ಕೆ.ಎನ್ ರಾಜಣ್ಣಗೆ ಕೆಪಿಸಿಸಿ ನೋಟಿಸ್
Team Udayavani, Feb 13, 2019, 12:30 AM IST
ಬೆಂಗಳೂರು: ಸಮ್ಮಿಶ್ರ ಸರಕಾರ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡಿದ್ದ ಮಾಜಿ ಶಾಸಕ ಕೆ.ಎನ್. ರಾಜಣ್ಣಗೆ ಕೆಪಿಸಿಸಿ ನೋಟಿಸ್ ನೀಡಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೂಚನೆ ಮೇರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಶಫಿವುಲ್ಲಾ ನೋಟಿಸ್ ಜಾರಿಗೊಳಿಸಿದ್ದು, ಸಮ್ಮಿಶ್ರ ಸರಕಾರ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯ ಬಗ್ಗೆ ಯಾವುದೇ ರೀತಿಯ ಹೇಳಿಕೆಗಳನ್ನು ನೀಡದಂತೆ ಪಕ್ಷ ಈಗಾಗಲೇ ಸೂಚನೆ ನೀಡಿದ್ದರೂ ತಾವು ಮತ್ತೆ ಪಕ್ಷದ ಶಿಸ್ತು ಉಲ್ಲಂ ಸಿ ಸರಕಾರದ ವಿರುದ್ಧ ಹೇಳಿಕೆ ನೀಡಿರುವುದನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಏಕೆ ಪರಿಗಣಿಸಬಾರದು. ಈ ಬಗ್ಗೆ ಮೂರು ದಿನಗಳಲ್ಲಿ ಉತ್ತರ ನೀಡುವಂತೆ ರಾಜಣ್ಣ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.