ಭೂ ಖರೀದಿಯಲ್ಲಿ ಸರ್ಕಾರದಿಂದಲೇ ವಂಚನೆ?


Team Udayavani, May 6, 2017, 12:10 PM IST

land.jpg

ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌, ಆಶ್ರಯ ಮನೆಗಳ ನಿರ್ಮಾಣಕ್ಕೆ ಬೇಕಾದ ಜಮೀನು ಖರೀದಿ
ವಿಚಾರದಲ್ಲಿ ಸರ್ಕಾರವೇ ರೈತರಿಗೆ ವಂಚನೆ ಮಾಡಿರುವುದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಚಳ್ಳಕೆರೆ ತಾಲೂಕಿನ ನೆಲಗೇತನ ಹಟ್ಟಿಯಲ್ಲಿ ಈ ಪ್ರಕರಣ ನಡೆದಿದೆ.

ಗ್ರಾಮದ ರೈತರಾದ ಸಣ್ಣಬೋರಯ್ಯ ಅವರು 12-6-1998ರಂದು ಹಾಗೂ ದೊಡ್ಡಬೋರಯ್ಯ ಎಂಬುವರು 24-1-
2002ರಂದು ಮೃತಪಟ್ಟಿದ್ದಾರೆ. ಹಿಂದೂ ಅವಿಭಾಜ್ಯ ಕುಟುಂಬ ಕಾಯ್ದೆಯ ಪ್ರಕಾರ ಆಸ್ತಿ ಹಕ್ಕಿನ ಬದಲಾವಣೆ ಆಗಬೇಕು.
ಮೊದಲು ಪತ್ನಿ ಹೆಸರಿಗೆ, ಪತ್ನಿ ಇಲ್ಲದಿದ್ದರೆ ಕುಟುಂಬದ ಹಿರಿಯ ಮಗನಿಗೆ ಪೌತಿ ಖಾತೆ ಮಾಡಿಕೊಡಬೇಕು.

ಒಬ್ಬರಿಗಿಂತ ಹೆಚ್ಚು ಮಕ್ಕಳಿದ್ದರೆ ಅವರ ಒಪ್ಪಿಗೆ ಮೇರೆಗೆ ಏಕವ್ಯಕ್ತಿಗೆ ಖಾತೆ ಮಾಡಿಕೊಡಬಹುದಾಗಿದೆ. ಇಲ್ಲವಾದರೆ ಜಂಟಿ ಖಾತೆಯಲ್ಲಿ ಎಲ್ಲರ ಹೆಸರಿಗೆ ಮಾಡಬೇಕಾಗುತ್ತದೆ. ಆದರೆ, ನೆಲಗೇತನಹಟ್ಟಿಯ ಪ್ರಕರಣದಲ್ಲಿ ಈ ಕಾಯ್ದೆಯ ಉಲ್ಲಂಘನೆಯಾಗಿದೆ ಎನ್ನಲಾಗಿದೆ.

ವಂಚನೆ ನಡೆದಿದ್ದು ಹೀಗೆ: ಸಣ್ಣಬೋರಯ್ಯ ಹಾಗೂ ದೊಡ್ಡಬೋರಯ್ಯ ಮೃತಪಟ್ಟಿದ್ದರೂ ಅಧಿಕಾರಿಗಳು ಅವರ ಮಕ್ಕಳಿಗೆ ಪೌತಿ ಖಾತೆಯನ್ನೇ ಮಾಡಿಕೊಟ್ಟಿಲ್ಲ. ತಂದೆಯ ಹೆಸರಿನಲ್ಲೇ ಚಳ್ಳಕೆರೆ ನೋಂದಣಾಧಿಕಾರಿಗಳ ಕಚೇರಿಯಲ್ಲಿ 24-4-2004ರಂದು ಕರ್ನಾಟಕ ಸರ್ಕಾರದ ರಾಜ್ಯಪಾಲರ ಹೆಸರಿನಲ್ಲಿ ಚಳ್ಳಕೆರೆ ತಾಲೂಕು ಸಮಾಜ ಕಲ್ಯಾಣ ಇಲಾಖೆ,
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಚ್‌.ಆರ್‌. ಬಾಲಕೃಷ್ಣ ಹೆಸರಿಗೆ 20 ಗುಂಟೆ ಜಮೀನನ್ನು ದಾನಪತ್ರ ಮಾಡಿಸಲಾಯಿತು. ಅಲ್ಲದೆ 11-1-2008ರಂದು 7.33 ಎಕರೆ ಜಾಗವನ್ನು ಚಳ್ಳಕೆರೆ ತಹಶೀಲ್ದಾರ್‌ ಹೆಸರಿನಲ್ಲಿ ಖಾತೆ ಬದಲಾವಣೆ ಮಾಡಲಾಗಿದೆ. ಪ್ರತಿ ಎಕರೆಗೆ ಅಂದಿನ ಮಾರುಕಟ್ಟೆ ದರವಾದ 19,200 ರೂ. ನೀಡಲಾಗಿದೆ. ಮೊದಲು ಖರೀದಿಸಿದ 20 ಗುಂಟೆ ಜಾಗದಲ್ಲಿ ಸಮಾಜಕಲ್ಯಾಣ ಇಲಾಖೆಯ ಹಾಸ್ಟೆಲ್‌, ತಹಶೀಲ್ದಾರ್‌ ಹೆಸರಿಗೆ ವರ್ಗಾವಣೆಗೊಂಡಿದ್ದ 7.33 ಎಕರೆ ಜಾಗದಲ್ಲಿ ಆಶ್ರಯ ಮನೆಗಳ ನಿರ್ಮಾಣಕ್ಕೆ ಸರ್ಕಾರ ನಿವೇಶನ ಹಂಚಿಕೆ ಮಾಡಿದೆ.

ದುಪ್ಪಟ್ಟು ಪರಿಹಾರ ತಪ್ಪಿಸುವ ತಂತ್ರವೇ?:
ಆಶ್ರಯ ಮನೆಗಳ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಳ್ಳಲಾಗಿರುವ 7.33 ಎಕರೆ ಜಮೀನು ಖರೀದಿಸುವಾಗಲೂ ಸರ್ಕಾರ ಈ ಮೇಲಿನ ತಂತ್ರವನ್ನೇ ಅನುಸರಿಸಿದ್ದು ಕಂಡು ಬಂದಿದೆ. ಈ ಜಮೀನು ಕೂಡ ದೊಡ್ಡಬೋರಯ್ಯ ಹಾಗೂ ಸಣ್ಣ ಬೋರಯ್ಯ ಅವರಿಗೆ ಸೇರಿದ್ದಾಗಿದೆ. ದೊಡ್ಡ ಬೋರಯ್ಯ ಅವರಿಗೆ ಎಂ.ಬಿ.ಬೋರಯ್ಯ ಮತ್ತು ಓಬಯ್ಯ ಎಂಬ ಮಕ್ಕಳಿದ್ದಾರೆ.

ಮೀಸೆಬೋರಯ್ಯ, ಎಂ.ಬಿ. ಓಬಯ್ಯ, ಎಂ.ಬಿ. ಸಣ್ಣಬೋರಯ್ಯ ಅವರು ಸಣ್ಣ ಬೋರಯ್ಯ ಅವರ ಪುತ್ರರಾಗಿದ್ದಾರೆ.
ಸರ್ಕಾರ ನಯವಾಗಿ ಮಾಡಿದ ವಂಚನೆ ಇವರಿಗೆ ಗೊತ್ತಾಗುವಷ್ಟರಲ್ಲಿ ಪರಿಸ್ಥಿತಿ ಕೈಮೀರಿ ಹೋಗಿತ್ತು. ತಮಗೆ ಮೋಸವಾಗಿದ್ದನ್ನು ಅರಿತ ಅವರೆಲ್ಲರೂ ನ್ಯಾಯಪಡೆಯಲು ಸಾಕಷ್ಟು ಹೋರಾಟ ಮಾಡಿದರೂ ಪ್ರಯೋಜನವಾಗಲಿಲ್ಲ. ಹೀಗಾಗಿ ಅಂತಿಮವಾಗಿ ಮಾಧ್ಯಮದವರೆದುರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಸರ್ಕಾರ ರೈತರಿಂದ ಭೂಸ್ವಾಧೀನ ಮಾಡಿ ಕೊಂಡಲ್ಲಿ ಮಾರುಕಟ್ಟೆ ದರಕ್ಕಿಂತ ನಾಲ್ಕು ಪಟ್ಟು ಪರಿಹಾರ ನೀಡಬೇಕಾಗುತ್ತದೆ.

ಆದರೆ ಸರ್ಕಾರ ಇಲ್ಲಿಯೂ ಬುದ್ಧಿವಂತಿಕೆ ಮಾಡಿ ರಿಯಲ್‌ ಎಸ್ಟೇಟ್‌ ಉದ್ದಿಮೆ ಮಾದರಿಯಲ್ಲಿ ಕೇವಲ 19,200 ರೂ.
ಗಳ ಮಾರುಕಟ್ಟೆ ದರದಲ್ಲಿ ಜಮೀನು ಖರೀದಿ ಮಾಡಿದೆ. ಇಡೀ ಪ್ರಕರಣದಲ್ಲಿ ಅವ್ಯವಹಾರ, ವಂಚನೆ ನಡೆದಿದೆ ಎಂದು
ಹೇಳಲಾಗಿದೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.