ಭವಾನಿಪುರ ಉಪ ಚುನಾವಣೆ : ದೀದಿ ಗೆಲ್ಲೋದು ಖಚಿತ ಎಂದ ಕುಮಾರಸ್ವಾಮಿ


Team Udayavani, Sep 22, 2021, 9:06 AM IST

hgjhjhgfdsa

ಬೆಂಗಳೂರು : ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಮೀಪಿಸಿದ್ದು, ಇದೇ ಸೆಪ್ಟಂಬರ್ 30ರಂದು ಚುನುವಾಣೆ ನಿಗದಿಯಾಗಿದೆ. ಮತದಾನ ಅಕ್ಟೋಬರ್ 3ರರವರೆಗೆ ನಡೆಯಲಿದೆ. ಮಮತಾ ಬ್ಯಾನರ್ಜಿ ಸ್ಪರ್ಧೆ ನಡೆಸಿದ್ದು, ತಾವು ಮುಖ್ಯಮಂತ್ರಿಯಾಗಿ ಉಳಿಯಲು ಈ ಚುನಾವಣೆಯನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಮಾಜಿ ಸಿಎಂ ಕುಮಾರಸ್ವಾಮಿ, ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರೀ ಅಂತರದ ಗೆಲವು ಸಾಧಿಸುವುದು ಖಚಿತ.

ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವತಃ ಆ ಪಕ್ಷದ ನಾಯಕ ರಾಜೀವ್ ಬ್ಯಾನರ್ಜಿ ಹೇಳಿರುವುದರಲ್ಲಿ ಅಚ್ಚರಿಯೇನು ಇಲ್ಲ. ಇದು ಅಪ್ಪಟ ಸತ್ಯ. ಮಮತಾ ಬ್ಯಾನರ್ಜಿ ಅವರು ಕೇವಲ ನಾಯಕಿಯಲ್ಲ, ಸಮಸ್ತ ಬಂಗಾಳಿಗರ ನಾಡಿಮಿಡಿತ. ಈ ಸತ್ಯವನ್ನು ಅರಿಯುವಲ್ಲಿ ಬಿಜೆಪಿ ಸೋತಿದೆ.

ಇತಿಹಾಸ ಸೃಷ್ಟಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಮತಾ ಅವರು ಕಳೆದ ಏಪ್ರಿಲ್‌ ತಿಂಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 294 ವಿಧಾಸಭೆ ಕ್ಷೇತ್ರಗಳ ಪೈಕಿ 214 ಸ್ಥಾನಗಳನ್ನು ಜಯಿಸಿದ್ದರು. ಆಗಲೇ ಅವರು ಚರಿತ್ರೆ ಬರೆದಿದ್ದರು. ಈಗ ಹೊಸ ಚರಿತ್ರೆ ಸೃಷ್ಟಿಗೆ ಅಣಿಯಾಗಿದ್ದಾರೆ.

ಜನರ ಬಾವನೆಗಳನ್ನು, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಂಡು ಗೌರವಿಸಬೇಕು. 2021ರ ಚುನಾವಣೆಯಲ್ಲಿ ಬಂಗಾಳದ ಮಹಾಜನತೆ ಮಮತಾ ಅವರಿಗೆ ಸ್ಪಷ್ಟ ಜನಾದೇಶ ನೀಡಿದ್ದಾಗಿದೆ. ಈ ಉಪ ಚುನಾವಣೆಯಲ್ಲಿ ಯಾವ ಪಕ್ಷವೂ ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಅವಿರೋಧ ಆಯ್ಕೆಗೆ ಸಹಕರಿಸಬೇಕಿತ್ತು.

ಬಿಜೆಪಿ ತನ್ನ ಸಂಕುಚಿತ ಮನೋಭಾವ ತೊರೆದು ದೊಡ್ಡತನ ಪ್ರದರ್ಶಿಸಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಪ್ರಜಾಬಲಕ್ಕಿಂತ ದೊಡ್ಡದು ಬೇರೊಂದಿಲ್ಲ ಎಂದು ಟ್ವಿಟ್ಟರ್ ನಲ್ಲಿ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.