ಕುಂದಾಪುರ: ಅಪಘಾತದಲ್ಲಿ ಶಾಲಾ ಶಿಕ್ಷಕಿ ಸಾವು; ಕಂಬನಿ ಮಿಡಿದ ವಿದ್ಯಾರ್ಥಿಗಳು


Team Udayavani, Aug 12, 2022, 6:59 PM IST

13kundapur

ಕುಂದಾಪುರ: ಬೈಕ್‌ ಪಲ್ಟಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹೆಮ್ಮಾಡಿ ಸರಕಾರಿ ಹಿ.ಪ್ರಾ. ಶಾಲೆಯ ಶಿಕ್ಷಕಿ, ಮುದೂರು ಸೆಳ್ಕೋಡು ನಿವಾಸಿ ಅಂಬಿಕಾ (32) ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ವಂಡ್ಸೆ ಸಮೀಪ ಗುರುವಾರ ಶಿಕ್ಷಕಿ ಅಂಬಿಕಾ ಅವರು ಪತಿ ಶ್ರೀಕಾಂತ್‌ ಅವರೊಂದಿಗೆ ಶಾಲೆಗೆ ಬೈಕಿನಲ್ಲಿ ಹೊರಟಿದ್ದು, ವಂಡ್ಸೆ ಸಮೀಪ ದನ ಅಡ್ಡ ಬಂದ ಪರಿಣಾಮ ಬೈಕ್‌ ಪಲ್ಟಿಯಾಗಿ ಇಬ್ಬರೂ ಕೆಳಕ್ಕೆ ಬಿದ್ದಿದ್ದರು. ಶ್ರೀಕಾಂತ್‌ಗೆ ಸಣ್ಣಪುಟ್ಟ ಗಾಯವಾದರೆ, ಸಹ ಸವಾರೆ ಅಂಬಿಕಾ ಅವರ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ರಾತ್ರಿ ವೇಳೆ ಸಾವನ್ನಪ್ಪಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆಯಲ್ಲಿ ಗೌರವ

ಶುಕ್ರವಾರ ನೆಚ್ಚಿನ ಶಿಕ್ಷಕಿಯ ಮೃತದೇಹವನ್ನು ಶಾಲೆಗೆ ತಂದಾಗ ವಿದ್ಯಾರ್ಥಿಗಳು, ಊರವರೆಲ್ಲ ಭಾವುಕರಾಗಿ ಕಣ್ಣೀರಿಟ್ಟರು. ಅಗಲಿದ ಶಿಕ್ಷಕಿಗೆ ಶಾಲೆಯ ಆವರಣದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು. ಮೃತರ ಗೌರವಾರ್ಥ ಶಾಲೆಗೆ ರಜೆ ನೀಡಲಾಗಿತ್ತು. ಮೃತ ಶಿಕ್ಷಕಿ ಅಂಬಿಕಾ ಅವರು ಪತಿ, ನಾವುಂದ ಶಾಲೆಯ ಶಿಕ್ಷಕ ಶ್ರೀಕಾಂತ್‌ ಹಾಗೂ ಒಂದೂವರೆ ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.

ಇದನ್ನೂ ಓದಿ: ವಿಟ್ಲ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಅಂಬಿಕಾ ಅವರು 2018ರಲ್ಲಿ ಹೆಮ್ಮಾಡಿ ಶಾಲೆಗೆ ಸೇರಿದ್ದು, ಅದಕ್ಕೂ ಮೊದಲು ಕಮಲಶಿಲೆ ಪ್ರೌಢಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಆ ನಾಲ್ಕು ವರ್ಷವೂ ಶಾಲೆಗೆ ಶೇ.100 ಫಲಿತಾಂಶ ಬಂದಿತ್ತು. ಈ ಕಾರಣಕ್ಕಾಗಿ ಅವರಿಗೆ ಅಂದು ಶಾಲಾ ಸಮಿತಿ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರಶಸ್ತಿ ನೀಡಿತ್ತು.

ಈ ವೇಳೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ಬಿಇಒ ನಾಗೇಶ್‌ ನಾಯ್ಕ, ಜಿ.ಪಂ. ಮಾಜಿ ಅಧ್ಯಕ್ಷ ಎಸ್‌.ರಾಜು ಪೂಜಾರಿ, ಮಾಜಿ ಸದಸ್ಯೆ ಶೋಭಾ ಜಿ. ಪುತ್ರನ್‌, ಹೆಮ್ಮಾಡಿ ಗ್ರಾ.ಪಂ. ಅಧ್ಯಕ್ಷ ಸುಧಾಕರ ದೇವಾಡಿಗ, ಸದಸ್ಯರಾದ ಯು. ಸತ್ಯನಾರಾಯಣ ರಾವ್‌, ರಾಘವೇಂದ್ರ ಪೂಜಾರಿ ಎಚ್‌., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್‌ ಭಂಡಾರಿ, ಕಾರ್ಯದರ್ಶಿ ಶ್ರೀಕಾಂತ ಹೆಮ್ಮಾಡಿ, ಮುಖ್ಯ ಶಿಕ್ಷಕ ದಿವಾಕರ, ಎಪಿಎಂಸಿ ಮಾಜಿ ಅಧ್ಯಕ್ಷ ಶರತ ಕುಮಾರ್‌ ಶೆಟ್ಟಿ ಬಾಳಿಕೆರೆ, ಕಟ್‌ಬೆಲ್ತೂರು ಗ್ರಾ.ಪಂ. ಅಧ್ಯಕ್ಷ ನಾಗರಾಜ್‌ ಪುತ್ರನ್‌, ತಾ| ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರ ಶೇಖರ ಶೆಟ್ಟಿ, ಸಮನ್ವಯಾಧಿಕಾರಿ ಕರುಣಾಕರ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಶೇಖರ ಪೂಜಾರಿ ಅಂತಿಮ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.