K’taka ಇ-ಪ್ರೊಕ್ಯೂರ್ಮೆಂಟ್ ವೆಬ್ಸೈಟ್ ಹ್ಯಾಕ್: ಪಂಜಾಬ್ನಲ್ಲಿ ಪ್ರಮುಖ ಆರೋಪಿ ಬಂಧನ
ಬಿಟ್ಕಾಯಿನ್ ಹಗರಣ, ಶ್ರೀಕಿಯ ನಂಟು... ಸಿಐಡಿ ಪೊಲೀಸರ ಕಾರ್ಯಾಚರಣೆ
Team Udayavani, Oct 6, 2023, 7:09 PM IST
ಬೆಂಗಳೂರು: ಬಿಟ್ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಕರ್ನಾಟಕ ಸಿಐಡಿ ಪೊಲೀಸರು, ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ (ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್) ಅನ್ನು ಹ್ಯಾಕ್ ಮಾಡಿ ಹಣ ಸುಲಿಗೆ ಮಾಡಿದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಪಂಜಾಬ್ ಮೂಲದ ಅರವಿಂದರ್ ಸಿಂಗ್ (32) ಎಂದು ಗುರುತಿಸಲಾಗಿದ್ದು, ಸಿಐಡಿ ವಿಶೇಷ ತನಿಖಾ ತಂಡ ಬಂಧಿಸಿದೆ. ಈ ಸಂಬಂಧ ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಿಂಗ್, ಅಂತಾರಾಷ್ಟ್ರೀಯ ಹ್ಯಾಕರ್ ಮತ್ತು ಬಿಟ್ಕಾಯಿನ್ ಹಗರಣದ ಕಿಂಗ್ಪಿನ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯೊಂದಿಗೆ ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್ಮೆಂಟ್ ವೆಬ್ಸೈಟ್ ಅನ್ನು ಹ್ಯಾಕ್ ಮಾಡುವಲ್ಲಿ ಭಾಗಿಯಾಗಿದ್ದಾನೆ ಎಂದು ವರದಿಯಾಗಿದೆ. ವಂಚಿಸಿದ ಹಣವನ್ನು ತನ್ನ ಖಾತೆಗೆ ಜಮಾ ಮಾಡಲು ಶ್ರೀಕಿಯ ಸೂಚನೆಗಳನ್ನು ಅನುಸರಿಸಿದ್ದಾನೆ ಎಂದು ಹೇಳಲಾಗಿದೆ.
ಅರವಿಂದರ್ ಸಿಂಗ್ ಪಂಜಾಬ್ ಮತ್ತು ನೆರೆಯ ರಾಜ್ಯಗಳ ಉದ್ಯಮಿಗಳು ಮತ್ತು ವ್ಯಾಪಾರಿಗಳೊಂದಿಗೆ ಬಲವಾದ ಸಂಬಂಧವನ್ನು ಹೊಂದಿದ್ದು, ಶ್ರೀಕಿಯಿಂದ ಪಡೆದ ಹಣವನ್ನು ಹವಾಲಾ ಮೂಲಕ ತನ್ನ ವ್ಯಾಪಾರಿ ಸ್ನೇಹಿತರಿಗೆ ವರ್ಗಾಯಿಸಿ ಅದನ್ನು ಶ್ರೀಕಿಗೆ ಹಿಂದಿರುಗಿಸುವ ಮೊದಲು ಲಾಂಡರಿಂಗ್ ಮಾಡಿದ್ದ ಇದಕ್ಕಾಗಿ ಸಿಂಗ್ ಅವರು ಭಾರಿ ಕಮಿಷನ್ ಪಡೆದಿದ್ದ ಎಂದು ತಿಳಿದು ಬಂದಿದೆ.
ಸರಕಾರದ ವ್ಯವಹಾರ ನಿಧಿಗಳ ಸಂಗ್ರಹ ಮತ್ತು ನಿರ್ವಹಣೆಗಾಗಿ ವಿನ್ಯಾಸಗೊಳಿಸಲಾದ ಇ-ಪ್ರೊಕ್ಯೂರ್ಮೆಂಟ್ ವೆಬ್ಸೈಟ್ ಅನ್ನು ಸುಮಾರು ನಾಲ್ಕೂವರೆ ವರ್ಷಗಳ ಹಿಂದೆ ಶ್ರೀಕಿ ಹ್ಯಾಕ್ ಮಾಡಿದ್ದ. ಟೆಂಡರ್ಗಳಿಂದ ಕೋಟ್ಯಂತರ ರೂಪಾಯಿಗಳನ್ನು ಅರವಿಂದರ್ ಸಿಂಗ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶ್ರೀಕಿ ನಂತರ ಹಣವನ್ನು ಹಿಂಪಡೆದು ಅದನ್ನು ತನ್ನ ಗೆಳತಿ ಮತ್ತು ಸ್ನೇಹಿತರೊಂದಿಗೆ ವಿದೇಶದಲ್ಲಿ ಐಷಾರಾಮಿ ಜೀವನ ನಡೆಸಲು ಬಳಸಿಕೊಂಡಿದ್ದ.
ವಿಚಾರಣೆ ವೇಳೆ ಶ್ರೀಕಿ ನೀಡಿದ ಮಾಹಿತಿ ಮೇರೆಗೆ ಸಿಂಗ್ ನನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪರಾರಿಯಾಗಿದ್ದ ಆರೋಪಿಯನ್ನು ಪಂಜಾಬ್ನಲ್ಲಿ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ