ಯಾವುದೇ ಆದೇಶವಿಲ್ಲ, ಕೇರಳ ತಪ್ಪು ಗ್ರಹಿಕೆ?: ಕರ್ನಾಟಕಕ್ಕೆ “KSRTC’ ಬ್ರ್ಯಾಂಡ್ ಅಬಾಧಿತ
Team Udayavani, Jun 5, 2021, 8:08 AM IST
ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವಿನ ಕೆಎಸ್ಆರ್ಟಿಸಿ ಟ್ರೇಡ್ಮಾರ್ಕ್ ಪ್ರಕರಣದಲ್ಲಿ ಕೇಂದ್ರ ಟ್ರೇಡ್ಮಾರ್ಕ್ ರಿಜಿಸ್ಟ್ರಿ ಅಥವಾ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ ಯಾವುದೇ ಆದೇಶ ಹೊರಡಿಸಿಲ್ಲ. ಹಾಗಾಗಿ, ಎಂದಿನಂತೆ ಕರ್ನಾಟಕದ “ಕೆಎಸ್ಆರ್ಟಿಸಿ’ ಬ್ರ್ಯಾಂಡ್ ಬಳಕೆ ಅಬಾಧಿತವಾಗಿರಲಿದೆ.
ಕೇಂದ್ರ ಟ್ರೇಡ್ಮಾರ್ಕ್ ರಿಜಿಸ್ಟ್ರಿಯಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶವನ್ನು ಇದುವರೆಗೆ ಹೊರಡಿಸಲಾಗಿಲ್ಲ. ಹೀಗಿರುವಾಗ, ಕೆಎಸ್ಆರ್ಟಿಸಿಯು ತನ್ನ ಟ್ರೇಡ್ ಮಾರ್ಕ್ಗಳನ್ನು ಬಳಸುವಂತಿಲ್ಲ ಎಂಬ ವದಂತಿ ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿಯೂ ಒಪ್ಪಲಾಗದು ಎಂದು ಕೆಎಸ್ ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಸ್ಪಷ್ಟಪಡಿಸಿದ್ದಾರೆ.
“ಕೇರಳ ಎಸ್ಆರ್ಟಿಸಿಯು, ಕೆಎಸ್ಆರ್ಟಿಸಿ ಅಥವಾ ಕರ್ನಾಟಕ ಸರಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂಬ ಸುದ್ದಿ ಸಿಕ್ಕಿದೆ. ಅಂತಹ ನೋಟಿಸ್ ಬಂದರೆ ಉತ್ತರ ನೀಡಲಾಗುವುದು. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ರವಿವಾರವೂ ಬ್ಯಾಂಕ್ ಖಾತೆಗೆ ಹಣ ಜಮೆ : ಆ. 1ರಿಂದ ಹಣಕಾಸು ವರ್ಗಾವಣೆಯಲ್ಲಿ ಹೊಸ ವ್ಯವಸ್ಥೆ
ಸಾಮಾನ್ಯವಾಗಿ ಟ್ರೇಡ್ಮಾರ್ಕ್ ಅನ್ನು ಏಜೆನ್ಸಿಯೊಂದರ ಮೂಲಕ ಅರ್ಜಿ ಹಾಕಿ ಪಡೆಯಬೇಕಾಗುತ್ತದೆ. ಕೆಎಸ್ಆರ್ಟಿಸಿ 2010ರಲ್ಲೇ ಸಲ್ಲಿಸಿ, 2013ರಲ್ಲಿ ಪಡೆದುಕೊಂಡಿದೆ. ಇದರ ಅವಧಿ 2023ರವರೆಗೂ ಇದೆ. ಇದೇ ರೀತಿ, ಕೇರಳ ಎಸ್ ಆರ್ಟಿಸಿ 2019ರಲ್ಲಿ ಟ್ರೇಡ್ಮಾರ್ಕ್ಗೆ ಏಜೆನ್ಸಿ ಮೂಲಕ ಅರ್ಜಿ ಸಲ್ಲಿಸಿತ್ತು. ಅನುಮೋದನೆಗೊಂಡರೂ ಪ್ರಮಾಣಪತ್ರ ಈಚೆಗೆ ಲಭ್ಯವಾಗಿರುವ ಸಾಧ್ಯತೆ ಇದೆ. ಆ ಪ್ರಮಾಣಪತ್ರವನ್ನೇ ಕೇರಳವು ತಪ್ಪಾಗಿ ಗ್ರಹಿಸಿದ್ದರಿಂದ ಈ ಗೊಂದಲ ಉಂಟಾಗಿರಬಹುದು ಎಂದು ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟರು.
ಕೆಎಸ್ಆರ್ಟಿಸಿ ಬ್ರ್ಯಾಂಡ್ ಬಳಕೆ ಎಂದಿನಂತೆ ಮುಂದುವರಿಯಲಿದೆ. ಈ ವಿಚಾರದಲ್ಲಿ ಕೇರಳ ಸರಕಾರ ಯಾವುದೇ ಹೇಳಿಕೆ ನೀಡಿದರೂ ಆತಂಕ ಪಡಬೇಕಾಗಿಲ್ಲ. ಅಗತ್ಯ ಬಿದ್ದರೆ ರಾಜ್ಯ ಸರಕಾರ ಕಾನೂನಾತ್ಮಕ ಹೋರಾಟ ನಡೆಸಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ