ಕುಕ್ಕೆ: ಮಠದ ಸಿಬ್ಬಂದಿ ಮೇಲೆ ಹಲ್ಲೆ


Team Udayavani, Jun 3, 2019, 3:00 AM IST

Udayavani Kannada Newspaper

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆ ನಡೆಸಲು ಆಗಮಿಸಿದ್ದ ಭಕ್ತರ ತಂಡವನ್ನು ಪಕ್ಕದ ಮಠಕ್ಕೆ ಕರೆದೊಯ್ಯಲು ಯತ್ನಿಸಿದ ಆರೋಪದ ಮೇರೆಗೆ ಸ್ಥಳೀಯರು ಹಾಗೂ ಭದ್ರತಾ ಸಿಬ್ಬಂದಿ ಕುಮಾರ ಬನ್ನಿಂತಾಯ ಎಂಬುವರನ್ನು ಆಡಳಿತ ಮಂಡಳಿಗೆ ಒಪ್ಪಿಸಿದ ಘಟನೆ ಸಂಭವಿಸಿದೆ. ಈ ನಡುವೆ ತನ್ನ ಮೇಲೆ ಕೆಲವರು ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಕುಮಾರ ಬನ್ನಿಂತಾಯ ಅವರು ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕುಂದಾಪುರ ಮೂಲದ ನಾಗಮಣಿ ಎಂಬುವರು ಸರ್ಪಸಂಸ್ಕಾರ ಪೂಜೆಗೆ ಕುಟುಂಬ ಸಮೇತ ಶನಿವಾರ ಕ್ಷೇತ್ರಕ್ಕೆ ಆಗಮಿಸಿದ್ದರು. ಅವರಿಗೆ ಮಠ ಹಾಗೂ ದೇವಸ್ಥಾನದ ಸರ್ಪಸಂಸ್ಕಾರದ ಗೊಂದ ಲದ ಬಗ್ಗೆ ಮಾಹಿತಿ ಇರಲಿಲ್ಲ. ಇದಕ್ಕೂ ಮೊದಲು ಅವರು ಸೇವೆ ಸಂಬಂಧ ದೇವಸ್ಥಾನದ ಕಚೇರಿ ಬದಲು ಶ್ರೀ ಸಂಪುಟ ನರಸಿಂಹ ಮಠದ ಕಚೇರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿದ್ದರು. ಮಠದಿಂದ ಸೇವೆಯ ದಿನ ನಿಗದಿಪಡಿಸಿ ಮೊಬೈಲ್‌ ಸಂಖ್ಯೆಯನ್ನು ನೀಡಿದ್ದರು.

ಸೇವೆ ಪ್ರಾರಂಭವಾಗುವ ಹಿಂದಿನ ದಿನ ಮಠದ ಕಚೇರಿಯಿಂದ ಈ ಮೊಬೈಲ್‌ ಸಂಖ್ಯೆಗೆ ಕರೆ ಹೋಗಿದೆ. ಈ ವೇಳೆ ನಾಗಮಣಿ ಕುಟುಂಬದವರು ತಾವು ದೇಗುಲದ ಮುಂಭಾಗದ ಗೋಪುರದ ಬಳಿ ಇದ್ದೇವೆ. ಮಠಕ್ಕೆ ಬರಲು ದಾರಿ ತಿಳಿಸಿ ಎಂದು ಕೇಳಿಕೊಂಡಿದ್ದರು.

ಅವರನ್ನು ಮಠಕ್ಕೆ ಕರೆದೊಯ್ಯಲು ಕುಮಾರ ಬನ್ನಿಂತಾಯರು ದೇಗುಲದ ಮುಂಭಾಗಕ್ಕೆ ಬಂದರು. ಆಗ ಅಲ್ಲಿದ್ದ ಕೆಲವು ಭಕ್ತರು ಹಾಗೂ ಭದ್ರತಾ ಸಿಬ್ಬಂದಿ ದೇಗುಲಕ್ಕೆ ಸೇವೆ ನಡೆಸಲು ಬಂದವರನ್ನು ಮಠಕ್ಕೆ ಕರೆದೊಯ್ಯುತ್ತಿರುವುದಕ್ಕೆ ಆಕ್ಷೇಪಿಸಿ ತಡೆದು ಬನ್ನಿಂತಾಯರನ್ನು ದೇಗುಲದ ಆಡಳಿತ ಮಂಡಳಿಗೆ ಒಪ್ಪಿಸಿದರು. ದೇಗುಲದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ. ಎಚ್‌. ಅವ ರು ವಿಚಾರಣೆ ನಡೆಸಿ ಪೊಲೀಸರಿಗೆ ದೂರು ನೀಡಿದ್ದರು.

ಹಲ್ಲೆ ಆರೋಪ: ಘಟನೆ ಬಳಿಕ ತನ್ನ ಮೇಲೆ ಮೂವರು ಹಲ್ಲೆ ನಡೆಸಿದ್ದಾಗಿ ಕುಮಾರ ಬನ್ನಿಂತಾಯರು ಆ್ಯಂಬುಲೆನ್ಸ್‌ನಲ್ಲಿ ತೆರ ಳಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖ ಲಾ ದರು. ಬಳಿಕ ಸುಬ್ರಹ್ಮಣ್ಯ ಪೊಲೀಸರು ಆಸ್ಪತ್ರೆಗೆ ತೆರಳಿ ಹೇಳಿಕೆ ಪಡೆದುಕೊಂಡರು. ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್‌ ಕುಮಾರ್‌ ಕರಿಕ್ಕಳ, ಗುರುಪ್ರಸಾದ್‌ ಪಂಜ ಹಾಗೂ ಪ್ರಶಾಂತ್‌ ಭಟ್‌ ಮಾಣಿಲ ತನ್ನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾಗಿ ಬನ್ನಿಂತಾಯರು ದೂರಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಲ್ಲೆ ಮಾಡಿಲ್ಲ: ಬನ್ನಿಂತಾ ಯರ ಹಲ್ಲೆ ಆರೋಪ ಸತ್ಯಕ್ಕೆ ದೂರ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಮಹೇಶ್‌ ಕುಮಾರ್‌ ಕರಿಕ್ಕಳ, ಗುರುಪ್ರಸಾದ್‌ ಪಂಜ, ಪ್ರಶಾಂತ್‌ ಭಟ್‌ ಮಾಣಿಲ ಪ್ರತಿಕ್ರಿಯಿಸಿದ್ದಾರೆ.

ಸಿಸಿಟಿವಿ ಪರಿಶೀಲನೆ: ಪೊಲೀಸರು ದೇವಸ್ಥಾನದ ಸಿಸಿ ಕ್ಯಾಮರಾದ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅದರಲ್ಲಿ ಹಲ್ಲೆ ಮಾಡಿರುವುದು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

ಇನ್ನೊಂದು ಪ್ರಕರಣದಲ್ಲಿ, ಬೆಂಗಳೂರಿನ ಕೆಂಗೇರಿಯ ಪಳನಿಸ್ವಾಮಿ ಎಂಬವರು ಮಠದ ರಾಘವೇಂದ್ರ ಹಾಗೂ ಅನಂತ ಭಟ್‌ ಎಂಬವರಿಂದ ಅನ್ಯಾಯವಾಗಿದೆ ಎಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಶನಿವಾರ ದೂರು ನೀಡಿದ್ದಾರೆ.

ದೇವಸ್ಥಾನಕ್ಕೆ ಸರ್ಪಸಂಸ್ಕಾರ ಸೇವೆ ನಡೆಸಲು ಬರುವ ಭಕ್ತರನ್ನು ವಂಚಿಸಿ ಮಠಕ್ಕೆ ಕರೆದೊಯ್ಯಲಾಗುತ್ತಿದೆ, ವಂಚನೆ ನಡೆಸಲಾಗುತ್ತಿದೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ. ತನ್ನಿಂದ 7,000 ರೂ. ಅನ್ನು ಸೇವೆಗೆಂದು ಪಡೆದು ವಾಪಸ್‌ ನೀಡದೆ ವಂಚಿಸಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.