Rajya Sabha; ಕಣದಲ್ಲೇ ಉಳಿದ ಕುಪೇಂದ್ರ ರೆಡ್ಡಿ; ಈಗ ಮೂರು ಪಕ್ಷಗಳಿಗೂ ಅಡ್ಡ ಮತ ಭೀತಿ
Team Udayavani, Feb 21, 2024, 12:43 AM IST
ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಫೆ. 27ರಂದು ನಡೆಯಲಿರುವ ಚುನಾವಣೆಗೆ ಅಂತಿಮವಾಗಿ ಐವರು ಅಭ್ಯರ್ಥಿಗಳು ಕಣದಲ್ಲಿ ಉಳಿದಿರುವುದ ರಿಂದ ಈಗ ಈ ಚುನಾವಣೆ ಕುತೂಹಲ ಕಾರಿ ಘಟ್ಟ ತಲುಪಿದೆ.
ನಾಮಪತ್ರ ವಾಪಸ್ ಪಡೆಯಲು ಮಂಗಳವಾರ ಕಡೆಯ ದಿನವಾಗಿತ್ತು. ತಮ್ಮ ಗೆಲುವಿಗೆ 9 ಮತಗಳ ಕೊರತೆ ಎದುರಿ ಸುತ್ತಿರುವ ಎನ್ಡಿಎ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಕೊನೆಘಳಿಗೆಯಲ್ಲಿ ನಾಮಪತ್ರ ವಾಪಸ್ ಪಡೆಯಬಹುದೆಂಬ ನಿರೀಕ್ಷೆ ಹುಸಿಯಾಗಿರುವು ದರಿಂದ ಈಗ ಕಾಂಗ್ರೆಸ್ನ ಮೂವರು ಅಧಿಕೃತ ಅಭ್ಯರ್ಥಿಗಳಲ್ಲಿ ನಡುಕ ಉಂಟಾಗಿದೆ.
ಕುಪೇಂದ್ರ ರೆಡ್ಡಿಗೆ ಬಿಜೆಪಿಯ ಹೆಚ್ಚುವರಿ 20 ಮತಗಳು ಹಾಗೂ ಜೆಡಿಎಸ್ನ 16 ಮತಗಳು ಚಲಾವಣೆಯಾಗಬಹುದೆಂಬ ಲೆಕ್ಕಾಚಾರವಿದ್ದು, ಅವರ ಗೆಲುವಿಗೆ ಇನ್ನೂ 9 ಮತಗಳ ಅಗತ್ಯವಿದೆ. ಈ ಅಗತ್ಯ ಮತಗಳನ್ನು ಎಲ್ಲಿಂದ ಪಡೆಯುತ್ತಾರೆ ಎಂಬುದು ಈಗ ಕುತೂಹಲ. ಸಹಜವಾಗಿ ಅವರು ಕಾಂಗ್ರೆಸ್ ಮತಬುಟ್ಟಿಗೆ ಕೈ ಹಾಕುವ ಪ್ರಯತ್ನ ನಡೆಸಿದಂತೆ ಕಾಣುತ್ತಿದೆ. ಜೆಡಿಎಸ್ನ ಅತೃಪ್ತರನ್ನು ಸೆಳೆಯಲು ಕಾಂಗ್ರೆಸ್ ಕೂಡ ಪ್ರತಿತಂತ್ರ ರೂಪಿಸುತ್ತಿದೆ.
ಕಣದಲ್ಲಿ ಕಾಂಗ್ರೆಸ್ನಿಂದ ಅಜಯ್ ಮಾಕೆನ್, ಜಿ.ಸಿ. ಚಂದ್ರಶೇಖರ್, ಡಾ| ನಾಸೀರ್ ಹುಸೇನ್ ಕಣದಲ್ಲಿದ್ದಾರೆ. ಕಾಂಗ್ರೆಸ್ನ ಎಲ್ಲ 136 ಮತಗಳು ಈ ಮೂವರಿಗೆ ಚಲಾವಣೆಯಾದರೆ ಆತಂಕ ಇಲ್ಲದೆ ಗೆಲುವಿನ ದಡ ಸೇರಲಿದ್ದಾರೆ. ಬಿಜೆಪಿಯಿಂದ ನಾರಾಯಣಸಾ ಭಾಂಡಗೆ ಸ್ಪರ್ಧಿಸಿದ್ದಾರೆ. ಒಂದು ವೇಳೆ ಅಡ್ಡ ಮತದಾನ ವಾದರೆ ಲೆಕ್ಕಾಚಾರ ಬುಡಮೇಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು