KPSC ಬಿಕ್ಕಟ್ಟು: 2,500 ಹುದ್ದೆಗಳು ಅತಂತ್ರ

2,500 ಹುದ್ದೆಗಳ ನೇಮಕಾತಿಗಳಿಗೆ ಹಲವು ತಕರಾರು... ಕೆಎಸ್‌ಎಟಿ, ಹೈಕೋರ್ಟ್‌ನಲ್ಲಿ ಅರ್ಜಿ

Team Udayavani, Jan 5, 2024, 6:40 AM IST

kpsc

ಬೆಂಗಳೂರು: ಪರೀಕ್ಷಾ ಅಕ್ರಮ, ನೇಮಕಾತಿ ವಿಳಂಬ ಆರೋಪಗಳಿಂದ ಹೊರಬರಲು ಹೆಣಗುತ್ತಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಕ್ಕೆ ಈಗ ಕಾಲಮಿತಿಯೊಳಗೆ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು “ಕಾನೂನು’ ಅಡ್ಡಿ ಬರುತ್ತಿದೆ. ನೇಮಕಾತಿ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ಹಾಗೂ ಹೈಕೋರ್ಟ್‌ ಮೆಟ್ಟಿಲೇರುತ್ತಿರುವುದು ಈ ಕಾನೂನು ಅಡ್ಡಿಗೆ ಕಾರಣವಾಗಿದೆ.

ಎರಡು ವರ್ಷಗಳಲ್ಲಿ ಪ್ರಾರಂಭಿಸಲಾದ ನೇಮಕಾತಿ ಪ್ರಕ್ರಿಯೆಗಳ ಪೈಕಿ ಬಹುಪಾಲು ನೇಮಕಾತಿ ಪ್ರಕರಣಗಳು ಒಂದಿಲ್ಲೊಂದು ಕಾನೂನು ಸಮಸ್ಯೆಯನ್ನು ಎದುರಿಸುತ್ತಿವೆ. ಇದು ನೇಮಕಾತಿ ಪ್ರಕ್ರಿಯೆ ವಿಳಂಬಕ್ಕೆ ಕಾರಣವಾಗಿದೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ 2021 ಮತ್ತು 2022ರಲ್ಲಿ ಅಧಿಸೂಚನೆ ಹೊರಡಿಸಿ ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿತ್ತು. ಇದಲ್ಲದೇ 2018ರಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆಯಲ್ಲಿನ 1,400ಕ್ಕೂ ಹೆಚ್ಚು ಸಿ ಗ್ರೂಪ್‌ ಹುದ್ದೆಗಳ ನೇಮಕಾತಿ ಸಹಿತ ಎರಡು ವರ್ಷಗಳಲ್ಲಿ 3,800ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿತ್ತು. ಅದರಲ್ಲಿ 2,500ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ವಿಚಾರವಾಗಿ ಕೆಎಸ್‌ಎಟಿ ಹಾಗೂ ಹೈಕೋರ್ಟ್‌ ಮೆಟ್ಟಿಲೇರಲಾಗಿದೆ. ಹಾಗಾಗಿ ಇಷ್ಟು ಹುದ್ದೆಗಳ ಸ್ಥಿತಿ ಅತಂತ್ರವಾಗಿದೆ.

ಕೆಲವು ಪ್ರಕರಣಗಳಲ್ಲಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಮೆಟ್ಟಿಲೇರಿದ್ದರಿಂದ ತಡೆಯಾಜ್ಞೆ ಎದುರಾಗಿದೆ. ಕೆಲವು ಪ್ರಕರಣಗಳಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿಗೆ, ಇನ್ನೂ ಕೆಲವು ಪ್ರಕರಣಗಳಲ್ಲಿ ಅಂತಿಮಪಟ್ಟಿ ಪ್ರಕಟನೆಗೆ ತಡೆ ಇದೆ. ಈ ಪ್ರಕರಣಗಳು ಹೈಕೋರ್ಟ್‌ ಮೆಟ್ಟಿಲೇರಿ ಅಲ್ಲಿ ಕೆಲವು ಪ್ರಕರಣಗಳಲ್ಲಿ ಕೆಎಸ್‌ಎಟಿ ಆದೇಶವನ್ನು ಎತ್ತಿಹಿಡಿಯಲಾಗಿದ್ದರೆ, ಕೆಲವು ಪ್ರಕರಣಗಳಲ್ಲಿ ಕೆಎಸ್‌ಎಟಿ ಆದೇಶಕ್ಕೆ ತಡೆ ಇದೆ. ಅಂಥ ಪ್ರಕರಣಗಳು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇವೆ. ಕೆಲವು ಪ್ರಕರಣಗಳಲ್ಲಿ ನೇರವಾಗಿ ಹೈಕೋರ್ಟ್‌ ತಡೆ ನೀಡಿರುವ ಉದಾಹರಣೆಗಳೂ ಇವೆ. ನೇಮಕಾತಿ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಲು ಪ್ರಮುಖ ಕಾರಣಗಳಲ್ಲಿ ಮೀಸಲಾತಿ ವಿಚಾರವೂ ಸೇರಿಕೊಂಡಿದೆ.

ಮುಖ್ಯವಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 288 ಸಹಾಯಕ ಎಂಜಿನಿಯರ್‌ ಗ್ರೇಡ್‌-1 ಹುದ್ದೆಗಳು, 133 ಕಿರಿಯ ಅಭಿಯಂತರರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ 23 ನಗರ ಯೋಜಕರು, 60 ಸಹಾಯಕ ನಗರ ಯೋಜಕರು, ಪೌರಾಡಳಿತ ನಿರ್ದೇಶನಾಲಯದ 89 ಕಿರಿಯ ಸಿವಿಲ್‌ ಅಭಿಯಂತರರು, 57 ಕಿರಿಯ ಆರೋಗ್ಯ ನಿರೀಕ್ಷಕರ ಹುದ್ದೆಗಳ ನೇಮಕಾತಿ ಕೆಎಸ್‌ಎಟಿ ಮತ್ತು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ. ಇದರಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 288 ಸಹಾಯಕ ಎಂಜಿನಿಯರ್‌ ಗ್ರೇಡ್‌-1 ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ನಗರ ಯೋಜಕರ 23 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ ಹೈದರಾಬಾದ್‌ ಕರ್ನಾಟಕ ಮೀಸಲಾತಿ ಸುತ್ತೋಲೆಯನ್ನು ಕೆಎಸ್‌ಎಟಿ ರದ್ದುಪಡಿಸಿದ್ದು, ಈ ವಿಷಯವೂ ಹೈಕೋರ್ಟ್‌ ಮೆಟ್ಟಿಲೇರಿದೆ.

ಅದೇ ರೀತಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ 60 ಸಹಾಯಕ ನಗರ ಯೋಜಕರು, ಪೌರಾಡಳಿತ ನಿರ್ದೇಶನಾಲಯದ 89 ಕಿರಿಯ ಅಭಿಯಂತರರು, 57 ಕಿರಿಯ ಆರೋಗ್ಯ ನಿರೀಕ್ಷಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 136 ಕಿರಿಯ ಅಭಿಯಯಂತರರ ಹುದ್ದೆಗಳ ನೇಮಕ ವಿಚಾರದಲ್ಲಿ ಕೆಎಸ್‌ಎಟಿ ಆದೇಶದ ವಿರುದ್ಧ ಹೈಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಕೆಪಿಎಸ್‌ಸಿ ತೀರ್ಮಾನಿಸಿದೆ.

5 ವರ್ಷಗಳಿಂದ ಬಾಕಿ
ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ವಿವಿಧ 23 ವೃತ್ತಿಗಳ 1,520 ಸಿ ಗ್ರೂಪ್‌ ಹುದ್ದೆಗಳ ನೇಮಕಾತಿಗೆ 2018ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಈ ನೇಮಕಾತಿ ವಿಚಾರ ಹೈಕೋರ್ಟ್‌ ನಲ್ಲಿತ್ತು. ಅಂತಿಮವಾಗಿ 2023ರ ಜುಲೈ 24ರಂದು ಹೈಕೋರ್ಟ್‌ ಆದೇಶ ನೀಡಿದ್ದು, ಅದರಂತೆ ಕೆಪಿಎಸ್‌ಸಿ ಕ್ರಮ ಕೈಗೊಳ್ಳುತ್ತಿದೆ. ಉಳಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ವಿವಿಧ 9 ಹುದ್ದೆಗಳ ನೇಮಕಾತಿಗೆ 2018ರಿಂದ ಹೈಕೋರ್ಟ್‌ ತಡೆಯಾಜ್ಞೆ ಇದೆ.

1,600 ಹುದ್ದೆಗಳ ಭರ್ತಿಗೆ ಪ್ರಸ್ತಾವನೆ
2023ರಲ್ಲಿ ವಿವಿಧ ಇಲಾಖೆಗಳ 1,600ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಆಯಾ ಇಲಾಖೆಗಳಿಂದ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಗಳು ಸಲ್ಲಿಕೆಯಾಗಿದ್ದು, ಅವುಗಳು ಸದ್ಯ ಆಯೋಗದ ಪರಿಶೀಲನೆಯಲ್ಲಿವೆ. ಈ ಪೈಕಿ 400 ಪಶು ವೈದ್ಯಾಧಿಕಾರಿಗಳ ನೇಮಕಕ್ಕೆ, ಪಶುಸಂಗೋಪನೆ ಇಲಾಖೆ ಕಳೆದ ವರ್ಷದ ಜೂನ್‌ನಲ್ಲಿ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಈ ಹುದ್ದೆಗಳ ನೇಮಕಾತಿಗೆ ಹೈಕೋರ್ಟ್‌ ತಡೆ ಇದ್ದು, ಮಾಹಿತಿ ಕೋರಿ ಆಯೋಗ ಸರಕಾರಕ್ಕೆ ಪತ್ರ ಬರೆದಿದೆ.

 ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.