ಪದವಿ ಕಾಲೇಜಿನಲ್ಲಿ ಸಿಸಿಕ್ಯಾಮೆರಾ ಅಳವಡಿಕೆಗೆಅನುದಾನ ಕೊರತೆ
Team Udayavani, Sep 24, 2017, 7:34 AM IST
ಬೆಂಗಳೂರು: ಕಾಲೇಜಿನಲ್ಲಿ ಲಭ್ಯವಿರುವ ಅನುದಾನದಲ್ಲೇ ತರಗತಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿರುವುದರಿಂದ ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜಿನ ಆಡಳಿತ ಮಂಡಳಿಗೆ ಹೊಸ ಪೀಕಲಾಟ ಆರಂಭವಾಗಿದೆ.
ಸಿಡಿಸಿ, ಆರ್ಆರ್ ಮತ್ತು ಸಿಡಿಎಫ್ ಅಥವಾ ಇನ್ನಿತರೆ ಅನುದಾನ ದಲ್ಲಿಯೇ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕೆಂದು ಹೇಳಿರುವುದು ಕಾಲೇಜು ಪ್ರಾಂಶುಪಾಲರಿಗೆ ಮತ್ತು ಆಡಳಿತ ಮಂಡಳಿಗೆ ನುಂಗಲಾರದ ತುತ್ತಾಗಿದ್ದು, ಕೆಲವು ಕಾಲೇಜಿನಲ್ಲಿ ಪೀಠೊಪಕರಣವೇ ವ್ಯವಸ್ಥಿತವಾಗಿಲ್ಲ. ಹೀಗಿರುವಾಗ ಸಿಸಿ ಕ್ಯಾಮೆರಾ ಅಳವಡಿಕೆ ಹೇಗೆ ಸಾಧ್ಯ? ರಾಜ್ಯದ ಬಹುತೇಕ ಸರ್ಕಾರಿ, ಅನುದಾನಿತ ಪದವಿ ಕಾಲೇಜಿನಲ್ಲಿ ಮೂಲ ಸೌಕರ್ಯ, ಪ್ರಯೋಗಾಲಯ, ವ್ಯವಸ್ಥಿತ ಕೊಠಡಿಗಳೇ ಇಲ್ಲ. ಇಂಥ ಸಂದರ್ಭದಲ್ಲಿ ಕಾಲೇಜು ಅನುದಾನದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ಪ್ರತಿ ತರಗತಿಗೂ ಸಿಸಿ ಕ್ಯಾಮೆರಾ ಅಳವಡಿಸುವುದರಿಂದ ಕನಿಷ್ಠ 5 ರಿಂದ 10 ಲಕ್ಷ ರೂ.ಗಳ ಅವಶ್ಯಕತೆಯಿದೆ. ಸರ್ಕಾರ ದಿಂದ ಯಾವುದೇ ಅನುದಾನ ನೀಡುವುದಿಲ್ಲ ಎಂದು ಸರ್ಕಾರಿ ಕಾಲೇಜು ಪ್ರಾಂಶುಪಾಲರೊಬ್ಬರು ಹೇಳಿದರು.
ಸರ್ಕಾರದ ಆದೇಶ: ರಾಜ್ಯ ಮಹಿಳಾ ಆಯೋಗ ಮತ್ತು ಒಳಾಡಳಿತ ಇಲಾಖೆ ನೀಡಿರುವ ಸೂಚನೆಯಂತೆ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಪದವಿ ಕಾಲೇಜಿನ ತರಗತಿಗಳಿಗೆ ಆದ್ಯತೆ ಮೇರೆಗೆ ತಿಂಗಳೊಳಗೆ ಕೆಪಿಟಿಟಿ ನಿಯಮದ ಪ್ರಕಾರ ಸಿಸಿ ಕ್ಯಾಮೆರಾ ಅಳವಡಿಸಲು ಸುತ್ತೋಲೆ ಹೊರಡಿಸಿದೆ.
ಪ್ರಾಂಶುಪಾಲರ ವಿರುದ್ಧ ಕ್ರಮ: ವಿಜ್ಞಾನ ತರಗತಿ ಹೊಂದಿರುವ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜಿನಲ್ಲಿ ಪ್ರಯೋಗಾಲಯ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಡ್ಡಾಯವಾಗಿ ಪ್ರಯೋಗಾಲಯದ ಸಮವಸ್ತ್ರ ಧರಿಸಬೇಕು. ಪ್ರಯೋಗಾಲದ ಸಮವಸ್ತ್ರ ಧರಿಸದೇ ಇರುವುದು ಕಂಡಬಂದರೆ ಆಯಾ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ