ಸಭೆ ಸಮಾರಂಭಗಳಿಗೆ ನಿರ್ಬಂಧ ಹಾಕಲು ನಿಯಮ ಜಾರಿ: ಸಿಎಂ ಬೊಮ್ಮಾಯಿ
Team Udayavani, Sep 4, 2021, 11:05 AM IST
ಬೆಂಗಳೂರು: ಕೋವಿಡ್ 19 ಸೋಂಕಿನ ನಡುವೆಯೂ ರಾಜಕೀಯ ಸಭೆ, ಸಮಾರಂಭ, ರಾಲಿಗಳಿಗೆ ಅವಕಾಶ ನೀಡಿರುವ ವಿಚಾರ ಸಾಮಾಜಿಕವಾಗಿ ಟೀಕೆಗಳಿಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಇದನ್ನೆಲ್ಲ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದಿದ್ದಾರೆ.
ಕೋವಿಡ್ ಇದ್ದರೂ ಕೆಲವು ಘಟನೆಗಳು ನಡೆದಿವೆ. ಸಭೆ ಸಮಾರಂಭಗಳಿಗೆ ನಿರ್ಬಂಧ ಹಾಕಲು ನಿಯಮ ತರುತ್ತೇವೆ. ಈ ಕುರಿತು ಪುನ: ಮಾರ್ಗಸೂಚಿ ಜಾರಿ ಮಾಡುತ್ತೇವೆ ಎಂದು ಸಿಎಂ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಾಲಾರಂಭದ ಬಗ್ಗೆಯೂ ಮಾಹಿತಿ ನೀಡಿದರು. ಸದ್ಯ 6,7,8 ನೇ ತರಗತಿಗಳು ಆರಂಭ ಮಾಡುತ್ತಿದ್ದೇವೆ. ಇದರ ಫಲಿತಾಂಶ ನೋಡಿಕೊಂಡು 1 ರಿಂದ 5 ನೇ ತರಗತಿಗಳ ಆರಂಭ ಬಗ್ಗೆ ಚರ್ಚೆ ಮಾಡುತ್ತೇವೆ. ಸದ್ಯದವರೆಗೂ 1-5 ನೇ ತರಗತಿಗಳ ಬಗ್ಗೆ ಚರ್ಚೆ ಮಾಡಿಲ್ಲ ಎಂದರು.
ಇದನ್ನೂ ಓದಿ:ಕೋವಿಡ್ 19 : ಕಳೆದೊಂದು ದಿನದಲ್ಲಿ 42 ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲು | 330 ಮಂದಿ ಬಲಿ
ಪ್ರವಾಹ ಹಾನಿ ಅಧ್ಯಯನ ತಂಡದ ಭೇಟಿಯ ಬಗ್ಗೆ ಮಾತನಾಡಿದ ಸಿಎಂ, ಕೇಂದ್ರ ಅಧ್ಯಯನ ತಂಡ, ಅಧಿಕಾರಿಗಳ ಜತೆ ಇವತ್ತು ಪ್ರಾಥಮಿಕ ಸಭೆ ಮಾಡುತ್ತೇನೆ. ಅಧ್ಯಯನ ತಂಡ ಪ್ರವಾಸ ಹೋಗಿ ಬಂದ ನಂತರವೂ ಸಭೆ ಮಾಡುತ್ತೇವೆ. ಕೇಂದ್ರದ ತಂಡದ ಜತೆ ನಮ್ಮ ಅಧಿಕಾರಿಗಳೂ ಪ್ರವಾಸ ಹೋಗುತ್ತಾರೆ. ನಮ್ಮಲ್ಲಿರುವ ವರದಿ, ಮಾಹಿತಿಗಳನ್ನು ಅವರಿಗೆ ಕೊಟ್ಟು ಹಾನಿ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಅತಿ ಹೆಚ್ಚು ಹಾನಿಯಾದ ಕಡೆ ಪ್ರವಾಸ ಮಾಡಲಿದ್ದು, ಎನ್ ಡಿಆರ್ ಎಫ್ ನಿಧಿಯಡಿ ನಮಗೆ ಸಿಗಬೇಕಾದ ಅನುದಾನ ಸಿಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ