ಮಳೆಗೆ ಮೈದುಂಬಿದ ಕೃಷ್ಣಾ, ದೂಧಗಂಗಾ
Team Udayavani, Jul 2, 2019, 3:00 AM IST
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಮೈದುಂಬಿ ಹರಿಯುತ್ತಿವೆ. ಕೆಳಹಂತದ ಮೂರು ಸೇತುವೆಗಳು ಜಲಾವೃತಗೊಂಡು ಸಂಚಾರ ಕಡಿತಗೊಂಡಿವೆ.
ಮಹಾರಾಷ್ಟ್ರದ ಸಹ್ಯಾದ್ರಿ ಘಟ್ಟಪ್ರದೇಶದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ 24 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿರುವುದರಿಂದ ಚಿಕ್ಕೋಡಿ ತಾಲೂಕಿನ ನದಿಗಳ ಹರಿವಿನ ಪ್ರಮಾಣದಲ್ಲಿ ಹೆಚ್ಚಳಗೊಂಡಿವೆ.
ದೂಧಗಂಗಾ, ವೇದಗಂಗಾ ನದಿ ಸಂಗಮದ ಬಳಿ ಇರುವ ಕಾರದಗಾ- ಭೋಜ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬೋಜವಾಡಿ-ಕುನ್ನುರ, ದೂಧಗಂಗಾ ನದಿಗೆ ಇರುವ ಮಲಿಕವಾಡ-ದತ್ತವಾಡ ಸೇತುವೆಗಳು ಜಲಾವೃತಗೊಂಡಿವೆ.
ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಲ್ಲೋಳ-ಯಡೂರ ಸೇತುವೆ ಬಳಿ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ ಹಾಗೂ ಉಪನದಿಗಳಾದ ವೇದಗಂಗಾ ಮತ್ತು ದೂಧಗಂಗಾ ನದಿಗಳಿಂದ ಹರಿದು ಬರುತ್ತಿರುವ ನೀರಿನಲ್ಲಿ ಅಂತರಗಂಗೆ ಬಳ್ಳಿ ಕಲ್ಲೋಳ ಸೇತುವೆ ಬಳಿ ಬ್ಯಾರೇಜ್ಗೆ ತಡೆಹಿಡಿದಿದೆ.
ಹೀಗಾಗಿ ನೀರಿನ ಹರಿವಿನಲ್ಲಿ ವೇಗ ಕಡಿಮೆಯಾಗಿದೆ. ಕೆಳಹಂತದ ಬ್ಯಾರೇಜ್ಗಳು ಜಲಾವೃತಗೊಂಡಿರುವುದರಿಂದ ನದಿ ತೀರದ ರೈತರು ಸುತ್ತುವರೆದು ಪ್ರಯಾಣ ಮಾಡುತ್ತಿದ್ದಾರೆ. ಜಲಾವೃತಗೊಂಡ ಬ್ಯಾರೇಜ್ಗಳ ಬಳಿ ಸೂಕ್ತ ರಕ್ಷಣೆ ಒದಗಿಸಲು ಪೊಲೀಸ್ ಇಲಾಖೆ ತಿಳಿಸಿದ್ದು, ಸೇತುವೆಗಳ ಬಳಿ ಬ್ಯಾರೇಕೆಡ್ ಅಳವಡಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪವಿಭಾಗಾ ಧಿಕಾರಿ ರವೀಂದ್ರ ಕರಲಿಂಗನವರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ