ಚಾರ್ಮಾಡಿ ಘಾಟಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಆರಂಭ
18 ತಿಂಗಳ ಬಳಿಕ ಬಸ್ ಸಂಚಾರ ಆರಂಭವಾಗಿದೆ.
Team Udayavani, Mar 17, 2021, 5:22 PM IST
ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, 18 ತಿಂಗಳ ಬಳಿಕ ಬಸ್ ಸಂಚಾರ ಆರಂಭವಾಗಿದೆ.
ಬಸ್, 6 ಚಕ್ರದ ಲಾರಿ ಹಾಗೂ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. 18 ತಿಂಗಳಿನಿಂದ ಲಘು ವಾಹನಗಳಿಗಷ್ಟೆ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಸಂಚರಿಸಲು ಅವಕಾಶ ನೀಡಲಾಗಿತ್ತು.
6 ಚಕ್ರದಕ್ಕಿಂತ ಭಾರೀ ವಾಹನಗಳಿಗೆ ಮಾತ್ರ ನಿರ್ಬಂಧ ಏರಿದ್ದು, ಸದ್ಯ ಎಲ್ಲಾ ವಾಹನಗಳು ಸಂಚರಿಸಬಹುದು ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ. 2019 ರಲ್ಲಿ ಸುರಿದ ಭಾರಿ ಮಳೆಯಿಂದ ಘಾಟಿ ರಸ್ತೆ ಕುಸಿತವಾಗಿತ್ತು.