ಸಿದ್ದು ಕುರಿತು ಈಶ್ವರಪ್ಪ ವಿವಾದಾತ್ಮಕ ಹೇಳಿಕೆ
Team Udayavani, Aug 1, 2021, 7:15 AM IST
ಬೆಂಗಳೂರು: ಒಂದು ಕಡೆ ಮಗ, ಮತ್ತೂಂದು ಕಡೆ ಅಳಿಯ ಎಂದು ಹೇಳಿಕೊಂಡು ತಿರುಗಾಡುವ ಸಿದ್ದರಾಮಯ್ಯ ಅವರನ್ನು ಅಪ್ಪ-ಅಮ್ಮ ಯಾರು ಎಂದು ಕೇಳಬೇಕಾಗಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಚಾಮುಂಡೇಶ್ವರಿಯಲ್ಲಿ ಸೋತು ಬಾದಾಮಿಗೆ ಹೋಗಿ ಅದೇ ತವರು ಅಂತಾರೆ. ಚಾಮರಾಜ ಪೇಟೆಗೆ ಬಂದು ಅಳಿಯ ಎನ್ನುತ್ತಾರೆ ಎಂದರು.
ಸಿದ್ದರಾಮಯ್ಯ ಜನತಾಪಕ್ಷ, ಜನತಾದಳ, ಜೆಡಿಎಸ್ನಲ್ಲಿದ್ದವರು. ಅಲ್ಲಿಂದ ದೇವೇಗೌಡರು ಹಾಗೂ ಕುಮಾರಸ್ವಾಮಿರಿಗೆ ಟೋಪಿ ಹಾಕಿ ಕಾಂಗ್ರೆಸ್ ಸೇರಿದರು. ಅದರ ಮಧ್ಯೆ ಅದ್ಯಾವುದೋ ಪಕ್ಷ ಕಟ್ಟಿ ದರು. ಅದರ ಹೆಸರು ನನಗೆ ಹೇಳಲು ಬರುವುದಿಲ್ಲ ಎಂದು ಲೇವಡಿ ಮಾಡಿದರು.
ಪೂರ್ಣ ಬಹುಮತ:
ನಾಲ್ಕು ಬಾರಿ ಯಡಿಯೂರಪ್ಪ ಸಿಎಂ ಆದರೂ ಬಹುಮತ ಕೊಟ್ಟಿಲ್ಲ. ನಳಿನ್ ನೇತೃತ್ವದಲ್ಲಿ ಸಂಘಟನೆ ಕಟ್ಟುತ್ತಿದ್ದೇವೆ. ಬೊಮ್ಮಾಯಿ ನೇತೃತ್ವದಲ್ಲಿ ಒಳ್ಳೆಯ ಸರಕಾರ ಕೊಟ್ಟು ಪೂರ್ಣ ಬಹುಮತ ಪಡೆಯುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ