ಸರ್ಕಾರ ಲಾಕ್‌ ಡೌನ್ ಅವಧಿಯಲ್ಲಿ ಮದ್ಯಮಾರಾಟದಿಂದ ದಾಖಲೆಯ ಆದಾಯ ಗಳಿಸಿದೆ : ಡಿಕೆಶಿ


Team Udayavani, Jun 3, 2021, 5:46 PM IST

KPCC President D K Shivakumar

ಮಂಡ್ಯ :  ಜನರಿಗೆ ಲಸಿಕೆ ನೀಡುವಲ್ಲಿ‌ ವಿಫಲವಾಗಿರುವ ಸರ್ಕಾರ, ಲಾಕ್‌ ಡೌನ್ ಅವಧಿಯಲ್ಲಿ ಮದ್ಯಮಾರಾಟದಿಂದ ದಾಖಲೆಯ ಆದಾಯ ಗಳಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ವಿಷಾಧ ವ್ಯಕ್ತಪಡಿಸಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಎಲ್ಲಾ ರೀತಿಯಿಂದಲೂ ಈ ಸರ್ಕಾರ ವಿಫಲವಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮದ್ಯಮಾರಾಟದಿಂದ 3,650 ಕೋಟಿ ರೂಪಾಯಿ ಅಬಕಾರಿ‌ ಆದಾಯ ಗಳಿಕೆಯಾಗಿದ್ದು, ಕಳೆದ ವರ್ಷ 1,404.08 ಕೋಟಿ‌ ಆದಾಯ ಗಳಿಸಲಾಗಿತ್ತು. ಖಜಾನೆಯಲ್ಲಿ‌ ಸಾಕಷ್ಟು ಹಣವಿದ್ದರೂ ಜನರಿಗೆ ಲಸಿಕೆ ಒದಗಿಸಲು ರಾಜ್ಯ‌‌ಸರ್ಕಾರಕ್ಕೆ ಸಾಧ್ಯವಾಗಿಲ್ಲ.” ಎಂದು ಹೇಳಿದ್ದಾರೆ.

ಇದನ್ನೂ ಓದಿ : ತಜ್ಞರ ತಂಡ ರಚಿಸಿ ಸಮುದಾಯ ಆರೋಗ್ಯ ಕಾಪಾಡಿ: ಸರ್ಕಾರಕ್ಕೆ ಖಂಡ್ರೆ ಒತ್ತಾಯ

ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿರುವ ಕೋವಿಡ್ ಪರಿಹಾರ ಕಾರ್ಯಗಳನ್ನು ಪರಿಶೀಲಿಸಲು ಕೆಪಿಸಿಸಿ ಅಧ್ಯಕ್ಷರು ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 2 ದಿನಗಳ ಪ್ರವಾಸ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷವು ಲಸಿಕೆಗಳನ್ನು ನೇರವಾಗಿ ಖರೀದಿಸಿ, ವಿತರಿಸಲು ಸರ್ಕಾರವು ಅನುಮತಿ ನೀಡಬೇಕು. ಯೋಜನೆ ಹಾಗೂ ಸಂಪನ್ಮೂಲಗಳನ್ನು ಹೊಂದಿಸಿಕೊಂಡುರಾಜ್ಯಾದ್ಯಂತ ಲಸಿಕಾ ಅಭಿಯಾನ ನಡೆಸಲು ನಾವು ಸಿದ್ಧರಿದ್ದೇವೆ. ಈಗಾಗಲೇ ನಾವು 100 ಕೋಟಿಯನ್ನು ತೆಗೆದಿರಿಸಿದ್ದೇವೆ. ಬಿಜೆಪಿಗಿಂತಲೂ ಉತ್ತಮವಾಗಿ ಲಸಿಕಾ‌ ಅಭಿಯಾನ ನಡೆಸುವ ಆತ್ಮವಿಶ್ವಾಸ ನಮ್ಮಲ್ಲಿದೆ” ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಇನ್ನು,  ತಮ್ಮ ಉತ್ಪನ್ನಗಳಿಗೆ ನ್ಯಾಯಯುತವಾದ ಬೆಲೆ ಪಡೆಯಲು ರೈತರಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರವೇ ನೇರವಾಗಿ ರೈತರಿಂದ ಉತ್ಪನ್ನಗಳನ್ನು ಖರೀದಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ವ್ಯವಸ್ಥೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಈ ಸರ್ಕಾರವು ರೈತರನ್ನು ಸಾವಿನ ದವಡೆಗೆ ದೂಡುತ್ತಿದೆ. ರೈತರಿಗೆ ಅತಿಕಡಿಮೆ‌ ಬೆಲೆಗೆ ಉತ್ಪನ್ನಗಳನ್ನು‌ ಮಾರುವ ಪರಿಸ್ಥಿತಿ ಉಂಟಾಗಿದೆ. ಅವರಿಗೆ ಸಿಗುತ್ತಿರುವ ಬೆಲೆ ಅತ್ಯಂತ ಕಡಿಮೆ ಮತ್ತು ಅಸಮರ್ಪಕವಾದದ್ದು.” ಎಂದು ಕಿಡಿ ಕಾರಿದ್ದಾರೆ.

ಇನ್ನು,  ಕೋವಿಡ್‌ ನಿಂದ ಸಂಕಷ್ಟಕ್ಕೊಳಗಾದ ರೈತರು, ಕಾರ್ಮಿಕರು ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಕಾಂಗ್ರೆಸ್ ಬೆಂಬಲ‌ ನೀಡಿ, ಅವರೊಡನೆ ಯಾವತ್ತೂ ಇರುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.

ಮಂಡ್ಯ ಮತ್ತು‌ ಹಾಸನ ಜಿಲ್ಲೆಗಳಲ್ಲಿ ರೇಶನ್ ಕಿಟ್‌ ಗಳನ್ನು ವಿತರಿಸಿ, ಆಂಬ್ಯುಲನ್ಸ್ ಸೇವೆಗೆ ಚಾಲನೆ ನೀಡಿದರು. ಕೋವಿಡ್ ಪರಿಸ್ಥಿತಿಯ ಅವಲೋಕನಕ್ಕಾಗಿ, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಹುರಿದುಂಬಿಸಲು, ಯುವ ಘಟಕ, ಮಹಿಳಾ ಘಟಕ, ರೈತ ಘಟಕ ಮತ್ತು ಸೇವಾ ದಳದ ಕಾರ್ಯಗಳನ್ನು ಉತ್ತೇಜಿಸಲು ಕೆಪಿಸಿಸಿ ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ.

ಇದನ್ನೂ ಓದಿ : ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.