3 ಸಾವಿರಕ್ಕೂ ಅಧಿಕ ಮಂದಿಗೆ ಮನೆಯಲ್ಲೇ ಚಿಕಿತ್ಸೆ : ಮನೆಗಳಿಗೆ ಔಷಧಿ ವಿತರಿಸಲು ಸೂಚನೆ
Team Udayavani, Jan 20, 2022, 4:26 PM IST
ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ವಿಪರೀತವಾಗಿ ಹರಡುತ್ತಿದ್ದು, ಶಾಲಾ ಮಕ್ಕಳು ಸೇರಿದಂತೆ 3 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರಿದ್ದಾರೆ. ಈ ಪೈಕಿ ಬಹುತೇಕ ಸೋಂಕಿತರು ಮನೆಗಳಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಆಸ್ಪತ್ರೆಗಳ ಮೇಲೆ ಒತ್ತಡ ಇಲ್ಲವಾಗಿದೆ.
ಮಾರಣಾಂತಿಕವಲ್ಲದ ಕೊರೊನಾ 3ನೇ ಅಲೆ ಎದುರಿಸಲು ಜಿಲ್ಲಾಡಳಿತ ಮನೆಗಳಿಗೆ ಔಷಧಿ ವಿತರಿಸಲು, ರೋಗಿಗಳ ಮಾಹಿತಿ ಸಂಗ್ರಹಿಸಲು ಮತ್ತು ಕೋವಿಡ್ ಮಾರ್ಗಸೂಚಿ ಪಾಲನೆ ನಿಗಾವಹಿಸಲು ವ್ಯವಸ್ಥೆ ಮಾಡಿದೆ.
ಫೀವರ್ ಕ್ಲಿನಿಕ್: ಕೋಲಾರ ಜಿಲ್ಲೆಯಲ್ಲಿ 74 ಪ್ರಾಥಮಿಕ ಆರೋಗ್ಯ ಕೇಂದ್ರ, 4 ಜನರಲ್ ಆಸ್ಪತ್ರೆ, 2 ಜಿಲ್ಲಾಸ್ಪತ್ರೆ ಹಾಗೂ 2 ಸಮುದಾಯ ಆರೋಗ್ಯಕೇಂದ್ರ ಸೇರಿ ಒಟ್ಟು 82 ಆರೋಗ್ಯ ಕೇಂದ್ರಗಳಲ್ಲಿಯೂ ಫೀವರ್ ಕ್ಲಿನಿಕ್ ತೆರೆಯಲು ಆರೋಗ್ಯ ಇಲಾಖೆ ಸೂಚಿಸಿದೆ. ಲಭ್ಯಇರುವ ವೈದ್ಯರು ಹಾಗೂ ಸಿಬ್ಬಂದಿಯನ್ನೇ ಬಳಸಿಕೊಂಡು ದಿನದ 24 ಗಂಟೆಯೂ ಸೋಂಕಿತರಿಗೆ ಚಿಕಿತ್ಸೆ ಮತ್ತು ಅಗತ್ಯ ಔಷಧಿ ಸಿಗುವಂತೆ ಮಾಡಲು ಸೂಚನೆ ನೀಡಲಾಗಿದೆ. ಕೊರೊನಾ ಚಿಕಿತ್ಸೆ ಔಷಧಿಗಳು ಬಹುತೇಕ ಆಸ್ಪತ್ರೆಗಳಲ್ಲಿ ದಾಸ್ತಾನಿದ್ದು, ಅಗತ್ಯ ಔಷಧಿ ನಿಗದಿತ ಅನುದಾನದಿಂದ ಖರೀದಿಸಲು ಅನುಮತಿಸಲಾಗಿದೆ. ಕೋಲಾರ ತಾಲೂಕಿನಲ್ಲಿ ಸಿಎಂಆರ್ ಫೌಂಡೇಷನ್ ಸುಮಾರು 3 ಸಾವಿರ ಔಷಧಿ ಕಿಟ್ ಆರೋಗ್ಯ ಇಲಾಖೆಗೆ ನೀಡುವ ಮೂಲಕ
ಜನರ ಚಿಕಿತ್ಸೆಗೆ ಸ್ಪಂದಿಸುತ್ತಿದೆ.
ನಿತ್ಯ ವರದಿ ನೀಡಲು ಸೂಚನೆ: ಆರೋಗ್ಯ ಇಲಾಖೆ ತನ್ನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಂರಕ್ಷಣಾಧಿಕಾರಿ, ಆರೋಗ್ಯ ನಿರೀಕ್ಷಕರಿಗೆ ಅಗತ್ಯ ಸೂಚನೆ ನೀಡಿದ್ದು, ಆಯಾ ಆರೋಗ್ಯ ಕೇಂದ್ರ ವ್ಯಾಪ್ತಿಯ ಸೋಂಕಿತರ ಸ್ಥಿತಿಗತಿ ಕುರಿತಂತೆ ನಿತ್ಯವೂ ಮಾಹಿತಿ ಸಂಗ್ರಹಿಸಿ ಆರೋಗ್ಯಾಧಿಕಾರಿಗಳ ಕಚೇರಿಗೆ ಕಳುಹಿಸಲು ಆದೇಶ
ಹೊರಡಿಸಲಾಗಿದೆ.
ಇದನ್ನೂ ಓದಿ : ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್
ಸಂಪರ್ಕಿತರ ಪತ್ತೆಗೆ ಕ್ರಮ : ಆರೋಗ್ಯಸಿಬ್ಬಂದಿ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರ ಪತ್ತೆ ಹಚ್ಚಿ ಆರೋಗ್ಯ ಸ್ಥಿತಿಗತಿ ಕುರಿತಂತೆ ನಿಗಾವಹಿಸಲಾಗುತ್ತಿದೆ. ಅಗತ್ಯವಿದ್ದರೆ ಅಂತವರ ಗಂಟಲ ಮೂಗಿನ ದ್ರವ ಪರೀಕ್ಷೆಗೆ ಕಳುಹಿಸಿ 24 ಗಂಟೆಯೊಳಗಾಗಿ ಫಲಿತಾಂಶ ಸಿಗುವಂತೆ ಮಾಡಲು ಸೂಚಿಸಲಾಗಿದೆ.
ಕೊರೊನಾ ಚಿಕಿತ್ಸೆಗೆ ಬಳಸುವ ಔಷಧಿಗಳು ಏನೇನು?
ಆಯುಕ್ತಾಲಯ ಹೊರಡಿಸಿರುವ ಸುತ್ತೋಲೆ ಪ್ರಕಾರ ಕೋವಿಡ್ 19 ಹೋಂ ಐಸೋಲೇಷನ್ನಲ್ಲಿರುವ ಸೋಂಕಿತರಿಗೆ ನೀಡಬೇಕಾದ ಕಿಟ್ನಲ್ಲಿ ವಿಟಮಿನ್ ಸಿ, ಜಿಂಕ್, ಪ್ಯಾರಸೆಟಮಾಲ್, ಸಿಟ್ರಿಜನ್, ಪಾಂಟೋಪ್ರೋಜಲ್, ಕೆಮ್ಮಿನ ಔಷಧಿಗಳು ಕಡ್ಡಾಯವಾಗಿ ಇರುವಂತೆ ಸೂಚಿಸಲಾಗಿದೆ. ಜತೆಗೆ ಕಿಟ್ನಲ್ಲಿ ಮೂರು ಪದರದ 10ಮಾಸ್ಕ್ ಮತ್ತು ಕೈ ಸ್ವತ್ಛತೆಗೆ ಸ್ಯಾನಿಟೈಜರ್ ಬಾಟಲ್ ಇಡಲು ನಿರ್ದೇಶಿಸಲಾಗಿದೆ. ಮನೆಯಲ್ಲಿ ಪ್ರತ್ಯೇಕವಾಗಿರುವ ಕೋವಿಡ್ ದೃಢಪಟ್ಟ ವ್ಯಕ್ತಿ ಪಾಲಿಸಬೇಕಾದ ಸೂಚನೆಗಳನ್ನು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ರವಾನಿಸಿ ಪಾಲಿಸುವಂತೆ ಸೋಂಕಿತರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ.
– ಕೆ.ಎಸ್.ಗಣೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…