ಪ್ರತಿ ತಾಲೂಕಿನಲ್ಲೂ ಮಹಿಳಾ ಸಹಕಾರಿ ಸಂಘ ಪ್ರಾರಂಭ; ಸರ್ಕಾರದಿಂದಲೇ ಬಂಡವಾಳ:ಸಿಎಂ ಬೊಮ್ಮಾಯಿ
Team Udayavani, Mar 20, 2022, 4:39 PM IST
ಬೆಂಗಳೂರು: ಸಹಕಾರಿ ಸಂಘ ಬಹಳ ದೊಡ್ಡದಾಗಿದೆ. ದುಡಿಯುವ ವರ್ಗದ ಭಾಗವಹಿಸಬೇಕು. ಮಹಿಳೆಯರು ಮೊದಲು ಭಾಗವಹಿಸಬೇಕು. ಸಾಕಷ್ಟು ಮಹಿಳೆಯರ ಸಂಘ ಇದೆ. ವಿವಿಧ ಉದ್ದೇಶ ಸಹಕಾರಿ ಮಹಿಳಾ ಸಂಘ ಪ್ರತಿ ತಾಲೂಕಿನಲ್ಲಿ ಪ್ರಾರಂಭ ಮಾಡುತ್ತೇವೆ. ಸರ್ಕಾರದ ಕಡೆಯಿಂದ ಬಂಡವಾಳ ಹಾಕುತ್ತೇವೆ. ಮಹಿಳೆಯರು ಕೂಡ ಸರ್ಕಾರದ ಸಹಾಯದಿಂದ ಮೇಲೆ ಬರಬೇಕು. ಇದರಿಂದ ರಾಜ್ಯ ಕೂಡ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಹಕಾರ ರತ್ನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ಸಹಕಾರ ಎಂಬುವುದು ಬದುಕಿನ ಒಂದು ಭಾಗ. ಮನುಷ್ಯ ಸಂಘ ಜೀವಿ, ಒಬ್ಬಂಟಿಗನಾಗಿ ಬದುಕಲಾಗಲ್ಲ, ಮನುಷ್ಯ ಸಂಘ ಜೀವಿಯಾಗಿದ್ದಾರೆ. ಸಹಕಾರ ಇಲ್ಲದಿದ್ದರೆ ಸಮಾಜ ಹಾಗೂ ಬದುಕು ಇರಲ್ಲ. ಇದನ್ನು ಅರ್ಥ ಮಾಡಿಕೊಳ್ಳಲು ಆಗದಿದ್ದರೆ ಪ್ರಗತಿ ಅಸಾಧ್ಯ ಎಂದರು.
ಸಹಕಾರಿ ರಂಗದಲ್ಲಿ ಗುಜರಾತ್ ಹಾಗೂ ಮಹಾರಾಷ್ಟ್ರ ಮುಂದಿದೆ. ಸಹಕಾರಿ ಸಂಘದಲ್ಲಿ ನಮ್ಮ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿ ಬರಬೇಕು. ಅಮಿತ್ ಶಾ ಕೂಡ ಸಹಕಾರಿ ರಂಗದಿಂದ ಬಂದವರು. ಅಹಮದಾಬಾದ್ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಈಗ ದೇಶದ ಗೃಹ ಮಂತ್ರಿಯಾಗಿದ್ದಾರೆ ಎಂದರು.
ಇದನ್ನೂ ಓದಿ:ಪೊಲೀಸರಿಂದಲೇ ರಕ್ತ ಚಂದನ ಮಾರಾಟ? ಅಧಿಕಾರ ದುರ್ಬಳಕೆ ಮಾಡಿಕೊಂಡರೆ ಅಧಿಕಾರಿಗಳು
ದುಡ್ಡೇ ದೊಡ್ಡಪ್ಪ ಪದ್ದತಿಯನ್ನು ತೆಗೆದು ಹಾಕಿದ್ದೇನೆ. ದುಡಿಮೆಯೇ ದೊಡ್ಡಪ್ಪ ಅಂತ ಮಾಡಿದ್ದೇನೆ. ಸಹಕಾರಿ ಕ್ಷೇತ್ರ ಬೆಳೆಯಬೇಕು. ಸಹಕಾರಿ ಜೊತೆಗೆ ನಾನಿದ್ದೇನೆ, ಪ್ರತಿಯೊಂದು ಹಂತದಲ್ಲಿ ನಾನು ಇರುತ್ತೇನೆ. ಸರ್ಕಾರ ಕೂಡ ಇರುತ್ತದೆ, ಇನ್ನೂ ಉತ್ತಮ ಕೆಲಸ ಮಾಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ