ಸೊರಬಕ್ಕೆ ಕುಮಾರ,ಹಾಲಪ್ಪಗೆ ಸಾಗರ,ಬೇಳೂರು ಎತ್ತ ?
Team Udayavani, Feb 25, 2018, 2:31 PM IST
ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೂ ಕೊನೆಗೂ ತವರು ಕ್ಷೇತ್ರವಾದ ಶಿವಮೊಗ್ಗದ 2 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಸೊರಬ ಕ್ಷೇತ್ರಕ್ಕೆ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ಖಚಿತ ಪಡಿಸಿದ್ದು, ಸಾಗರ ಕ್ಷೇತ್ರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ಖಚಿತವಾಗಿದೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ ಸೊರಬ ಕ್ಷೇತ್ರದಿಂದ ಕುಮಾರ್ ಬಂಗಾರಪ್ಪ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ಆ ಹಿನ್ನಲೆಯಲ್ಲಿ ಹರತಾಳು ಹಾಲಪ್ಪ ಅವರು ಸಾಗರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಯಾಗಲಿದ್ದಾರೆ ಎಂದರು.
ಸಾಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಬೇಳೂರು ಗೋಪಾಲಕೃಷ್ಣ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುತ್ತೇವೆ. ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗಕ್ಕಿನ್ನೂ ಅಂತಿಮವಾಗಿಲ್ಲ!
ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶರಪ್ಪ ಅವರು ಆಕಾಂಕ್ಷಿಯಾಗಿರುವ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಇನ್ನೂ ಅಂತಿಮವಾಗಿಲ್ಲ. 15 ದಿನಗಳ ಒಳಗೆ ಟಿಕೆಟ್ ಅಂತಿಮಗೊಳಿಸುತ್ತೇವೆ. ಈ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಬಿಎಸ್ವೈ ತಿಳಿಸಿದರು.
ಶಿವಮೊಗ್ಗ ಕ್ಷೇತ್ರದಲ್ಲಿ ಕಳೆದ ಬಾರಿ 257 ಮತಗಳಿಂದ ಕೆಜೆಪಿ ಅಭ್ಯರ್ಥಿಯಾಗಿ ಸೋತಿರುವ ರುದ್ರೇಗೌಡ ಅವರಿಗೇ ಟಿಕೆಟ್ ಅಂತಿಮಗೊಳಿಸಲಾಗಿದೆ ಎನ್ನಲಾಗಿದ್ದು ಇದು ಈಶ್ವರಪ್ಪ ಬೆಂಬಲಿಗರನ್ನು ಕೆರಳಿಸಿದೆ.
ಬೇಳೂರು ಎತ್ತ?
ಸಾಗರ ಕ್ಷೇತ್ರದಲ್ಲಿ 2 ಬಾರಿ ಶಾಸಕರಾಗಿದ್ದ ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಗೆ ಟಿಕೆಟ್ ಕೈತಪ್ಪಿದ್ದು ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವ ಕುತೂಹಲ ಮೂಡಿದೆ. ಪಕ್ಷ ಅಧಿಕಾರದಲ್ಲಿದ್ದಾಗಲೇ ಬಂಡಾಯವೆದ್ದಿದ್ದ ಗೋಪಾಲಕೃಷ್ಣ ಅವರು ಯಡಿಯೂರಪ್ಪ ಅವರಿಗೆ ಸವಾಲಾಗಿದ್ದರು. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅವರು ಬಳಿಕ ಬಿಜೆಪಿಗೆ ಮರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ