ ಗಳಿಂದ ಕೂಡಿದೆ ಎಂದು ವಿಧಾನ ಸಭೆಯ ಅಧಿವೇಶನದಲ್ಲಿ ಯಲಬುರ್ಗಾ ಶಾಸಕ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಆನೆಗೊಂದಿ ಭಾಗದಲ್ಲಿ ಹಲವು ದಶಕಗಳಿಂದ ಹೋಟೆಲ್,ರೆಸಾರ್ಟ್ ಮೂಲಕ ಸ್ಥಳೀಯರು ಬದುಕನ್ನು ಕಟ್ಟಿಕೊಂಡಿದ್ದಾರೆ. ಈ ಮಧ್ಯೆ ಹಂಪಿ ಅಭಿವೃದ್ಧಿ ಪ್ರಾಧಿಕಾರ ನಿಯಮ ಉಲ್ಲಂಘನೆ ನೆಪದಲ್ಲಿ‌ ಹೊಟೇಲ್, ರೆಸಾರ್ಟ್ ಗಳನ್ನ ತೆರವುಗೊಳಿಸಿದೆ.ತಡೆಯಾಜ್ಞೆ ಇರುವ ಹೊಟೇಲ್ ಗಳನ್ನು ಸೀಜ್ ಮಾಡಿದೆ.

ಸೋಮವಾರ ಜರುಗಿದ ವಿಧಾನಸಭೆಯ ಅಧಿವೇಶನದಲ್ಲಿ ಗಂಗಾವತಿಯ ಶಾಸಕ ಗಾಲಿ ಜನಾರ್ದನರೆಡ್ಡಿ ಆನೆಗೊಂದಿ ಭಾಗದಲ್ಲಿ ಪ್ರವಾಸೋದ್ಯಮದ ಅನುಕೂಲಕ್ಕಾಗಿ ರೆಸಾರ್ಟ್ ,ಹೋಟೆಲ್ ತೆರವು ಕಾರ್ಯಾಚರಣೆ ನಿಲ್ಲಿಸಬೇಕು . ಅಕ್ರಮ ಸಕ್ರಮಗೊಳಿಸಬೇಕು .ಜತೆಗೆ ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗದ 15 ಗ್ರಾಮಗಳನ್ನು ಕೈಬಿಡಬೇಕು ಮತ್ತು ರೈತರ ಭೂಮಿಯಲ್ಲಿ ಶೇ.5 ರಷ್ಟು ಭೂಮಿಯನ್ನು ಫಾರ್ಮ್ ಹೌಸ್ ನಿರ್ಮಾಣ ಮಾಡಲು ನಿಯಮಗಳನ್ನು ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಆನೆಗೊಂದಿ ಕಿಷ್ಕಿಂಧಾ ಅಂಜನಾದ್ರಿ ಸುತ್ತಮುತ್ತ ಡ್ರಗ್ ಮಾಫಿಯಾ ಹೆಚ್ಚಾಗಿದೆ ಆದ್ದರಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಿಕೆ ನೀಡಿದರು.

ಇದರಿಂದ ಆನೆಗೊಂದಿ ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದ ಪ್ರವಾಸೋದ್ಯಮದ ಮೇಲೆ ವ್ಯತಿರಿಕ್ತವಾದ ಪರಿಣಾಮವಾಗುವ ಸಂಭವವಿದ್ದು ಅಕ್ರಮ ತಡೆಯಲು ಹಲವು ಏಜೆನ್ಸಿಗಳಿದ್ದು ಅವುಗಳ ಮೂಲಕ ಅಕ್ರಮ ತಡೆಯಬೇಕು.ಅದು ಬಿಟ್ಟು ಇಡೀ ಜಗತ್ತಿಗೆ ತಿಳಿಯುವಂತೆ ಆನೆಗೊಂದಿ ಕಿಷ್ಕಿಂಧಾ ಅಂಜನಾದ್ರಿ ಸುತ್ತಲಿನ ಗ್ರಾಮಗಳು ರೈತರ ಕುರಿತು ರಾಯರೆಡ್ಡಿ ಇಂತಹ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಆನೆಗೊಂದಿ ಭಾಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಂಡನೆ
ಆನೆಗೊಂದಿ ಭಾಗದ ಜನರು ಹಂಪಿ ಅಭಿವೃದ್ಧಿ ಪ್ರಾಧಿಕಾರ ಪದೇ ಪದೇ ಹೊಟೇಲ್ ಗಳ ತೆರವು ಕಾರ್ಯಾಚರಣೆಯಿಂದ ಪ್ರವಾಸೋದ್ಯಮ ನೆಲಕಚ್ಚಿದ್ದು ಇದರಿಂದ ಬದುಕು ಸಾಗಿಸಲು ಸೆಣಸಾಡುವ ಸಂದರ್ಭದಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ತಮ್ಮದಲ್ಲದ ಕ್ಷೇತ್ರದ ವಿಚಾರದಲ್ಲಿ ತಲೆ ಹಾಕಿ ಇತಿಹಾಸ ಪ್ರಸಿದ್ದ ಪ್ರದೇಶವನ್ನು ಡ್ರಗ್ ಮಾಫಿಯಾ ಎಂದು ಕರೆಯುವ ಮೂಲಕ ಆನೆಗೊಂದಿ ಕಿಷ್ಕಿಂಧಾ ಅಂಜನಾದ್ರಿ ಪ್ರದೇಶದ ಜನರನ್ನು ಅವಮಾನಿಸಿರುವುದು ಖಂಡನೀಯ ಎಂದು ಮಾಜಿ ಎಂಎಲ್ಸಿ ಎಚ್.ಆರ್.ಶ್ರೀ ನಾಥ ಹಾಗೂ ಸುಗ್ರೀವ ಸೇನೆ ಮತ್ತು ಬಿಜೆಪಿ ಮುಖಂಡ ಸಂಗಮೇಶ ಸುಗ್ರೀವ ಖಂಡಿಸಿದ್ದಾರೆ. ಕೂಡಲೇ ಹೇಳಿಕೆ ವಾಪಸ್ ಪಡೆದು ಆನೆಗೊಂದಿ ಭಾಗದ ಜನರ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ‌.

ಟೀಕೆ ಮಾಡಿಲ್ಲ
ಉದಯವಾಣಿ ಜತೆ ಮಾತನಾಡಿದ ಯಲಬುರ್ಗಾ ಶಾಸಕ ಬಸರಾಜರಾಯರೆಡ್ಡಿ, ನಾನು ರೆಸಾರ್ಟ್ ಹೋಟೆಲ್ ಗಳ ವಿರುದ್ಧ ಇಲ್ಲ ಡ್ರಗ್ ಮಾಫಿಯಾ ವಿರುದ್ಧ ಇದ್ದೇನೆ. ಆನೆಗುಂದಿ ಭಾಗದಲ್ಲಿ ನಡೆಯುವ ಡ್ರಗ್ ಮಾಫಿಯಾ ನಿಯಂತ್ರಣ ಮಾಡಿ ವ್ಯಾಪಾರ ವಹಿವಾಟಿಗೆ ಅನುಕೂಲ ಮಾಡಿಕೊಡುವಂತೆ ಸರ್ಕಾರವನ್ನು ನಾನು ಸಹ ಮನವಿ ಮಾಡಿದ್ದೆ ಹೊರತು ಆನೆಗೊಂದಿ ಭಾಗವನ್ನು ಡ್ರಗ್ ಮಾಫಿಯಾ ಎಂದು ಟೀಕೆ ಮಾಡಿಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.