Eshwarappa: ಕರಸೇವಕರನ್ನು ಮುಟ್ಟಿದರೆ ಕಾಂಗ್ರೆಸ್ ಭಸ್ಮವಾಗಿ ಹೋಗುತ್ತೆ: ಈಶ್ವರಪ್ಪ


Team Udayavani, Jan 3, 2024, 1:49 PM IST

Eshwarappa: ಕರಸೇವಕರನ್ನು ಮುಟ್ಟಿದರೆ ಕಾಂಗ್ರೆಸ್ ಭಸ್ಮವಾಗಿ ಹೋಗುತ್ತೆ: ಈಶ್ವರಪ್ಪ

ದಾವಣಗೆರೆ: ಕರಸೇವಕರನ್ನು ಯಾರಾದರೂ ಮುಟ್ಟಲಿ ನೋಡೋಣ..ಜೈಲಿಗೆ ಹಾಕಲಿ ನೋಡೋಣ… ಮುಟ್ಟಿದರೆ ಕಾಂಗ್ರೆಸ್ಸೇ ಭಸ್ಮವಾಗುತ್ತದೆ. ಕರಸೇವಕರನ್ನು ಬಂಧಿಸುವುದಾದರೆ ರಾಜ್ಯಾದ್ಯಂತ ಇರುವ ಎಲ್ಲ ಕರಸೇವಕರನ್ನು ಬಂಧಿಸಲಿ, ನಾನೂ ಒಬ್ಬ ಕರಸೇವಕ ನನ್ನನ್ನೂ ಬಂಧಿಸಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ.

ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮೂವತ್ತು ವರ್ಷ ಹಳೆಯ ೬೦೦ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ ಎಂದು ರಾಜ್ಯ ಗೃಹ ಸಚಿವರೇ ಹೇಳಿದ್ದಾರೆ. ೬೦೦ಪ್ರಕರಣಗಳಲ್ಲಿ ಹುಬ್ಬಳ್ಳಿಯ ಒಂದೇ ಪ್ರಕರಣವನ್ನು ಏಕೆ ಕೈಗೆತ್ತಿಕೊಂಡಿದ್ದೀರಿ? ಉಳಿದೆಲ್ಲ ಪ್ರಕರಣಗಳನ್ನೂ ವಿಚಾರಣೆಗೆ ಕೈಗೆತ್ತಿಕೊಳ್ಳಬಹುದಿತ್ತಲ್ಲ? ಶ್ರೀರಾಮ ಮಂದಿರ ಉದ್ಘಾಟನೆಯನ್ನು ದೇಶದೆಲ್ಲೆಡೆ ದೀಪಾವಳಿ ರೀತಿಯಲ್ಲಿ ಆಚರಣೆ ಮಾಡುತ್ತಿರುವ ಹೊತ್ತಲ್ಲಿ, ರಾಮಭಕ್ತನನ್ನು ಬಂಧಿಸುವ ಅವಶ್ಯಕತೆ ಏನಿತ್ತು? ಎಂದರು.

ರಾಜ್ಯದಲ್ಲಿ ಕೋಮುಗಲಭೆಗೆ ಬಿಜೆಪಿಯವರು ಆಸಕ್ತಿ ತೋರುತ್ತಿಲ್ಲ. ಮುಖ್ಯಮಂತ್ರಿಯವರೇ ಆಸ್ಪದ ನೀಡುತ್ತಿದ್ದಾರೆ. ಅವರೇ ರಾಜ್ಯದಲ್ಲಿ ಕೋಮುಗಲಭೆಗೆ ಪ್ರಯತ್ನ ಮಾಡುತ್ತಿದ್ದಾರೆ. ಕರಸೇವಕರ ಬಂಧನ, ಹಿಜಾಬ್ ಹೀಗೆ ಒಂದಾದ ಮೇಲೊಂದು ಮಾತನಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಡವಾದದ್ದೆಲ್ಲ ಮೈ ಮೇಲೆ ಎಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಹೊರತುಪಡಿಸಿ ಉಳಿದ ಯಾವ ರಾಜ್ಯದ ಮುಖ್ಯಮಂತ್ರಿಗಳನ್ನೂ ಆಹ್ವಾನಿಸಿಲ್ಲ. ಕೇಂದ್ರ ಸಚಿವರನ್ನೂ ಆಹ್ವಾನಿಸಿಲ್ಲ ಎಂದರು.

ತಮ್ಮ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ತಪ್ಪು ಯಾರು ಮಾಡುತ್ತಾರೋ ಅವರಿಗೆ ಶಿಕ್ಷೆಯಾಗುತ್ತದೆ. ತಪ್ಪು ಮಾಡಿದವರ ವಂಶ ಹಾಳಾಗುತ್ತದೆ. ನಾವು ಡಿ.ಕೆ. ಶಿವಕುಮಾರ್ ಮಾಡಿದಕ್ಕೆಲ್ಲ ಸರಿ ಎನ್ನುತ್ತ ಹೋಗಬೇಕೇ? ಎಂದು ಪ್ರತ್ಯುತ್ತರ ನೀಡಿದರು.

ಮುಂದಿನ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಆಧಾರದಲ್ಲಿ ಎದುರಿಸಲು ಮುಂದಾದರೆ ನಾವು ಅದಕ್ಕೂ ಸಿದ್ಧ. ಇಲ್ಲವೇ ಹಿಂದುತ್ವದ ಆಧಾರದಲ್ಲಿ ಚುನಾವಣೆಗೆ ಹೋಗುವುದಾದರೆ ನಾವು ಅದಕ್ಕೂ ಬದ್ಧ ಎಂದು ಹೇಳಿದರು.

ಯಡಿಯೂರಪ್ಪ ಬಂಧನ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಯಡಿಯೂರಪ್ಪ ಬಂಧನ ವಿಚಾರವೇ ಬೇರೆ. ಕರಸೇವಕರ ಬಂಧನ ವಿಚಾರವೇ ಬೇರೆ. ಯಡಿಯೂರಪ್ಪ ಅವರ ಮೇಲೆ ಲೋಕಾಯುಕ್ತ ಆರೋಪವಿತ್ತು. ಅವರು ಆರೋಪಮುಕ್ತರಾಗಿ ಬರಲಿ ಎಂಬ ಕಾರಣಕ್ಕಾಗಿ ಅವರು ಜೈಲಿಗೆ ಹೋದಾಗ ಯಾರೂ ಹೋರಾಟ ಮಾಡಲಿಲ್ಲ ಎಂದು ಈಶ್ವರಪ್ಪ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: Vijayapura: ಬಜೆಟ್ ಗಿಂತ ಹೆಚ್ಚಿನ ಹಣ ಲೂಟಿ ಹೊಡೆದದ್ದೇ ಇವರ ರಾಮರಾಜ್ಯ: ಎಂ.ಬಿ.ಪಾಟೀಲ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.