ಕಾಂಗ್ರೆಸ್‍ನೊಂದಿಗೆ ಕೆಪಿಜೆಪಿ ವಿಲೀನವಾಗಿಲ್ಲ: ಮಹೇಶ್‌ಗೌಡ


Team Udayavani, Jun 18, 2019, 3:00 AM IST

Udayavani Kannada Newspaper

ಬೆಂಗಳೂರು: ಅಧಿಕಾರ ಮತ್ತು ಹಣದ ದುರಾಸೆಯಿಂದ ಕೆಲವರು ಕರ್ನಾಟಕ ಪ್ರಜ್ಞಾವಂತ ಪಕ್ಷವನ್ನು ಕಾಂಗ್ರೆಸ್‌ ಪಕ್ಷದೊಂದಿಗೆ ವಿಲೀನ ಮಾಡಲಾಗುತ್ತಿದೆ ಎಂದು ವಂದತಿ ಹಬ್ಬಿಸುತ್ತಿದ್ದಾರೆ. ಆದರೆ, ಕರ್ನಾಟಕ ಪ್ರಜ್ಞಾವಂತ ಪಕ್ಷ ಯಾವುದೇ ಪಕ್ಷದೊಂದಿಗೆ ವಿಲೀನಗೊಂಡಿಲ್ಲ ಎಂದು ಕೆಪಿಜೆಪಿ ರಾಜ್ಯಾಧ್ಯಕ್ಷ ಮಹೇಶ್‌ ಗೌಡ ಸ್ಪಷ್ಟಪಡಿಸಿದ್ದಾರೆ.

ಹೀಗಾಗಿ, ಕೆಪಿಜೆಪಿಯನ್ನು ಕಾಂಗ್ರೆಸ್‌ ಜತೆ ವಿಲೀನಗೊಳಿಸುವ ಪತ್ರವನ್ನು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಕೊಟ್ಟು ಸಚಿವರಾಗಿರುವ ಆರ್‌.ಶಂಕರ್‌ ಅವರಿಗೆ ವಿಘ್ನ ಎದುರಾದಂತಾಗಿದೆ.

ಈಗಾಗಲೇ ಶಂಕರ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿಯೂ ಆಗಿರುವುದರಿಂದ ಏನೂ ಸಮಸ್ಯೆ ಆಗುವುದಿಲ್ಲ. ಆದರೂ, ಕೆಪಿಜೆಪಿ ರಾಜ್ಯಾಧ್ಯಕ್ಷರೇ ವಿಲೀನ ಆಗಿಲ್ಲ ಎಂದು ಹೇಳಿರುವುದರಿಂದ ಶಂಕರ್‌ ಮತ್ತೆ ಬಿಜೆಪಿಗೆ ಬೇಕಾದರೂ ಹೋಗಲು ಅಡ್ಡಿಯಾಗುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಮಹೇಶ್‌ಗೌಡ, ರಾಣಿಬೆನ್ನೂರು ಶಾಸಕ ಹಾಗೂ ಸಚಿವ ಆರ್‌. ಶಂಕರ್‌ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಮತ್ತು ಅಧಿಕಾರದ ದುರಾಸೆಗಾಗಿ ನಮ್ಮ ಪಕ್ಷವನ್ನು ಕಾಂಗ್ರೆಸ್‌ ಪಕ್ಷದೊಂದಿಗೆ ವಿಲೀನಗೊಳಿಸಲಾಗಿದೆ ಎಂದು ಹೇಳಿರುವುದರಿಂದ ಪಕ್ಷದ ಕಾರ್ಯಕರ್ತರು ಆತಂಕಕ್ಕೆ ಒಳಗಾಗಿದ್ದಾರೆ. ನಮ್ಮ ಪಕ್ಷವು ಸ್ವತಂತ್ರ ಪಕ್ಷವಾಗಿಯೇ ಇದೆ. ಯಾವ ಪಕ್ಷದೊಂದಿಗೂ ವಿಲೀನಗೊಳ್ಳಲಿಲ್ಲ ಎಂದು ಹೇಳಿದರು.

ಶಂಕರ್‌ಗೆ ಅವರ ಶಾಸಕ ಸ್ಥಾನವನ್ನು ವಿಲೀನ ಮಾಡಿಕೊಳ್ಳುವ ಅಧಿಕಾರವಿದೆ. ಆದರೆ, ಪಕ್ಷವನ್ನಲ್ಲ. ಆದ್ದರಿಂದ ಅವರು ಪಕ್ಷವನ್ನು ವಿಲೀನಗೊಳಿಸುವುದಾಗಿ ಪತ್ರ ಬರೆದಿರುವುದು ಅಸಿಂಧು. ನಮ್ಮ ಪಕ್ಷವನ್ನು ಯಾವುದೇ ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.