ಮುಖ್ಯಮಂತ್ರಿ ಭೇಟಿಗಾಗಿ ಒಂದು ಗಂಟೆ ಕಾದು ವಾಪಸ್ ಆದ ಶಾಸಕಿ ಕುಸುಮಾವತಿ ಶಿವಳ್ಳಿ
Team Udayavani, Mar 15, 2023, 12:03 PM IST
ಹುಬ್ಬಳ್ಳಿ: ಕುಂದಗೋಳ ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಮುಖ್ಯಮಂತ್ರಿಗಳ ಭೇಟಿಗಾಗಿ ಸುಮಾರು ಒಂದು ಗಂಟೆ ಕಾದರೂ ಭೇಟಿಯಾಗದ ಹಿನ್ನೆಲೆಯಲ್ಲಿ ವಾಪಸ್ಸು ತೆರಳಿದ ಘಟನೆ ನಡೆಯಿತು.
ಇಲ್ಲಿನ ಆದರ್ಶ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಶಾಸಕಿ ಕುಸುಮಾವತಿ ತೆರಳಿದ್ದರು. ಸುಮಾರು ಒಂದು ಗಂಟೆ ಕಾಲ ಕಾದರು ಕುಳಿತರು. ಆದರೆ ಬೆಳಗಾವಿಗೆ ತೆರಳುವ ಭರದಲ್ಲಿ ಭೇಟಿಯಾಗದೆ ಸಿಎಂ ಬೊಮ್ಮಾಯಿ ಹೊರಟು ಹೋದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಕುಸುಮಾವತಿ ಶಿವಳ್ಳಿ, ಕ್ಷೇತ್ರದ ಅಭಿವೃದ್ಧಿ ವಿಚಾರದ ಕುರಿತು ಆಗಮಿಸಿದ್ದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಆದರೆ ಮುಖ್ಯಮಂತ್ರಿಗಳು ಬೇರೆಡೆಗೆ ತುರ್ತಾಗಿ ಹೋಗುವುದರಿಂದ ಭೇಟಿಯಾಗಲಿಲ್ಲ. ಇನ್ನೊಮ್ಮೆ ಭೇಟಿಯಾಗುವುದಾಗಿ ಹೇಳಿ ಹೋದರು ಎಂದು ತಿಳಿಸಿದರು.
ಕುಂದಗೋಳ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ: ಯಾರು ಏನೇ ಮಾಡಿದರು ಟಿಕೆಟ್ ತಪ್ಪಿಸಲು ಸಾಧ್ಯವಿಲ್ಲ. ಕ್ಷೆತ್ರದಲ್ಲಿ ಯಾವುದೇ ಭಿನ್ನಮತವಿಲ್ಲ. ಭಿನ್ನಮತಕ್ಕಾಯೇ ಪ್ರಜಾಧ್ವನಿ ರದ್ದಾಗಿದೆ ಎಂಬುವುದು ಶುದ್ಧ ಸುಳ್ಳು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಯದ ಅಭಾವದಿಂದ ಕಾರ್ಯಕ್ರಮ ರದ್ದಾಗಿದೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್