ಕೆಪಿಜೆಪಿ ವಿಲೀನಕ್ಕೆ ಸಮರ್ಥನೆ
Team Udayavani, Jun 19, 2019, 3:02 AM IST
ಬೆಂಗಳೂರು: ಕೆಪಿಜೆಪಿ ಪಕ್ಷವನ್ನು ಕಾಂಗ್ರೆಸ್ನಲ್ಲಿ ವಿಲೀನ ಮಾಡಿರುವ ನಿರ್ಧಾರವನ್ನು ಸಚಿವ ಆರ್.ಶಂಕರ್ ಸಮರ್ಥಿಸಿಕೊಂಡಿದ್ದಾರೆ.
ಸಚಿವರಾದ ಮೇಲೆ ಕೆಪಿಸಿಸಿ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿ, ಕೆಪಿಸಿಸಿ ಅಧ್ಯಕ್ಷರನ್ನು ಅಭಿನಂದಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕೆಪಿಜೆಪಿಯಿಂದ ನಾನೊಬ್ಬನೇ ಗೆದ್ದಿದ್ದೇನೆ.
ಪಕ್ಷದ ಮೂರನೇ ಒಂದು ಭಾಗ ಬಹುಮತದ ಪ್ರಕಾರ ನಾನು ಕಾಂಗ್ರೆಸ್ಗೆ ಸೇರಿದ್ದೇನೆ. ನಾನು ಕಾಂಗ್ರೆಸ್ ಪಕ್ಷದ ಜೊತೆ ಇದ್ದೇನೆ. ಮುಂದೆ ಕಾಂಗ್ರೆಸ್ ಪಕ್ಷ ಕಟ್ಟುತ್ತೇನೆ. ಕಾನೂನು ಚೌಕಟ್ಟಿನಲ್ಲಿ ಕಾಂಗ್ರೆಸ್ನ ಅಧಿಕೃತ ಸದಸ್ಯತ್ವ ಪಡೆಯುವ ಪ್ರಕ್ರಿಯೆ ನಡೆಸಿದ್ದೇನೆ’ ಎಂದು ಹೇಳಿದರು.
ಇದೇ ವೇಳೆ, ಕಾಂಗ್ರೆಸ್ ಕೋಟಾದಲ್ಲಿ ಪೌರಾಡಳಿತ ಖಾತೆ ಒಂದೇ ಇರುವುದರಿಂದ ಅದೇ ಖಾತೆ ನೀಡುವ ವಿಶ್ವಾಸ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ