ವಿಧಾನಸಭೆಯಲ್ಲಿ ಭೂ ಕಬಳಿಕೆ ನಿಷೇಧ ವಿಧೇಯಕ ಮಂಡನೆ
Team Udayavani, Sep 14, 2022, 1:12 PM IST
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಹೊಂದಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ.
ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜಿ.ಸಿ.ಮಾಧುಸ್ವಾಮಿ ಈ ವಿಧೇಯಕವನ್ನು ಮಂಡಿಸಿದ್ದು, ಸದನ ಚರ್ಚೆಗೆ ಅಂಗೀಕರಿಸಿದೆ.
ಇದನ್ನೂ ಓದಿ: ಜೆಡಿಎಸ್ಗೆ ಮೋದಿ ,ಅಮಿತ್ ಶಾ ವಿಚಾರ ಬಂದಾಗ ಮಾತ್ರ ಹಿಂದಿ ವಿರೋಧ ನೆನೆಪಾಗುತ್ತದೆ: ಸಿಟಿ ರವಿ
ಭೂ ಕಬಳಿಕರ ಕಾಯಿದೆ – 2011 ರ ಹಾಗೂ 22ರ ಅಧಿಸೂಚನೆಗೆ ತಿದ್ದುಪಡಿ ತರಲಾಗಿದ್ದು, ನಗರ ಪಾಲಿಕೆ ಪರಿಮಿತಿ ಒಳಗಿನ ಸರ್ಕಾರ, ವಕ್ಫ್ ಅಥವಾ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳು , ಸ್ಥಳೀಯ ಪ್ರಾಧಿಕಾರಗಳು, ಸರ್ಕಾರದ ಒಡೆತನದ , ನಿಯಂತ್ರಣ, ವ್ಯವಸ್ಥಾಪನೆಗೆ ಒಳಪಟ್ಟ ಭೂಮಿಯ ವಿವಾದಗಳು ತಕ್ಷಣದಿಂದ ಕೊನೆಗೊಳಿಸುವುದಕ್ಕಾಗಿ ಈ ವಿಧೇಯಕ ಜಾರಿಗೆ ತರಲಾಗುತ್ತಿದೆ. ಆದರೆ ಬಿಬಿಎಂಪಿ ಹಾಗೂ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಸ್ವತ್ತುಗಳನ್ನು ಈ ವ್ಯಾಪ್ತಿಯಿಂದ ಹೊರಗಿಡಲಾಗಿದೆ.
ಚಾಮರಾಜಪೇಟೆ ಈದ್ಗಾ ಭೂ ವಿವಾದ ಹಿನ್ನೆಲೆಯಲ್ಲಿ ಸರಕಾರ ಈ ಕಾಯಿದೆ ಜಾರಿಗೆ ತರಲು ಮುಂದಾಗಿದೆ ಎಂಬ ಚರ್ಚೆ ಈಗ ಪ್ರಾರಂಭವಾಗಿದೆ.
ಈ ವಿಧೇಯಕದ ಪರ್ಯಾಲೋಚನೆ ಮುಂದಿನ ವಾರ ಉಭಯ ಸದನಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆ ಇದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಡೆ ಕುತೂಹಲ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ