‘ರಾಜಕೀಯ ರಕ್ಕಸತನʼಕ್ಕೆ ಅವರು ರಾಜಾಧಿರಾಜ: ಸಿದ್ದರಾಮಯ್ಯ ವಿರುದ್ಧ ಎಚ್ ಡಿಕೆ ಕಿಡಿ
Team Udayavani, Dec 3, 2021, 8:55 AM IST
ಬೆಂಗಳೂರು: ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಹೆಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಹಾಲಿ-ಮಾಜಿ ಪ್ರಧಾನಿಗಳ ಭೇಟಿಯ ಬಗ್ಗೆ ಟೀಕೆ ಮಾಡಿದ್ದ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ʼಸಿದ್ದಕಲೆʼಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ? ʼರಾಜಕೀಯ ರಕ್ಕಸತನʼಕ್ಕೆ ಅವರು ರಾಜಾಧಿರಾಜ. ʼರಾಜಕೀಯ ಆಶ್ರಯʼ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ʼಸಿದ್ದಸೂತ್ರಧಾರʼನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ ಎಂದು ಕಟು ಮಾತಿನಲ್ಲಿ ಟೀಕೆ ಮಾಡಿದ್ದಾರೆ.
ಇದನ್ನೂ ಓದಿ:ಸಿದ್ದು v/s ದೊಡ್ಡ ಗೌಡರು; ಪ್ರಧಾನಿ ಜತೆಗಿನ ಭೇಟಿ ವಿಚಾರ ವಾಗ್ವಾದ
ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಆ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯ ಮೇಲೆ ʼಪಕ್ಷನಿಷ್ಠೆʼ ಎನ್ನುವ ಪದ ಎಂದಾದರೂ ಬಂದಿದೆಯಾ? ಅದಕ್ಕೆ ಆ ಪದ ʼಪರಮ ಅಪಥ್ಯʼ ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತು. ನನಗಿಲ್ಲದಿದ್ದರೆ ಯಾರಿಗೂ ಬೇಡ ಎನ್ನುವ ಸ್ವಾರ್ಥ ಮನೋಭಾವದಿಂದ ಸ್ವಪಕ್ಷವೂ ಇದ್ದ ಮೈತ್ರಿ ಸರಕಾರವನ್ನೇ ʼಸ್ವಾಹʼ ಮಾಡಿ ಆಪರೇಷನ್ ಕಮಲದ ಕೆಸರಿನಲ್ಲಿ ವಿಕೃತವಾಗಿ ಹೊರಳಾಡಿದವರು ಯಾರು ಎನ್ನುವುದು ಅವರ ಸ್ವಪಕ್ಷೀಯರಿಗೇ ಚೆನ್ನಾಗಿ ಗೊತ್ತು ಎಂದು ಎಚ್ ಡಿಕೆ ಆರೋಪಿಸಿದ್ದಾರೆ.
ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ. ಇನ್ನು, ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ; ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್ʼಗಳು!! ʼಸಿದ್ದಸೂತ್ರಧಾರʼನಿಗೆ ಇದೆಲ್ಲ ಗೊತ್ತಿಲ್ಲವೇ? ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ʼಸಂದೇಶ ಸನ್ನಿಧಿʼಯಲ್ಲಿ ʼಸಿದ್ಧಸೂತ್ರʼ ಹೆಣೆದ ʼರಕ್ಕಸ ರಾಜಕಾರಣʼಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್