ಮೈಸೂರಿನಲ್ಲಿ ಭೂ ಹರಗರಣ : ರೋಹಿಣಿಯನ್ನು ವಿಶೇಷ ಅಧಿಕಾರಿಯಾಗಿ ನೇಮಕ ಮಾಡಲು ವಿಶ್ವನಾಥ್ ಮನವಿ
Team Udayavani, Jun 10, 2021, 1:51 PM IST
ಮೈಸೂರು : ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭೂ ಅಕ್ರಮದ ವಿಚಾರವನ್ನು ತುರ್ತಾಗಿ ಜಾರಿಗೊಳಿಸುವಂತೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗೌತಮ್ ಅವರಿಗೆ ಮನವಿ ಎಂ.ಎಲ್.ಸಿ ಹೆಚ್ ವಿಶ್ವನಾಥ್ ಮನವಿ ಮಾಡಿದ್ದಾರೆ.
ಈ ಹಿಂದೆ ರೋಹಿಣಿ ಅವರು ನಾಲ್ಕು ಆದೇಶಗಳನ್ನು ಮಾಡಿದ್ದಾರೆ. ಆ ಆದೇಶದ ಪ್ರತಿಗಳನ್ನು ಮನವಿ ಪತ್ರದ ಜೊತೆ ವಿಶ್ವನಾಥ್ ಡಿಸಿಯವರಿಗೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ನಾಲ್ಕು ಪ್ರಕರಣಗಳು ಮಾತ್ರವಲ್ಲ ಇಂತಹ ಹಲವು ಪ್ರಕರಣಗಳಿವೆ. ಸುಪ್ರೀಂಕೋರ್ಟ್ ಆದೇಶ ಇದೆ. ಇದರ ಬಗ್ಗೆ ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ವಿಶ್ವನಾಥ್ ಮನವಿ ಮಾಡಿದ್ದಾರೆ.
ನಾಳೆ ಬೆಂಗಳೂರಿನಲ್ಲಿ ಸಿಎಂ ಹಾಗು ಸಿಎಸ್ ಭೇಟಿ ಮಾಡುತ್ತೇನೆ. ಮೈಸೂರು ಸುತ್ತ ಮುತ್ತ ಭೂ ಹಗರಣದ ವಿಚಾರಣೆ ಮಾಡಲು
ರೋಹಿಣಿ ಸಿಂಧೂರಿಯನ್ನು ವಿಶೇಷಧಿಕಾರಿಯಾಗಿ ನೇಮಿಸಲು ಮನವಿ ಮಾಡಿದ್ದಾರೆ. ಚಾಮುಂಡಿಬೆಟ್ಟದ ಸುತ್ತ ಮುತ್ತ ಸಹಾ ಒತ್ತುವರಿಯಾಗಿದೆ. 6 ತಿಂಗಳ ಕಾಲ ರೋಹಿಣಿ ಸಿಂಧೂರಿ ಅವರನ್ನು ನೇಮಿಸಲು ಎಚ್ ವಿಶ್ವನಾಥ್ ಒತ್ತಾಯ ಮಾಡಿದ್ದಾರೆ. ಶನಿವಾರ ಅಥವಾ ಸೋಮವಾರ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಅವರು ತಿಳಿಸಿದರು,
ಹೆದರಿಕೆ ಯಾಕೆ ತನಿಖೆ ಮಾಡಲಿ, ತನಿಖೆಯಾಗಲು ಬಿಡಿ. ನನ್ನ ಸ್ನೇಹಿತರಿಗೂ ಮನವಿ ಮಾಡುತ್ತೇನೆ. ನಾನು ಮತ್ತೆ ಅವರನ್ನು ಜಿಲ್ಲಾಧಿಕಾರಿ ಮಾಡಿ ಅಂತಾ ಹೇಳುವುದಿಲ್ಲ. ನಾನು ಸಾ ರಾ ಮಹೇಶ್ ಅವರ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ಸಾ ರಾ ಕಲ್ಯಾಣಮಂಟಪದ ಬಗ್ಗೆ ದಾಖಲೆ ಕೊಡಲಿ ಎಂದು ಮೈಸೂರಿನಲ್ಲಿ ಎಂ ಎಲ್ ಸಿ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು