ಪಟೇಲ್‌ ಪ್ರತಿಮೆ ಎದುರು ಮನಸಳೆದ ಕೆಎಸ್‌ಆರ್‌ಪಿ ಪಥಸಂಚಲನ!


Team Udayavani, Nov 1, 2019, 5:27 AM IST

Ban01111907Medn

ಬೆಂಗಳೂರು: ಸರ್ದಾರ್‌ ವಲ್ಲಭಾಯ್‌ ಪಟೇಲ್‌ ಅವರ 144ನೇ ಜನ್ಮದಿನದ ಅಂಗವಾಗಿ ಗುಜರಾತ್‌ನ ಕೆವಡಿಯಾದಲ್ಲಿರುವ “ಏಕತಾ ಪ್ರತಿಮೆ’ ಬಳಿ ಗುರುವಾರ ನಡೆದ “ಏಕತಾ ಪಥಸಂಚಲನ’ದಲ್ಲಿ ರಾಜ್ಯ ಮೀಸಲು ಪೊಲೀಸ್‌ ಪಡೆ (ಕೆಎಸ್‌ಆರ್‌ಪಿ) ತಂಡ ಕೂಡ ಪಾಲ್ಗೊಂಡಿತ್ತು.

ದಕ್ಷಿಣ ಭಾರತ ರಾಜ್ಯಗಳ ಪೈಕಿ ಪಾಲ್ಗೊಂಡಿದ್ದ ಏಕೈಕ ಪೊಲೀಸ್‌ ಪಡೆ ಎಂಬ ಹೆಗ್ಗಳಿಕೆಗೂ ಪಾತ್ರವಾಯಿತು. ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಆಕರ್ಷಕ ಪಥಸಂಚಲನ ಮಾಡಿ ಗಮನ ಸೆಳೆಯಿತು.

ಕೆಎಸ್‌ಆರ್‌ಪಿಯ 9 ಪಡೆಗಳಿಂದ 80 ಮಂದಿ ಸಿಬ್ಬಂದಿ ಹಾಗೂ ಅಧಿಕಾರಿಗಳು ಪಥಸಂಚಲನ ತಂಡದಲ್ಲಿದ್ದರು. 4ನೇ ಬೆಟಾಲಿಯನ್‌ ಅಸಿಸ್ಟೆಂಟ್‌ ಕಮಾಂಡೆಂಟ್‌ ಗಂಗಯ್ಯ ಅವರು ಪಥಸಂಚಲನದ ನೇತೃತ್ವ ವಹಿಸಿ ಮುನ್ನಡೆಸಿದರು. ಬಿಎಸ್‌ಎಫ್ನ ಮಹಿಳಾ ಪೊಲೀಸ್‌ ಪಡೆ, ಪ್ಯಾರಾ ಮಿಲಿಟರಿ, ಗುಜರಾತ್‌ ಪೊಲೀಸ್‌ ಪಡೆ, ಒಡಿಸ್ಸಾ, ಅಸ್ಸಾಂ ಪೊಲೀಸ್‌ ಪಡೆಗಳು ಸೇರಿ ಒಟ್ಟು ಐದು ತಂಡಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು.

ಪಥಸಂಚಲನ ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್‌ಕುಮಾರ್‌, ಎಡಿಜಿಪಿಗಳಾದ ಪಿ.ಜಿ ಸಂಧು ಸೇರಿದಂತೆ ಹಲವು ಹಿರಿಯ ಪೊಲೀಸ್‌ ಆಧಿಕಾರಿಗಳು ಉಪಸ್ಥಿತರಿದ್ದರು.ಕೆಎಸ್‌ಆರ್‌ಪಿ ಪೊಲೀಸ್‌ ಪಡೆಯ ಪಥಸಂಚಲನ ಅಚ್ಚುಕಟ್ಟಾಗಿ ನಡೆಸಿಕೊಟ್ಟಿತು ಎಂದು ಎಡಿಜಿಪಿ ಅಲೋಕ್‌ಕುಮಾರ್‌ ತಿಳಿಸಿದರು.

ಪಥಸಂಚಲನದಲ್ಲಿ ಪಾಲ್ಗೊಂಡಿದ್ದು ಹೆಮ್ಮೆಯ ಸಂಗತಿಯಾಗಿದೆ. ಹಿರಿಯ ಅಧಿಕಾರಿಗಳ ಪ್ರೋತ್ಸಾಹದಿಂದ ಇದು ಸಾಧ್ಯವಾಯಿತು. ಬೇರೆ ರಾಜ್ಯಗಳಿಂದ ಆಗಮಿಸಿದ್ದ ತಂಡಗಳು ಹಾಗೂ ಗಣ್ಯರಿಂದ ನಮ್ಮ ಪಥಸಂಚಲನಕ್ಕೆ ಉತ್ತಮ ಪ್ರಶಂಸೆ ವ್ಯಕ್ತವಾಯಿತು ಎಂದು ತಂಡದಲ್ಲಿದ್ದ ಅಧಿಕಾರಿಯೊಬ್ಬರು ತಿಳಿಸಿದರು.

ಕೋರಮಂಗಲದಲ್ಲಿ ಏಕತಾ ಓಟ !
ಸರ್ಧಾರ್‌ ವಲ್ಲಭಾಯ್‌ ಪಟೇಲ್‌ ಜನ್ಮದಿನದ ಅಂಗವಾಗಿ ಕೋರಮಂಗಲದಲ್ಲಿರುವ ಮೂರು ಹಾಗೂ ನಾಲ್ಕನೇ ಬೆಟಾಲಿಯನ್‌ ವತಿಯಿಂದ ಏಕತಾ ಓಟ ಮಾಡಲಾಯಿತು. ಕಮಾಂಡೆಂಟ್‌ ರಾಮಕೃಷ್ಣ ಪ್ರಸಾದ್‌, ಅಸಿಸ್ಟೆಂಟ್‌ ಕಮಾಂಡೆಂಟ್‌ಗಳಾದ ರಮೇಶ್‌, ಲೋಕೇಶ್‌ ಮೆಳ್ಳಗಟ್ಟಿ ಸೇರಿದಂತೆ ಕೆಎಸ್‌ಆರ್‌ಪಿ ಸಿಬ್ಬಂದಿ ಏಕತಾ ಓಟದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.