ಶಿವಮೊಗ್ಗ ಚಲೋ ಹಿಂದೆ ‘ಕೆಪಿಸಿಸಿ ಅಘೋಷಿತ ಅಧ್ಯಕ್ಷೆ ಮಹಾನಾಯಕಿ’ಯ ಕೈವಾಡ: ಬಿಜೆಪಿ
Team Udayavani, Mar 18, 2021, 11:23 AM IST
ಶಿವಮೊಗ್ಗ ಚಲೋ
ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ನಡೆಸಿದ ಶಿವಮೊಗ್ಗ ಚಲೋ ಜಾಥಾದ ಹಿಂದೆ ಕೆಪಿಸಿಸಿಯ ಅಘೋಷಿತ ಅಧ್ಯಕ್ಷೆ ಮಹಾನಾಯಕಿಯ ಕೈವಾಡವಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.
ಕೆಲ ದಿನಗಳಿಂದ ನಡೆಯುತ್ತಿರುವ ರಾಜ್ಯ ಬಿಜೆಪಿ- ಕಾಂಗ್ರೆಸ್ ನಡುವಿನ ಟ್ವೀಟ್ ಸಮರ ಮುಂದುವರಿದಿದೆ. ಇಂದು ಟ್ವೀಟ್ ಮಾಡಿರುವ ಬಿಜೆಪಿ, ಶಿವಮೊಗ್ಗ ಚಲೋ ಹಿಂದೆ ಕೆಪಿಸಿಸಿ ಅಘೋಷಿತ ಅಧ್ಯಕ್ಷೆ ಮಹಾನಾಯಕಿಯ ಕೈವಾಡವಿದೆ. “ಮಹಾನಾಯಕ”ನೊಬ್ಬರು ಅಘೋಷಿತ ಅಧ್ಯಕ್ಷೆಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದಿದೆ.
ಇದನ್ನೂ ಓದಿ:ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾದ ನಟ ಕಿಚ್ಚ ಸುದೀಪ್
ಬೀಗ-ಬೀಗತಿ ಸಂಬಂಧಕ್ಕಾಗಿ ಶಿವಮೊಗ್ಗ ಚಲೋ ಮಾಡಿದ ಕಾಂಗ್ರೆಸ್, ಜನತೆಗೆ ತಪ್ಪು ಮಾಹಿತಿ ನೀಡಿ, ಸದನದ ಸಮಯ ವ್ಯರ್ಥ ಮಾಡಿತ್ತು ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಭದ್ರವಾತಿ ಕಬಡ್ಡಿ ಕೂಟದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಸಂಗಮೇಶ್ ಮತ್ತು ಕುಟುಂಬದವರ ವಿರುದ್ಧ ಕೇಸು ದಾಖಲಾಗಿತ್ತು. ಅದಲ್ಲದೆ ಸಂಗಮೇಶ್ ಪುತ್ರನನ್ನು ಪೊಲೀಸರು ಬಂಧಿಸಿದ್ದರು. ಇದನ್ನು ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗಿತ್ತು.
ಇದನ್ನೂ ಓದಿ: ಕುಸ್ತಿ ಕೂಟದಲ್ಲಿ ಒಂದು ಅಂಕದಿಂದ ಸೋಲು: ಮನನೊಂದ ಗೀತಾ ಪೋಗಟ್ ಸಹೋದರಿ ಆತ್ಮಹತ್ಯೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ