ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಭಕ್ತ ಸಾಗರ
Team Udayavani, Sep 14, 2019, 3:00 AM IST
ಕೊಲ್ಲೂರು: ಓಣಂ ಹಬ್ಬದ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನಕ್ಕೆ ರಾಜ್ಯ ಹಾಗೂ ಕೇರಳ ಸೇರಿ ಇತರ ರಾಜ್ಯಗಳಿಂದ ದಾಖಲೆಯ 15 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದರು. ಹೀಗಾಗಿ ದೇವಿಯ ದರ್ಶನ ಪಡೆಯಲು ಭಕ್ತರು ಹಲವು ಗಂಟೆಗಳವರೆಗೂ ಕಾಯಬೇಕಾಯಿತು.
ದೇವಸ್ಥಾನದಲ್ಲಿ ಚಂಡಿಕಾಹೋಮ ಸಹಿತ ವಿದ್ಯಾರಂಭದ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಯಿತು. ಸತತವಾಗಿ ಸುರಿಯುತ್ತಿರುವ ಮಳೆಯ ನಡುವೆಯೇ ಭಕ್ತರನ್ನು ನಿಯಂತ್ರಿಸಲು ದೇವಸ್ಥಾನದ ಭದ್ರತಾ ಸಿಬ್ಬಂದಿ ಹರಸಾಹಸ ಪಟ್ಟರು. ಜತೆಗೆ ವಸತಿಗೃಹಗಳು ಭರ್ತಿಯಾಗಿದ್ದರಿಂದ, ಭಕ್ತರು ಕುಂದಾಪುರ ಮತ್ತು ಹೆಮ್ಮಾಡಿ ಪರಿಸರದಲ್ಲಿ ತಂಗಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ