ಕೃಷ್ಣಾ ನದಿ ನೀರು ಹಂಚಿಕೆ ವಿವಾದ: ಕರ್ನಾಟಕ ಮತ್ತು ಮಹಾರಾಷ್ಟ್ರ ಜಂಟಿ ಕಾನೂನು ಹೋರಾಟ


Team Udayavani, Jun 19, 2021, 12:16 PM IST

krishna river dispute

ಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಇರುವ ಪ್ರಕರಣದ ಕುರಿತು ಜಂಟಿಯಾಗಿ ಹೋರಾಟ ಮಾಡಲು ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳು ನಿರ್ಧಾರ ಮಾಡಿದೆ. ಇಂದು ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ್ ಪಾಟೀಲ್ ಜೊತೆ ಸಿಎಂ ಯಡಿಯೂರಪ್ಪ ನಡೆಸಿದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ಕೃಷ್ಣಾ, ಭೀಮಾ ನದಿಗಳ ಪ್ರವಾಹ‌ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಮಹಾರಾಷ್ಟ್ರ ಸಚಿವರು, ಅಧಿಕಾರಿಗಳು ಭಾಗಿಯಾಗಿದ್ದರು. ಉಭಯ ರಾಜ್ಯಗಳು ಕ್ಷಣ ಕ್ಷಣಕ್ಕೂ ಮಳೆ ಪ್ರಮಾಣ, ನೀರು ಬಿಡುಗಡೆ ಬಗ್ಗೆ ಪರಸ್ಪರ ಮಾಹಿತಿ ಹಂಚಿಕೆಗೆ ತೀರ್ಮಾನ ಮಾಡಲಾಯಿತು. ಬೇಸಿಗೆ ಕಾಲದಲ್ಲಿ 4 ಟಿಎಂಸಿ ನೀರು ಪಡೆದು, ಮಳೆಗಾಲದಲ್ಲಿ 4 ಟಿಎಂಸಿ ನೀರು ಬಿಡುಗಡೆ ಮಾಡಲು ಚರ್ಚೆ ಮಾಡಲಾಗಿದೆ ಎಂದರು.

ಇದನ್ನೂ ಓದಿ:ಕಾನ್ಪುರ್:ಸ್ವಯಂಘೋಷಿತ ಬಾಬಾನ ಆರನೇ ವಿವಾಹ ಸಂಚನ್ನು ವಿಫಲಗೊಳಿಸಿದ ಐದನೇ ಪತ್ನಿ!

ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ್ ಪಾಟೀಲ್ ಮಾತನಾಡಿ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿನ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅದರಲ್ಲಿ ಪ್ರಮುಖವಾಗಿ ಕೃಷ್ಣಾಕೊಳ್ಳದಲ್ಲಿನ ನೆರೆ ಸಮಸ್ಯೆ, ನೆರ ಹಾವಳಿಯಿಂದ ಸಮಸ್ಯೆಗೆ ಯಾವ ರೀತಿ ಪರಿಹಾರ ಕಂಡುಕೊಳ್ಳಬೇಕೆಂದು ಎರಡು ರಾಜ್ಯಗಳ‌ ಚರ್ಚೆಯಿಂದ‌ ಅನುಕೂಲವಾಗಿದೆ. ಇವತ್ತಿನ ಸಭೆ ಮೂರನೇ ಸಭೆಯಾಗಿದ್ದು, ದೂದ್ ಗಂಗಾ ಯೋಜನೆಗೆ ಮಹಾರಾಷ್ಟ್ರ ಸರ್ಕಾರ ಕೂಡ ಸಾಕಷ್ಟು ಅನುದಾನ ನೀಡಲಿದೆ ಎಂದ ಅವರು, ಕೃಷ್ಣಾ ಕಣಿವೆ ಕುರಿತು ಚರ್ಚೆ ನಡೆಸಲು ಸಿಎಂ‌ ಅವಕಾಶ ಮಾಡಿದಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಕೃಷ್ಣಾ ನದಿ ನೀರು ಹಂಚಿಕೆ ವಿವಾದ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಇರುವ ಪ್ರಕರಣದ ಕುರಿತು ಜಂಟಿಯಾಗಿ ಹೋರಾಟಕ್ಕೆ ನಿರ್ಧಾರ ಮಾಡಿದ್ದೇವೆ ಎಂದರು.

ಬಳಿಕ ಮಾತನಾಡಿದ ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಪ್ರವಾಹ ಬಂದಾಗ ಒಂದೇ ಸಲ ನೀರು ಬಿಡಬೇಡಿ ಎಂದು ಕೇಳಿಕೊಳ್ಳಲಾಗಿದೆ. ಅದಕ್ಕೆ ಮಹಾರಾಷ್ಟ್ರ ಸಚಿವರು ಒಪ್ಪಿಕೊಂಡಿದ್ದಾರೆ. ದೂದ್ ಗಂಗಾ ಯೋಜನೆಗೆ ಮಹಾರಾಷ್ಟ್ರ ಪಾಲನ್ನು ನೀಡಲು ಒಪ್ಪಿಕೊಂಡಿದ್ದಾರೆ. ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಆಗುತ್ತಿತ್ತು ,ಅದಕ್ಕೆ ನಾಲ್ಕು ಟಿಎಂಸಿ ನೀರು ಕೊಡುಕೊಳ್ಳುವಿಕೆ ಬಗ್ಗೆ ಒಪ್ಪಿಗೆ ಆಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.