“ಕುಮಾರಸ್ವಾಮಿ, ನೀನೊಬ್ಬ ಸಣ್ಣ ರಾಜಕಾರಣಿ’
Team Udayavani, Sep 21, 2019, 3:00 AM IST
ಬಾಗಲಕೋಟೆ: “ಕುಮಾರಸ್ವಾಮಿ, ನೀನೊಬ್ಬ ಸಣ್ಣ ರಾಜಕಾರಣಿ. ಇನ್ನೂ ಹುಡುಗ. ಲಾಸ್ಟ್ ಬೆಂಚ್ನಲ್ಲಿ ಕುಳಿತು, ಮಾಜಿ ಪ್ರಧಾನಿ ಮಗ ಎಂಬ ಕಾರಣಕ್ಕೆ ಸಿಎಂ ಆಗಿದ್ದೀಯಾ. ಯಡಿಯೂರಪ್ಪ ಹಾಗಲ್ಲ. ಹೋರಾಟ ಮಾಡಿ ಸಿಎಂ ಆದವರು. ಅವರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿದರೆ ಸೀರಿಯಸ್ ಆಗಿ ಹೇಳುತ್ತಿದ್ದೇನೆ ನಾನು ಸುಮ್ಮನಿರಲ್ಲ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಏಕವಚನದಲ್ಲೇ ನೇರ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, 40 ವರ್ಷಗಳಿಂದ ರಾಜಕೀಯದಲ್ಲಿ ದುಡಿದ ಯಡಿಯೂರಪ್ಪ ಬಗ್ಗೆ ಮಾತನಾಡುತ್ತೀಯಾ? ನಿಮ್ಮ ತಂದೆಗೆ ಎಷ್ಟು ಅನುಭವ ಇದೆಯೋ ಅಷ್ಟೇ ಅನುಭವ ಯಡಿಯೂರಪ್ಪ ಅವರಿಗಿದೆ. ಅವರಷ್ಟೇ ಚತುರತೆಯೂ ಇದೆ. ಬಿಎಸ್ವೈ ಕುಟುಂಬದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕುಮಾರಸ್ವಾಮಿಗೆ ಇಲ್ಲ. ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಕುಮಾರಸ್ವಾಮಿ ಇದನ್ನು ಇಲ್ಲಿಗೆ ನಿಲ್ಲಿಸಬೇಕು ಎಂದರು.
ಕುಮಾರಸ್ವಾಮಿ ಅವರು ಬಿಎಸ್ವೈ ಪತ್ನಿ ಸಾವಿನ ಬಗ್ಗೆ ಪ್ರಸ್ತಾಪಿಸಿದ್ದು ಸರಿಯಲ್ಲ. ಯಾರೂ ವೈಯಕ್ತಿಕ ವಿಷಯ ಮಾತನಾಡಬಾರದು. ಅದರ ಬಗ್ಗೆ ನಾನು ಚರ್ಚೆ ಮಾಡಲ್ಲ.
-ಗೋವಿಂದ ಕಾರಜೋಳ, ಡಿಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!