ಕೆಎಸ್‌ಆರ್‌ಟಿಸಿ: ದಸರಾ ದರ್ಶನಕ್ಕೆ ವಿಶೇಷ ಬಸ್‌


Team Udayavani, Oct 4, 2019, 3:00 AM IST

c-51

ಮೈಸೂರು: ಅರಣ್ಯ ವ್ಯಾಪ್ತಿಯ ಹಾಡಿಗಳಲ್ಲಿ ವಾಸಿಸುವ ಗಿರಿಜನರ ಸಹಿತ ಗ್ರಾಮೀಣ ಭಾಗದ ಬಡಜನರಿಗೆ ಈ ಬಾರಿ ಕೆಎಸ್‌ಆರ್‌ಟಿಸಿಯಿಂದ ಉಚಿತವಾಗಿ ದಸರಾ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಗುರುವಾರದಿಂದ ಮೂರು ದಿನಗಳ ಕಾಲ ಆಯೋಜಿಸಿರುವ ದಸರಾ ದರ್ಶನ ಬಸ್‌ಗಳಿಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಹಸುರು ನಿಶಾನೆ ತೋರಿದರು. ಹಳೇ ಮೈಸೂರು ವ್ಯಾಪ್ತಿಯ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು ಸಹಿತ ಐದು ಜಿಲ್ಲೆಗಳ 31 ತಾಲೂಕುಗಳ ಆದಿವಾಸಿಗಳು ಮತ್ತು ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಈ ದಸರಾ ದರ್ಶನ ಸೌಲಭ್ಯ ಒದಗಿಸಲಾಗಿದೆ. ಕಳೆದ ಬಾರಿ ಇದ್ದ ರಿಯಾಯಿತಿ ಪಾಸ್‌ ರದ್ದುಪಡಿಸಿ, ಸಂಪೂರ್ಣ ಉಚಿತವಾಗಿ ದಸರಾ ದರ್ಶನ ವ್ಯವಸ್ಥೆ ಮಾಡಲಾಗಿದೆ.

ದೇಶೀ ಆಟ, ಮನೋರಂಜನೆಯ ಸವಿಯೂಟ
ದಸರಾ ಅಂಗವಾಗಿ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪಾರಂಪರಿಕ ಆಟಗಳ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಪಗಡೆ ಆಡುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಮಕ್ಕಳಿಗೆ ಏರ್ಪಡಿಸಿದ್ದ ಕಣ್ಣಾ ಮುಚ್ಚಾಲೆ, ಕುಂಟಾಬಿಲ್ಲೆ, ಹಾವು-ಏಣಿ, ಗೋಲಿ, ಚೌಕಾಬಾರ, ಮೂರು ಕಾಲಿನ ಓಟ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಯುವಕ, ಯುವತಿಯರಿಗಾಗಿ ಏರ್ಪಡಿಸಿದ್ದ ಅಳಿಗುಳಿ ಮನೆ, ಹಗ್ಗ-ಜಗ್ಗಾಟ, ಹಾವು ಏಣಿ, ಗೋಲಿ, ಬಿಲ್ಲು ಬಾಣ, ಚಿನ್ನಿದಾಂಡು, ಬುಗುರಿ, ಗೋಣಿಚೀಲದ ಓಟ, ಮೂರು ಕಾಲಿನ ಓಟ ಮತ್ತು ಹುಲಿ-ಕುರಿ ಸ್ಪರ್ಧೆಯಲ್ಲಿ ನಾನಾ ಕಾಲೇಜುಗಳ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ದಿನವಿಡೀ ಮೊಬೈಲ್‌ನಿಂದ ದೂರ ಉಳಿದರು. 25 ವರ್ಷ ಮೇಲ್ಪಟ್ಟವರಿಗೆ ಏರ್ಪಡಿಸಿದ್ದ ಪಗಡೆ, ಹಗ್ಗ-ಜಗ್ಗಾಟ, ಅಳಿಗುಳಿ ಮನೆ, ಬಿಲ್ಲುಬಾಣ, ಚೌಕಾಬಾರ ಸ್ಪರ್ಧೆಯಲ್ಲಿ ವಯಸ್ಸಿನ ಭೇದ ಮರೆತು ಅಜ್ಜಿಯರು ಭಾಗವಹಿಸಿ ಎಲ್ಲರ ಗಮನ ಸೆಳೆದರು.

ಛಾಯಾಚಿತ್ರ ಸ್ಪರ್ಧೆ
ಪ್ರವಾಸೋದ್ಯಮ ಇಲಾಖೆ ವತಿಯಿಂದ ದಸರಾ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಲಾಗಿದೆ. ವಿಜೇತರಿಗೆ ಪ್ರವಾಸೋದ್ಯಮ ಇಲಾಖೆಯಿಂದ ಒಂದು ಲಕ್ಷ ರೂ.ಬಹುಮಾನ ನೀಡಲಾಗುವುದು. ಸ್ಪರ್ಧೆಗೆ ಒಬ್ಬರು ಗರಿಷ್ಠ ಮೂರು ಛಾಯಾಚಿತ್ರಗಳನ್ನು ಸಲ್ಲಿಸಬಹುದಾಗಿದೆ.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.