ಗಡಿ ಬಂಕ್ಗಳಿಂದ ಭರ್ಜರಿ ಆದಾಯ
ತೆರಿಗೆ ಇಳಿಕೆ ಖೋತಾ ಮತ್ತೊಂದು ಮಾರ್ಗದಲ್ಲಿ ಬೊಕ್ಕಸಕ್ಕೆ ಜಮೆ
Team Udayavani, Nov 18, 2021, 7:10 AM IST
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಇಳಿಸಿದ್ದರಿಂದ ಸರಕಾರದ ಬೊಕ್ಕಸಕ್ಕೆ ನಿರೀಕ್ಷಿಸಿದಷ್ಟು ಆದಾಯ ಖೋತಾ ಆಗದು. ನೆರೆಯ ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳಲ್ಲಿ ಮಾರಾಟ ತೆರಿಗೆ ಇಳಿಸದ್ದರಿಂದ ಅಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚೇ ಇದೆ. ಇದರಿಂದ ಗಡಿಯಲ್ಲಿರುವ ಕರ್ನಾಟಕದ ಬಂಕ್ಗಳಲ್ಲಿ ಭರ್ಜರಿ ಇಂಧನ ತೈಲ ಮಾರಾಟವಾಗುತ್ತಿರುವುದೇ ಇದಕ್ಕೆ ಕಾರಣ.
ಸಾಮಾನ್ಯವಾಗಿ ರಾಜ್ಯದಲ್ಲಿ ನಿತ್ಯ 60 ಲಕ್ಷ ಲೀಟರ್ ಪೆಟ್ರೋಲ್, ಡೀಸೆಲ್ ಮಾರಾಟವಾಗುತ್ತದೆ. ದರ ಇಳಿಕೆಯ ಬಳಿಕ ಬಳಕೆ ಹೆಚ್ಚಳವಾಗಿರುವುದರ ಜತೆಗೆ ಗಡಿಯ ಬಂಕ್ಗಳಲ್ಲಿ ನೆರೆ ರಾಜ್ಯಗಳವರ ಖರೀದಿ ಹೆಚ್ಚಿರುವುದರಿಂದ ದೈನಿಕ ಪೆಟ್ರೋಲ್, ಡೀಸೆಲ್ ವ್ಯಾಪಾರ 80 ಲಕ್ಷ ಲೀಟರ್ವರೆಗೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ನಿತ್ಯ 3ರಿಂದ 6 ಸಾವಿರ ಲೀಟರ್ ಮಾರಾಟವಾಗುತ್ತಿದ್ದ ಗಡಿಭಾಗದ ಬಂಕ್ಗಳಲ್ಲಿ ಮಾರಾಟ 15 ಸಾವಿರದಿಂದ 20 ಸಾವಿರ ಲೀಟರ್ಗೆ ಏರಿಕೆಯಾಗಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಮತ್ತೊಬ್ಬ ಶಂಕಿತ ಐಎಸ್ಐ ಉಗ್ರ ಸೆರೆ
ನಷ್ಟ ಕಡಿಮೆ
ರಾಜ್ಯ ಸರಕಾರಕ್ಕೆ ಪೆಟ್ರೋಲ್, ಡೀಸೆಲ್ ಮೇಲಿನ ಮಾರಾಟ ತೆರಿಗೆಯಿಂದ ಮಾಸಿಕ 1,500ರಿಂದ 1,600 ಕೋಟಿ ರೂ.ವರೆಗೆ ಆದಾಯ ಬರುತ್ತದೆ. ಅಕ್ಟೋಬರ್ನಲ್ಲಿ 1,739.25 ಕೋಟಿ ರೂ. ಸಂಗ್ರಹವಾಗಿದೆ. ನೆರೆ ರಾಜ್ಯಗಳು ತೆರಿಗೆ ಕಡಿತ ಮಾಡದಿದ್ದರೆ ನವೆಂಬರ್ನಲ್ಲಿ 1,500 ಕೋಟಿ ರೂ.ವರೆಗೆ ಸಂಗ್ರಹವಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೆರಿಗೆ ಇಳಿಕೆಯಿಂದ ವಾರ್ಷಿಕ 2,100 ಕೋಟಿ ರೂ. ನಷ್ಟವಾಗಬಹುದು ಎಂದು ಅಂದಾಜು ಮಾಡಲಾಗಿದ್ದು, ಗಡಿಯಲ್ಲಿ ಮಾರಾಟ ಹೆಚ್ಚಳವಾಗಿರುವುದರಿಂದ ನಷ್ಟ ಕಡಿಮೆಯಾಗಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ