ಬಳ್ಳಾರಿ, ಮಂಗಳೂರು, ಬೆಳಗಾವಿಯಲ್ಲಿ ಪ್ರಯೋಗಾಲಯ
Team Udayavani, Mar 23, 2020, 3:05 AM IST
ಬೆಂಗಳೂರು: ಮುಂದಿನ ನಾಲ್ಕು ದಿನಗಳಲ್ಲಿ ಬಳ್ಳಾರಿ, ಮಂಗಳೂರು, ಬೆಳಗಾವಿಯಲ್ಲಿ ಕೊರೊನಾ ಸೋಂಕು ಪರೀಕ್ಷಾ ಪ್ರಯೋಗಾಲಯಗಳು ಆರಂಭವಾಗಲಿವೆ ಎಂದು ರಾಜ್ಯ ಕೊರೊನಾ ಪ್ರಯೋಗಾಲಯಗಳ ಹೆಚ್ಚುವರಿ ಕರ್ತವ್ಯಾಧಿಕಾರಿ ಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.
ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಇಲಾಖೆಯು ಶನಿವಾರ ಶಂಕಿತರ ಪರೀಕ್ಷಾ ನಿಯಮ ತಿದ್ದುಪಡಿ ಮಾಡಿತ್ತು. ಇದರಿಂದ ಪರೀಕ್ಷೆಗೆ ಒಳಗಾಗುತ್ತಿರುವವರ ಸಂಖ್ಯೆ ನಿತ್ಯ 200 ರಿಂದ 250ಕ್ಕೆ ದಾಟುತ್ತಿದೆ. ಹೀಗಾಗಿ, ನೂತನ ಪ್ರಯೋಗಾಲಯಗಳು ಅತ್ಯಗತ್ಯವಾಗಿದ್ದವು.
ರಾಜ್ಯದಲ್ಲಿ ಹೊಸ ಪ್ರಯೋಗಾಲಯ ಆರಂಭ ಕುರಿತಿ ಮಾಹಿತಿ ನೀಡಿದ ಡಾ.ಸಿ.ಎನ್.ಮಂಜುನಾಥ್, ರಾಜ್ಯಕ್ಕೆ ಅಗತ್ಯ ಪ್ರಯೋಗಾಲಯಗಳ ನೀಡುವ ಕುರಿತು ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಅನುಮತಿ ಪಡೆಯಲಾಗುತ್ತಿದೆ. ಮುಂದಿನ ನಾಲ್ಕು ದಿನದೊಳಗೆ ಬಳ್ಳಾರಿ, ಮಂಗಳೂರು, ಬೆಳಗಾವಿಯಲ್ಲಿ ಮೆಡಿಕಲ್ ಕಾಲೇಜುಗಳಲ್ಲಿ ಪ್ರಯೋಗಾಲಯ ಆರಂಭಿಸಲಾಗುವುದು.
ಕಲಬುರಗಿಯಲ್ಲಿ ಎರಡು ದಿನಗಳಿಂದ ಪ್ರಯೋಗಾಲಯ ಕಾರ್ಯಾಚರಣೆ ನಡೆಸುತ್ತಿದೆ. ಇನ್ನು ಬೆಂಗಳೂರಿನಲ್ಲಿಯೇ ಹೆಚ್ಚು ಶಂಕಿತರು ಇರುವುದರಿಂದ ನಿಮ್ಹಾನ್ಸ್ನಲ್ಲಿ ಎರಡು ದಿನಗಳಲ್ಲಿ ಪ್ರಯೋಗಾಲಯ ಪ್ರಾರಂಭವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ