ಕೊಡಗು;ಕೊಚ್ಚಿ ಹೋದ ಬದುಕು,ಮತ್ತೊಂದೆಡೆ ನೆರೆ ಪ್ರದೇಶದಲ್ಲಿ ಕಳ್ಳರ ಕಾಟ
Team Udayavani, Aug 20, 2018, 4:31 PM IST
ಕೊಡಗು/ಮಡಿಕೇರಿ: ಕಂಡು ಕೇಳರಿಯದ ರೀತಿಯಲ್ಲಿ ಕೊಡಗು ಮಹಾಮಳೆಗೆ ತತ್ತರಿಸಿ ಹೋಗಿದ್ದರೆ, ಮತ್ತೊಂದೆಡೆ ನೆರೆ ಪೀಡಿತ ಪ್ರದೇಶಗಳಲ್ಲಿ ಕಳ್ಳರ ಹಾವಳಿಗೆ ಜನ ಬೆಚ್ಚಿ ಬಿದ್ದಿದ್ದಾರೆ. ಮಡಿಕೇರಿಯ ಜೋಡುಪಾಲದ ಸುತ್ತಮುತ್ತಲಿನಲ್ಲಿ ಸುಮಾರು 30 ಮನೆಗಳಿಗೆ ಕನ್ನ ಹಾಕಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ನೆರೆ ಪೀಡಿತ ಪ್ರದೇಶಗಳಲ್ಲಿ ಗುಂಪು, ಗುಂಪಾಗಿ ಬರುವ ತಂಡ ಮನೆಯ ಹೆಂಚುಗಳನ್ನು ಇಳಿಸಿ ಚಿನ್ನಾಭರಣ, ಹಣ, ವಾಹನಗಳನ್ನು ಕದ್ದೊಯ್ಯುತ್ತಿದ್ದಾರೆ ಎಂದು ವರದಿ ವಿವರಿಸಿದೆ.
ಮಳೆಯ ಅಬ್ಬರದಿಂದ ಜೀವ ಉಳಿಸಿಕೊಳ್ಳಲು ಜನರು ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಈ ಪರಿಸ್ಥಿತಿಯನ್ನೇ ಬಳಸಿಕೊಂಡ ಖದೀಮರು ಊರಿನೊಳಗೆ ಹೋಗಿ ಕಳ್ಳತನಕ್ಕೆ ಇಳಿದಿದ್ದಾರೆ.
ಈ ಬಗ್ಗೆ ಅಲರ್ಟ್ ಆಗಿರುವ ಪೊಲೀಸ್ ಇಲಾಖೆ ಇದೀಗ ದಕ್ಷಿಣ ಕನ್ನಡ, ಕೊಡಗು ಗಡಿಯಲ್ಲಿ ಸಂಪಾಜೆ ಬಳಿ ಚೆಕ್ ಪೋಸ್ಟ್ ಗಳನ್ನು ಹಾಕಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಲು ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…