ಕಾವೇರಿ ಕೂಗು ಅಭಿಯಾನ ಆರಂಭ
Team Udayavani, Aug 1, 2019, 3:05 AM IST
ಚೆನ್ನೈ: ಕಾವೇರಿ ನದಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾವೇರಿ ಕಾಲಿಂಗ್ (ಕಾವೇರಿ ಕೂಗು) ಎಂಬ ಹೆಸರಿನ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಈ ಅಭಿಯಾನದ ಅಡಿಯಲ್ಲಿ ತಮಿಳುನಾಡು ಹಾಗೂ ಕರ್ನಾಟಕದ 28 ಜಿಲ್ಲೆಗಳನ್ನು ವಾಹನಗಳ ಮೇಲೆ ಪ್ರಯಾಣಿಸಲಾಗುತ್ತದೆ.
ತಮಿಳುನಾಡಿನ ವೆಲ್ಲಿಯಂಗಿರಿ ಪರ್ವತದ ತಪ್ಪಲಿನಲ್ಲಿ ಸ್ಥಾಪಿತವಾದ 112 ಅಡಿ ಎತ್ತರದ ಆದಿಯೋಗಿಯ ಸಮ್ಮುಖದಿಂದ ಈ ಅಭಿಯಾನಕ್ಕೆ ಈಶ ಫೌಂಡೇಶನ್ನ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ ಚಾಲನೆ ನೀಡಿದ್ದಾರೆ. ತಮಿಳುನಾಡು ಬಿಜೆಪಿ ಪ್ರಧಾನ ಕಾರ್ಯದರ್ಶಿ ವನತಿ ಶ್ರೀನಿವಾಸನ್, ನಟಿ ರಾಧಿಕಾ ಶರತ್ಕುಮಾರ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಾಹನದ ರ್ಯಾಲಿಯ ಜೊತೆಗೆ ಕಾವೇರಿ ಕಾಲಿಂಗ್ ಅಭಿಯಾನದ ಅಡಿಯಲ್ಲಿ ಇತರ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಕಾವೇರಿ ನದಿಯ ದಡದಲ್ಲಿ ರೈತರು 242 ಕೋಟಿ ಸಸಿಗಳನ್ನು ನೆಡಲಿದ್ದಾರೆ. ಇನ್ನೊಂದೆಡೆ ಕಾವೇರಿ ನದಿಯ ನೀರಿನ ಮಟ್ಟವನ್ನು ಮೊದಲಿನ ಸ್ಥಿತಿಗೆ ತರುವ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ.
ಒಂದು ತಿಂಗಳವರೆಗೆ ನಡೆಯಲಿರುವ ವಾಹನದ ರ್ಯಾಲಿಯಲ್ಲಿ ಸಾವಿರಕ್ಕೂ ಹೆಚ್ಚು ರೈತರನ್ನು ಭೇಟಿ ಮಾಡುವ ಉದ್ದೇಶವಿದೆ. ರ್ಯಾಲಿ ವೇಳೆ ಗಣ್ಯ ವ್ಯಕ್ತಿಗಳ ವೀಡಿಯೋ ಸಂದೇಶಗಳು, ವೈಯಕ್ತಿಕ ಸಂವಹನ ಮತ್ತು ಮುದ್ರಿತ ಸಾಹಿತ್ಯವನ್ನೂ ರೈತರಿಗೆ ಒದಗಿಸಲಾಗುತ್ತದೆ. ರ್ಯಾಲಿ ನಡೆಸುವ ಸ್ಥಳಗಳಲ್ಲಿನ ತಾಲೂಕು ಕೇಂದ್ರ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ.
ಈಶ ಫೌಂಡೇಶನ್ನ ಕ್ಷೇತ್ರಾಧಿಕಾರಿಗಳು ಮತ್ತು ಇತರ ಪರಿಣಿತರು ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಈ ವೇಳೆ ಕಾಡು ಬೆಳೆಸುವಲ್ಲಿ ಯತ್ನಿಸಿ ಯಶಸ್ವಿಯಾದವರ ಸಾಹಸ ಗಾಥೆಯನ್ನೂ ವಿವರಿಸಲಾಗುತ್ತದೆ. ಈ ವಾಹನ ರ್ಯಾಲಿಯ ಜೊತೆಗೆ ಸೆಪ್ಟೆಂಬರ್ನಲ್ಲಿ ಸದ್ಗುರು, ಕಾವೇರಿ ಉಗಮ ಸ್ಥಾನ ತಲಕಾವೇರಿಯಿಂದ ಬೈಕ್ ರ್ಯಾಲಿ ನಡೆಸಲಿದ್ದಾರೆ. ತಲಕಾವೇರಿಯಿಂದ ಪೂಂಪೂಹರದವರೆಗೆ ಬೈಕ್ ರ್ಯಾಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA